ವಿಕಲಚೇತನರ ಅಭಿವೃದ್ಧಿಗೆ ಶೇ. 5ರಷ್ಟು ಅನುದಾನ ಮೀಸಲಿಡಿ
ಸ್ನೇಹಮಯ ವಾತಾವರಣ ನಿರ್ಮಿಸಲು ಕರೆ
Team Udayavani, Jul 13, 2019, 3:30 PM IST
ಯಾದಗಿರಿ: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಎಪಿಡಿ ಸಂಸ್ಥೆಯ ವಕಾಲತ್ತು ವಿಭಾಗದ ಸಹಾಯಕ ನಿರ್ದೇಶಕ ಬಾಬು ಎಸ್. ಮಾಹಿತಿ ನೀಡಿದರು.
ಯಾದಗಿರಿ: ವಿವಿಧ ಇಲಾಖೆಗಳಲ್ಲಿ ವಿಕಲಚೇತನರಿಗಾಗಿ ಶೇ. 5ರಷ್ಟು ಅನುದಾನ ಮೀಸಲಿಟ್ಟು ಅನುಷ್ಠಾನಗೊಳಿಸಬೇಕು ಎಂದು ದಿ ಅಸೋಸಿಯೇಷನ್ ಆಫ್ ಪೀಪಲ್ ವಿಥ್ ಡಿಸೆಬಿಲಿಟಿ (ಎಪಿಡಿ) ಸಂಸ್ಥೆಯ ವಕಾಲತ್ತು ವಿಭಾಗದ ಸಹಾಯಕ ನಿರ್ದೇಶಕ ಬಾಬು ಎಸ್. ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಎಪಿಡಿ ಸಂಸ್ಥೆಯ ಸಹಯೋಗದಲ್ಲಿ ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ಕಾಯ್ದೆ-2016 ಹಾಗೂ ಶೇ. 5ರಷ್ಟು ಅನುದಾನದ ಅನುಷ್ಠಾನದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಪಾತ್ರ ಮತ್ತು ಜವಾಬ್ದಾರಿ ಕುರಿತು ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಇಲಾಖೆಗಳಲ್ಲಿ ವಿಕಲಚೇತನರಿಗೆ ಸ್ನೇಹಮಯ ವಾತಾವರಣ ನಿರ್ಮಿಸಿ, ಸಮಾನತೆಯಿಂದ ಕಾಣಬೇಕು ಎಂದು ಸಲಹೆ ನೀಡಿದ ಅವರು, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ-2016ರಡಿ ಸರ್ವತೋಮುಖ ಅಭಿವೃದ್ಧಿ ಅಂದರೆ ಶಿಕ್ಷಣ, ಪುನರ್ವಸತಿ, ಸಾಮಾಜಿಕ ಭದ್ರತೆ, ಉದ್ಯೋಗಗಳಲ್ಲಿ ಅವಕಾಶಗಳನ್ನು ಕಲ್ಪಿಸಿ, ಸಮಾಜದ ಮುಖ್ಯ ವಾಹಿನಿಗೆ ವಿಕಲಚೇತನರನ್ನು ತರುವ ನಿಟ್ಟಿನಲ್ಲಿ ಅಂಗವಿಕಲ ವ್ಯಕ್ತಿಗಳ ಅಧಿನಿಯಮ-1995ರ ಬದಲಿಗೆ ಪರಿಷ್ಕೃತ 2016ರ ಅಧಿನಿಯಮವನ್ನು ರೂಪಿಸಲಾಗಿದೆ. ಈ ಅಧಿನಿಯಮದಡಿ ಒಟ್ಟು 20 ವಿವಿಧ ಬಗೆಯ ಅಂಗವಿಕಲತೆಯನ್ನು ಗುರುತಿಸಲಾಗಿದೆ ಎಂದು ವಿವರಿಸಿದರು.
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ಶರಣಪ್ಪ ಪಾಟೀಲ ಮಾತನಾಡಿ, ವಿಕಲಚೇತನರಿಗಾಗಿ ಇರುವ ಇಲಾಖೆ ಯೋಜನೆಗಳು ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಎಪಿಡಿ ಸಂಸ್ಥೆಯ ವಕಾಲತ್ತು ವಿಭಾಗದ ಹಿರಿಯ ಸಂಯೋಜಕ ಚಿದಾನಂದ ಕೊಳಾರಿ ಕಾರ್ಯಗಾರದ ಕುರಿತು ಹಾಗೂ ಸಂಸ್ಥೆಯ ಯೋಜನೆಗಳ ಕುರಿತು ವಿವರಿಸಿದರು.
ಎಪಿಡಿ ಸಂಸ್ಥೆಯ ವಿಭಾಗೀಯ ವ್ಯವಸ್ಥಾಪಕ ಭರತ್ ನಾಯಕ, ಈರಣ್ಣ ಬಿರಾದಾರ, ಶಿಕ್ಷಣ ಸಂಯೋಜಕ ಮರೇಶಪ್ಪ ಬಾಗಲಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ