ಗುರುಮಠಕಲ್ ನಲ್ಲೂ ಅರಳಿದ ಕಮಲ!


Team Udayavani, May 24, 2019, 9:51 AM IST

24-May-1

ಕಡತ ಚಿತ್ರ

ಯಾದಗಿರಿ: ಸೋಲಿಲ್ಲದ ಸರದಾರನಿಗೆ ಈ ಬಾರಿ ಗುರುಮಠಕಲ್ ಮತಕ್ಷೇತ್ರದ ಜನರು ಕೈ ಹಿಡಿಯಲಿಲ್ಲವೇ? ಎನ್ನುವ ಚರ್ಚೆ ಎಲ್ಲೆಡೆ ಶುರುವಾಗಿದೆ.

ಈ ಹಿಂದಿನ ಚುನಾವಣೆಗಳಲ್ಲಿ ಗುರುಮಠಕಲ್ ಇತಿಹಾಸ ಮೆಲುಕು ಹಾಕಿದರೆ ಯಾವತ್ತು ಇಲ್ಲಿನ ಮತದಾರರು ಖರ್ಗೆ ಅವರನ್ನು ಕೈ ಬಿಟ್ಟಿದ್ದೇ ಇಲ್ಲ. ಆದರೆ ಈ ಬಾರಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿರುವುದರಿಂದ ಗುರುಮಠಕಲ್ ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ಜೆಡಿಎಸ್‌ ಶಾಸಕ ನಾಗನಗೌಡ ಕಂದಕೂರ ಕೂಡ ಬೆಂಬಲ ನೀಡಿದರೂ ಗುರುಮಠಕಲ್ ಕ್ಷೇತ್ರದಲ್ಲಿ ಡಾ| ಖರ್ಗೆ ಅವರಿಗಿಂತ ಡಾ| ಉಮೇಶ ಜಾಧವ್‌ 17 ಸಾವಿರ ಮತಗಳನ್ನು ಹೆಚ್ಚಿಗೆ ಪಡೆದಿದ್ದಾರೆ.

ರಾಜ್ಯದಲ್ಲಿ ಹೈ ವೋಲೆrೕಜ್‌ ಕದನ ಏರ್ಪಟ್ಟಿದ್ದ ಕಲಬುರಗಿ ಲೋಕಸಭೆ ಕ್ಷೇತ್ರದ ಮೆಲೆಯೇ ಎಲ್ಲರ ಕಣ್ಣು ನೆಟ್ಟಿತ್ತು. ಹಲವು ಸಮೀಕ್ಷೆಗಳ ಪ್ರಕಾರ ಕಾಂಗ್ರೆಸ್‌ ಗೆದ್ದು ಬೀಗುತ್ತದೆ ಎಂದಿದ್ದರೆ ಇನ್ನೂ ಕೆಲವರು ಏಜೆನ್ಸಿಗಳ ಪ್ರಕಾಶ ಕಲಬುರಗಿ 50-50 ಎನ್ನುವ ಅನುಮಾನವನ್ನು ಸರ್ವೇ ವರದಿಗಳು ಹೊರಬಿದ್ದಿದ್ದವು.

ಈ ಹಿಂದೆ 1972ರಿಂದ ಮಲ್ಲಿಕಾರ್ಜುನ ಖರ್ಗೆ ಗುರುಮಠಕಲ್ ಕ್ಷೇತ್ರದಿಂದ ಸತತ 8 ಬಾರಿ ಆರಿಸಿ ಬಂದು ಕಾಂಗ್ರೆಸ್‌ ಭದ್ರಕೋಟೆಯನ್ನಾಗಿಸಿದ್ದರು. 2008ರಲ್ಲಿ ಸಾಮಾನ್ಯ ಕ್ಷೇತ್ರವಾದ ಬಳಿಕ ಬಾಬುರಾವ್‌ ಚಿಂಚನಸೂರ ಅವರನ್ನು ಕ್ಷೇತ್ರಕ್ಕೆ ಕರೆ ತಂದಿದ್ದರು. ಚಿಂಚನಸೂರ 2008 ಮತ್ತು 2013ರಲ್ಲಿ ಜನರ ಆಶೀರ್ವಾದದಿಂದ ವಿಧಾನಸಭೆಗೆ ತೆರಳಿದ್ದರು. ಡಾ| ಖರ್ಗೆ ಅವರ ಕಟ್ಟಾ ಅನುಯಾಯಿಯಾಗಿದ್ದ ಚಿಂಚನಸೂರ 2018ರ ವಿಧಾನಸಭೆ ಚುನಾವಣೆಯಲ್ಲಿ ಸೋಲುಂಡು, ಖರ್ಗೆ ವಿರುದ್ಧದ ಅಸಮಾಧಾನದಿಂದ ಬಂಡಾಯವೆದ್ದು ಪಕ್ಷ ತೊರೆದು ಲೋಕಸಭೆ ಚುನಾವಣೆಯಲ್ಲಿ ಬಹಿರಂಗವಾಗಿ ವಾಕ್ಸಮರದಲ್ಲಿ ತೊಡಗಿದ್ದನ್ನು ಸ್ಮರಿಸಬಹುದು.

ಕೆಲಸ ಮಾಡಲಿಲ್ಲ ಮೈತ್ರಿ ಸರ್ಕಸ್‌: ಸುಮಾರು ವರ್ಷಗಳಿಂದಲೂ ಖರ್ಗೆ ವಿರೋಧಿಯಾಗಿ ಗುರುಮಠಕಲ್ನಲ್ಲಿ ಜೆಡಿಎಸ್‌ ಪಕ್ಷ ಸಂಘಟನೆಗೆ ತೊಡಗಿದ್ದ ನಾಗನಗೌಡ ಕಂದಕೂರ, ಖರ್ಗೆ ಅವರನ್ನು ಬೆಂಬಲಿಸುವುದರ ಕುರಿತು ಹಲವು ಪ್ರಶ್ನೆಗಳು ಎದುರಾಗಿದ್ದವು. ಕೊನೆಗೆ ಖರ್ಗೆಯೇ ಸ್ವತಃ ನಾಗನಗೌಡ ಮನೆಗೆ ಆಗಮಿಸಿ ಮೈತ್ರಿ ಧರ್ಮದಂತೆ ಬೆಂಬಲಿಸಲು ಮನವಿ ಮಾಡಿಕೊಂಡಿದ್ದರು. ನಾಗನಗೌಡ ಕಂದಕೂರ ಮತ್ತು ಅವರ ಪುತ್ರ ಬೆರಳೆಣಿಯಷ್ಟು ಪ್ರಚಾರ ಸಭೆಗಳಲ್ಲಿ ಭಾಗವಹಿಸಿ ಮತಯಾಚಿಸಿದ್ದರು. ಆದರೂ ಗುರುಮಠಕಲ್ನಲ್ಲಿ ಮೈತ್ರಿ ಕೆಲಸ ಮಾಡಿಲ್ಲ ಎನ್ನಲಾಗುತ್ತಿದ್ದು, ಇದರ ಪರಿಣಾಮವೇ ಕ್ಷೇತ್ರದಲ್ಲಿ ಕಾಂಗ್ರೆಸ್‌ಗಿಂತ ಬಿಜೆಪಿ ಹೆಚ್ಚಿನ ಮತ ಗಳಿಸಿದೆ ಎನ್ನಲಾಗಿದೆ.

ಈ ಹಿಂದಿನಿಂದಲೂ ಗುರುಮಠಕಲ್ ಇತಿಹಾಸದಲ್ಲಿ ಖರ್ಗೆ ಸ್ಥಳಯ ನಾಯಕರನ್ನು ಚುನಾವಣೆ ಸಂದರ್ಭದಲ್ಲಿ ಬಳಸಿಕೊಂಡಿದ್ದಾರೆ. ಆದರೇ ಯಾರನ್ನೂ ಬೆಳೆಸಿಲ್ಲ ಎನ್ನುವುದು ಕಾಂಗ್ರೆಸ್‌ ಹಿರಿಯ ಮುಖಂಡರಲ್ಲಿಯೇ ಬಹಿರಂಗ ಅಸಮಾಧಾನದಿಂದ ವಿಧಾನಸಭೆ ಚುನಾವಣೆಯಲ್ಲಿ ಹಲವು ಹಿರಿಯ ಮುಖಂಡರು ಜೆಡಿಎಸ್‌ ಸೇರಿದ್ದರು. ಖರ್ಗೆ ಅವರ ರಾಜಕೀಯ ತಂತ್ರಗಾರಿಕೆಯೇ ಅವರಿಗೆ ಮುಳುವಾಗಿ ಪರಿಣಮಿಸಿತೇ ಎನ್ನುವ ಆತ್ಮಾವಲೋಕನದಲ್ಲಿ ಕಾರ್ಯಕರ್ತರು ತೊಡಗಿದ್ದಾರೆ.

ನಾಯಕತ್ವ ಕೊರತೆ
ಗುರುಮಠಕಲ್‌ ಕಾಂಗ್ರೆಸ್‌ನಲ್ಲಿ ಈವರೆಗೆ ರಾಜಕೀಯ ಸನ್ನಿವೇಶದಲ್ಲಿ ಯಾರು ರಾಜಕೀಯವಾಗಿ ಗಟ್ಟಿಯಾಗಿಲ್ಲ. ಇಲ್ಲಿನ ರಾಜಕಾರಣಿಗಳು ಪಟ್ಟಣಕ್ಕೆ ಮಾತ್ರ ಸೀಮಿತವಾಗಿದ್ದು, ಕಾಂಗ್ರೆಸ್‌ ಭದ್ರಕೋಟೆಯಿಂದ ಚಿಂಚನಸೂರ ಔಟಾದ ಬಳಿಕ ಕಾಂಗ್ರೆಸ್‌ ಯಜಮಾನನಿಲ್ಲದ ಮನೆಯಂತಾಗಿದೆ. ಪ್ರಮುಖ ನಾಯಕನಿಲ್ಲದ ಕ್ಷೇತ್ರದಲ್ಲಿ ಕಾರ್ಯತರ್ಕರನ್ನು ಒಗ್ಗೂಡಿಸುವುದು ಕಷ್ಟಕರ ಎನ್ನುವ ಸ್ಥಿತಿ ಕಾಂಗ್ರೆಸ್‌ಗೆ ಎದುರಾಗಿದೆ.

ಅನೀಲ ಬಸೂದೆ

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.