ಗುಣಮಟ್ಟದ ಸಸಿ ಮಾರಾಟ ಮಾಡಿ

•ಸಸ್ಯ ಸಂತೆಗೆ ಶಾಸಕ ಕಂದಕೂರ ಚಾಲನೆ •ತೋಟಗಾರಿಗೆ ಬೆಳೆ ಕುರಿತು ಮಾರ್ಗದರ್ಶನ ನೀಡಿ

Team Udayavani, Aug 9, 2019, 4:06 PM IST

9-Agust-35

ಯಾದಗಿರಿ: ಕೇಂದ್ರ ಬಸ್‌ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಸಸ್ಯ ಸಂತೆಗೆ ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಚಾಲನೆ ನೀಡಿದರು

ಯಾದಗಿರಿ: ತೋಟಗಾರಿಕೆ ಇಲಾಖೆ, ಕರ್ನಾಟಕ ರಾಜ್ಯ ತೋಟಗಾರಿಕೆ ಅಭಿವೃದ್ಧಿ ಏಜೆನ್ಸಿ ವತಿಯಿಂದ ತೋಟಗಾರಿಕೆ ಪಿತಾಮಹ ಡಾ| ಎಂ.ಎಚ್. ಮರಿಗೌಡ ಅವರ ಜನ್ಮದಿನದ ಅಂಗವಾಗಿ ತೋಟಗಾರಿಕೆ ದಿನಾಚರಣೆ ಪ್ರಯುಕ್ತ ನಗರದ ಹೊಸ ಬಸ್‌ ನಿಲ್ದಾಣ ಆವರಣದಲ್ಲಿ ಮೂರು ದಿನಗಳ ವರೆಗೆ ಆಯೋಜಿಸಿರುವ ಸಸ್ಯ ಸಂತೆಗೆ ಶಾಸಕ ನಾಗನಗೌಡ ಕಂದಕೂರ ಚಾಲನೆ ನೀಡಿದರು.

ನಂತರ ಸಸ್ಯ ಸಂತೆಯಲ್ಲಿ ಜಿಲ್ಲೆ ತೋಟಗಾರಿಕೆ ಕ್ಷೇತ್ರಗಳು ಮತ್ತು ನರ್ಸರಿಗಳಲ್ಲಿ ಉತ್ಪಾದಿಸಿದ ಕಸಿ-ಸಸಿಗಳು ಹಾಗೂ ಇಲಾಖೆಯ ಇತರೆ ಜೈವಿಕ ಪರಿಕರಗಳ ಪ್ರದರ್ಶನ ಮತ್ತು ಕಸಿ ಸಸಿಗಳ ಮಾರಾಟ ವೀಕ್ಷಿಸಿದ ಶಾಸಕರು, ನಿಗದಿಪಡಿಸಿದ ರಿಯಾಯಿತಿ ದರದಲ್ಲಿ ಗುಣಮಟ್ಟದ ಸಸಿಗಳನ್ನು ಮಾತ್ರ ಮಾರಾಟ ಮಾಡಬೇಕು. ಪ್ರಸ್ತುತ ತರಕಾರಿಗಳ ಬೆಲೆ ಗಗನಕ್ಕೇರಿದೆ. ರೈತರು ಕೇವಲ 10 ಗುಂಟೆಯಲ್ಲಿ ತರಕಾರಿ ಬೆಳೆದರೆ ಸುಖ ಜೀವನ ನಡೆಸಬಹುದು. ಈ ನಿಟ್ಟಿನಲ್ಲಿ ರೈತರಿಗೆ ಅಗತ್ಯ ಮಾಹಿತಿ ಜತೆಗೆ ಮಾರ್ಗದರ್ಶನ ನೀಡುವುದು ಅವಶ್ಯಕ. ಇಲಾಖೆಯಿಂದ ಸಿಗುವ ಸೌಲಭ್ಯಗಳ ಕುರಿತಂತೆ ರೈತರಿಗೆ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಗುಣಮಟ್ಟದ ಯೋಗ್ಯ ತಳಿಗಳ ಕಸಿ ಸಸಿಗಳನ್ನು ಕಡಿಮೆ ದರದಲ್ಲಿ ರೈತರಿಗೆ ಮಾರಾಟ ಮಾಡುವುದು ಹಾಗೂ ಜಾಗೃತಿ ಮೂಡಿಸುವುದು ಸಸ್ಯ ಸಂತೆ ಮೂಲ ಉದ್ದೇಶವಾಗಿದೆ. ರೈತರು, ಸಾರ್ವಜನಿಕರು, ಪ್ರಯಾಣಿಕರು ಸಸ್ಯ ಸಂತೆ ಪ್ರಯೋಜನ ಪಡೆಯಬೇಕು ಎಂದು ಮನವಿ ಮಾಡಿದರು.

ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ ಬಾಬು ಮಾತನಾಡಿ, ಜಿಲ್ಲೆಯ ತೋಟಗಾರಿಕೆ ಕ್ಷೇತ್ರಗಳಾದ ಯಾದಗಿರಿ ತಾಲೂಕಿನ ಹ್ತತಿಕುಣಿ, ಹುಣಸಗಿ ತಾಲೂಕಿನ ನಾರಾಯಣಪುರ ಹಾಗೂ ಯಾದಗಿರಿ ಜಿಲ್ಲಾ ನರ್ಸರಿ ಮತ್ತು ಸುರಪುರ ನರ್ಸರಿಯಲ್ಲಿ ಗುಣಮಟ್ಟದ ವಿವಿಧ ಕಸಿ ಸಸಿಗಳು ಲಭ್ಯವಿರುತ್ತವೆ. ಅಲ್ಲದೆ, ರೈತರಿಗೆ ಬೇಕಾದ ತಳಿಯ ತರಕಾರಿ ಸಸಿಗಳನ್ನು ತಯಾರಿಸಿಕೊಡಲು ಒಂದು ತಿಂಗಳು ಮುಂಚಿತವಾಗಿ ಸಂಬಂಧಿಸಿದ ಕ್ಷೇತ್ರಗಳಿಗೆ ತಿಳಿಸಿದರೆ ಇಲಾಖೆ ನಿಗದಿಪಡಿಸಿದ ದರ ಒಂದಕ್ಕೆ 50 ಪೈಸೆಯಂತೆ ತಯಾರಿಸಿಕೊಡಲಾಗುವುದು ಎಂದು ಮಾಹಿತಿ ನೀಡಿದರು.

ನಿರಂತರ ರಾಸಾಯನಿಕ ಗೊಬ್ಬರಗಳ ಬಳಕೆಯಿಂದ ಮಣ್ಣಿನ ಜೈವಿಕ ಸ್ಥರದಲ್ಲಿ ವ್ಯತ್ಯಾಸ ಉಂಟಾಗುತ್ತಿದೆ. ವಾತಾವರಣ ಹಾಗೂ ಮುಂದಿನ ಪೀಳಿಗೆ ಕೃಷಿ ಪದ್ಧತಿ ಮೇಳೆ ವ್ಯತಿರಿಕ್ತ ಪರಿಣಾಮ ಉಂಟಾಗುವ ಸಾಧ್ಯತೆ ಇರುತ್ತದೆ. ಈ ನಿಟ್ಟಿನಲ್ಲಿ ಮಣ್ಣಿನ ಜೀವ ವೈವಿಧ್ಯತೆ ಕಾಪಾಡಲು ವಿವಿಧ ಜೈವಿಕ ಪರಿಕರ ವೃದ್ಧಿಪಡಿಸಿ ರೈತರಿಗೆ ನಿಗದಿತ ದರದಲ್ಲಿ ವಿತರಿಸಲಾಗುತ್ತಿದೆ. ಜೈವಿಕ ಗೊಬ್ಬರ, ನಿಯಂತ್ರಕಗಳಾದ ಟ್ರೆ ೖಕೋಡರ್ಮಾ ಪ್ರತಿ ಕೆಜಿಗೆ 120 ರೂ., ಸೊಡೋಮೊನಾಸ್‌ 120 ರೂ., ಪಿಎಸ್‌ಬಿ 50 ರೂ., ಅಜಟೋಬ್ಯಾಕ್ಟರ್‌ 50 ರೂ., ಅರ್ಕಾ ಮೈಕ್ರೋಬಿಯಲ್ ಕನ್ಸಾರ್ಷಿಯಂ 100 ರೂ., ಬಯೋಮಿಕ್ಸ್‌ 20 ರೂ., ವ್ಯಾಮ್‌ 25 ರೂ. ದರ ನಿಗದಿ ಇರುತ್ತದೆ. ಸಸ್ಯ ಸಂತೆಯಲ್ಲಿ ಇವುಗಳ ಪ್ರದರ್ಶನ ಮಾಡಲಾಗುತ್ತಿದೆ ಎಂದು ವಿವರಿಸಿದರು. ಸಸ್ಯ ಸಂತೆಯಲ್ಲಿ ಸಸಿಗಳನ್ನು ಕಸಿ ಮಾಡುವ ವಿಧಾನದ ಬಗ್ಗೆ ರೈತರಿಗೆ ಪ್ರಾತ್ಯಕ್ಷಿಕೆ ನೀಡಲಾಗುತ್ತಿದೆ ಎಂದು ಹೇಳಿದರು.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ವೈಜಯಂತಾ ಕದಂ, ಟಿ.ಆಂಜನೇಯ, ಸಹಾಯಕ ತೋಟಗಾರಿಕೆ ನಿರ್ದೇಶಕ ಮೊಹಮ್ಮದ್‌ ಸಮಿಯುದ್ದೀನ್‌, ಶಿವುಕುಮಾರ, ಸಹಾಯಕ ತೋಟಗಾರಿಕೆ ಅಧಿಕಾರಿಗಳಾದ ನಿಸಾರ್‌ ಅಹ್ಮದ್‌, ಶ್ರೀಧರ ಸೇರಿದಂತೆ ಇಲಾಖೆ ಸಿಬ್ಬಂದಿ ಹಾಗೂ ರೈತರು, ಸಾರ್ವಜನಿಕರು ಇದ್ದರು.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.