ಉಳ್ಳಾಗಡ್ಡಿ ಬೆಲೆ ಕೆಜಿಗೆ 80 ರೂ!

ಕ್ವಿಂಟಲ್‌ಗೆ 7 ಸಾವಿರ ರೂ. ಬಂಗಾರದಂತೆ ತೂಕ ಮಾಡುತ್ತಿದ್ದಾರೆ ವ್ಯಾಪಾರಸ್ಥರು

Team Udayavani, Nov 29, 2019, 12:13 PM IST

29-November-8

ಅನೀಲ ಬಸೂದೆ
ಯಾದಗಿರಿ:
ಉಳ್ಳಾಗಡ್ಡಿ ಇಷ್ಟು ದಿನ ಮಹಿಳೆಯರಿಗೆ ಮಾತ್ರ ಕಣ್ಣೀರು ತರಿಸುತ್ತಿತ್ತು. ಈಗ ಖರೀದಿಸುವವರಿಗೂ ಕಣ್ಣೀರು ತರಿಸುವಂತಾಗಿದೆ. ನಿತ್ಯ ಅಡುಗೆಗೆ ಉಪಯೋಗಿಸಲಾಗುವ ಉಳ್ಳಾಗಡ್ಡಿ ಬೆಲೆ ಒಂದು ಕೆಜಿಗೆ ಕಿರುಕುಳ ಮಾರುಕಟ್ಟೆಯಲ್ಲಿ 80 ರೂ. ಕಳೆದ ಒಂದು ವಾರದ ಹಿಂದೆ 50 ರೂ. ಇದ್ದ ಉಳ್ಳಾಗಡ್ಡಿ ವಾರದಲ್ಲಿಯೇ 30 ರೂ. ಏರಿಕೆಯಾಗಿ ಗೃಹಿಣಿಯರಿಗೆ ಶಾಕ್‌ ನೀಡಿದೆ.

ಪ್ರತಿ ಮನೆಯಲ್ಲಿಯೂ ಎಲ್ಲ ಆಹಾರ ಪದಾರ್ಥಕ್ಕೆ ಉಳ್ಳಾಗಡ್ಡಿ ಬೇಕೆ ಬೇಕು. ಅಂತಹದ್ದರಲ್ಲಿ ಬೆಲೆ ಗಗನಕ್ಕೇರಿದ್ದು. ಬಳಕೆ ನಿಲ್ಲುಸುವ ಪರಿಸ್ಥಿತಿ ತಂದೊಡ್ಡಿದೆ. ತರಕಾರಿಗಳಿಗಿಂತಲೂ ಉಳ್ಳಾಗಡ್ಡಿ ಬಲು ದುಬಾರಿಯಾಗಿದ್ದು ಅಡುಗೆ ರುಚಿ ಕಳೆದುಕೊಳ್ಳುತ್ತಿದೆ. ಜಿಲ್ಲೆಯಲ್ಲಿ ಮುಂಗಾರಿನಲ್ಲಿ 89 ಹೆಕ್ಟೇರ್‌ ಉಳ್ಳಾಗಡ್ಡಿ ಬಿತ್ತನೆ ಗುರಿಯಲ್ಲಿ ರೈತರು 81 ಹೆಕ್ಟೇರ್‌ ಬಿತ್ತನೆ ಮಾಡಿದ್ದಾರೆ. ಹಿಂಗಾರಿನಲ್ಲಿ ಈಗಷ್ಟೇ ಬಿತ್ತನೆ ಆರಂಭವಾಗುತ್ತಿದೆ. ಮಳೆಗಾಲದಲ್ಲಿ ಬೆಳೆದ ಕೆಂಪು ಉಳ್ಳಾಗಡ್ಡಿಯೂ ಮಾರುಕಟ್ಟೆಗೆ ಲಗ್ಗೆ ಇಟ್ಟಿತ್ತು. ಇದು ಹೆಚ್ಚು ದಿನ ಉಳಿಯದೇ ಬೇಗ ಕೊಳೆಯುವುದರಿಂದ ಇದನ್ನು ಖರೀದಿಸಲು ಜನ ಹಿಂಜರಿಯುತ್ತಿದ್ದು ತಾತ್ಕಾಲಿಕವಾಗಿ ಬೇಕಿರುವಷ್ಟು ಮಾತ್ರ ಖರೀದಿಸುತ್ತಿರುವುದು ಕಂಡು ಬರುತ್ತಿದೆ.

ಸದ್ಯ ಮಾರುಕಟ್ಟೆಯಲ್ಲಿ ಕ್ವಿಂಟಲ್‌ ಉಳ್ಳಾಗಡ್ಡಿ ಬೆಲೆ 7 ಸಾವಿರ ರೂ. ಗಡಿಗೆ ತಲುಪಿದೆ. ಚಿಲ್ಲರೆ ಮಾರಾಟಗಾರರು ತಮ್ಮ ಲಾಭ ನೋಡಿಕೊಂಡು 80 ರೂ. ಕೆಜಿಯಂತೆ ಬಂಗಾರದಂತೆ ತೂಕ ಮಾಡುತ್ತಿದ್ದಾರೆ. ಒಂದು ಕೆಜಿ ಉಳ್ಳಾಗಡ್ಡಿ ಖರೀದಿಸಿದರೆ ಒಂದು ಕೂಡ ಹೆಚ್ಚು ನೀಡುತ್ತಿಲ್ಲ.

ಹೋಟೆಲ್‌ಗ‌ಳಲ್ಲಿ ಉಳ್ಳಾಗಡ್ಡಿ ಬಂದ್‌: ಸಾಮಾನ್ಯವಾಗಿ ರೆಸ್ಟೋರೆಂಟ್‌, ಹೋಟೆಲ್‌, ಧಾಬಾಗಳಲ್ಲಿ ಊಟಕ್ಕೆ ಹೋದಾಗ ಉಳ್ಳಾಗಡ್ಡಿ ಕೊಡುತ್ತಾರೆ. ಸದ್ಯ ಉಳ್ಳಾಗಡ್ಡಿ ಬೆಲೆ ಏರಿಕೆ ಬಿಸಿ ಹೋಟೆಲ್‌ಗ‌ಳಿಗೆ ತಟ್ಟಿದ್ದು, ಉಳ್ಳಾಗಡ್ಡಿ ಕೊಡುವುದನ್ನು ನಿಲ್ಲಿಸಿಬಿಟ್ಟಿದ್ದಾರೆ. ಸದ್ಯ ಮಾರುಕಟ್ಟೆಯಲ್ಲಿ ಹಳೆ ಉಳ್ಳಾಗಡ್ಡಿ ಸಂಗ್ರಹಿಸಿಟ್ಟು ಬೇಡಿಕೆ ಹೆಚ್ಚಾದಾಗ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎನ್ನಲಾಗಿದೆ. ಈಗ ಬಿತ್ತನೆ ಆರಂಭವಾಗಿದ್ದು, ಹೊಸ ಉಳ್ಳಾಗಡ್ಡಿ ಬರುವುದಕ್ಕೆ ಇನ್ನೂ ಕನಿಷ್ಠ ಒಂದೂವರೆ ತಿಂಗಳು ಬೇಕು ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.