- Saturday 14 Dec 2019
ಕೋರ್ ಗ್ರೀನ್ ಸಕ್ಕರೆ ಕಾರ್ಖಾನೆ ಜಪ್ತಿ
•ಕಲಬುರಗಿ-ಬೀದರ ಬೆಳೆಗಾರರಿಂದ ಕಬ್ಬು ಪೂರೈಕೆ•ಜೂನ್ ಕೊನೆ ವಾರ ಕಾರ್ಖಾನೆಗೆ ನೋಟಿಸ್
Team Udayavani, Jul 12, 2019, 4:11 PM IST
ಯಾದಗಿರಿ: ತುಮಕೂರಿನ ಕೋರ್ ಗ್ರೀನ್ ಶುಗರ್ ಕಂಪನಿ ಗೋದಾಮನ್ನು ವಡಗೇರಾ ತಹಶೀಲ್ದಾರ್ ಜಪ್ತಿ ಮಾಡಿದರು.
ಯಾದಗಿರಿ: ಸುಮಾರು ಎಂಟು ತಿಂಗಳಿಂದ ಕಬ್ಬು ಬೆಳೆಗಾರರ ಹಣ ಬಾಕಿ ಇರಿಸಿಕೊಂಡಿದ್ದ ಜಿಲ್ಲೆಯ ವಡಗೇರಾ ತಾಲೂಕು ಕೋರ್ ಗ್ರೀನ್ ಶುಗರ್ ಕಂಪನಿಯ ಅಂದಾಜು 19,600 ಕ್ವಿಂಟಲ್ ಸಕ್ಕರೆ ಇರುವ ಗೋದಾಮನ್ನು ಜಿಲ್ಲಾಡಳಿತ ಬುಧವಾರ ಸಂಜೆ ಜಪ್ತಿ ಮಾಡಿದೆ.
ರೈತರು ಜಿಲ್ಲಾಡಳಿತ ಭವನದ ಎದುರು ನಡೆಸಿದ ಹೋರಾಟದ ಒಂದು ತಿಂಗಳ ಬಳಿಕ ಜಿಲ್ಲಾಡಳಿತ ಜಪ್ತಿ ಮಾಡಿದೆ. ರೈತರಿಗೆ ಸುಮಾರು 70 ಕೋಟಿ ರೂ.ಗಳಷ್ಟು ಬಾಕಿಯಿರಿಸಿಕೊಂಡಿದ್ದ ಕಾರ್ಖಾನೆಗೆ ಜೂನ್ ಕೊನೆ ವಾರ ಜಿಲ್ಲಾಡಳಿತದಿಂದ ನೋಟಿಸ್ ಜಾರಿಯಾದ ಹಿನ್ನೆಲೆಯಲ್ಲಿ ಕಂಪನಿ ರೈತರ ಖಾತೆಗೆ ಹಣ ಜಮಾ ಮಾಡುವ ಕಾರ್ಯ ಚುರುಕುಗೊಳಿಸಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ.
ಮೂಲಗಳ ಪ್ರಕಾರ 70 ಕೋಟಿ ರೂ.ಗಳಲ್ಲಿ ಇನ್ನು 15 ಕೋಟಿ ರೂ. ಪಾವತಿಗೆ ಬಾಕಿಯಿತ್ತು. ಈ ಮಧ್ಯೆಯೇ ವಡಗೇರಾ ತಹಶೀಲ್ದಾರರು ಬುಧವಾರ ಸಂಜೆ ಸಕ್ಕರೆ ಗೋದಾಮು ಜಪ್ತಿ ಮಾಡಿದ್ದಾರೆ.
ಕಬ್ಬು ಕಟಾವು ಮಾಡಿಕೊಂಡು ಸಕಾಲಕ್ಕೆ ಹಣ ಪಾವತಿಸದಿರುವುದು ರೈತರ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಹಂತ ಹಂತವಾಗಿ ರೈತರು ಕಾರ್ಖಾನೆ ಎದುರು ಪ್ರತಿಭಟನೆ ನಡೆಸುತ್ತ ಬಂದಿದ್ದರೂ ಕಂಪನಿ ಆಡಳಿತ ಮಂಡಳಿ ಜಗ್ಗಿರಲಿಲ್ಲ. ಕಳೆದ ಜೂನ್ 4ರಂದು ಕಂಪನಿ ಧೋರಣೆಯಿಂದ ಬೇಸತ್ತ ಕಲಬುರಗಿ, ಬೀದರ ಜಿಲ್ಲೆಯ ನೂರಾರು ರೈತರು ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಕಲಬುರಗಿ ಮತ್ತು ಬೀದರ ಜಿಲ್ಲೆಯ ಹಲವು ಗ್ರಾಮಗಳ 200ಕ್ಕೂ ಹೆಚ್ಚು ರೈತರಿಂದ ನವೆಂಬರ್ನಲ್ಲಿ ಕಬ್ಬು ಕಾರ್ಖಾನೆ ಪಡೆದಿದ್ದು, ರೈತರಿಂದ ಕಬ್ಬು ಕಟಾವು ಮಾಡಿಸಿಕೊಂಡ 15 ದಿನದಲ್ಲಿ ಹಣ ಪಾವತಿ ಮಾಡಬೇಕು ಎಂಬ ನಿಯಮವಿದ್ದರೂ ಕಾರ್ಖಾನೆ ಸಕ್ಕರೆ ಮಾರಾಟವಾಗಿಲ್ಲ ಎಂದು ನೆಪವೊಡ್ಡುತ್ತ ರೈತರನ್ನು ಕಾಡಿಸುತ್ತಿದೆ ಎಂದು ದೂರಿದ್ದರು. ರೈತರಿಗೆ ಪಾವತಿಸದೇ ಬರೀ ವಾಯ್ದೆ ಮೇಲೆ ವಾಯ್ದೆ ನೀಡುತ್ತ ಕಾಲ ಕಳೆಯುತ್ತಿದ್ದು, ಯಾವೊಬ್ಬ ರೈತರ ಖಾತೆಗೂ ಹಣ ಹಾಕುತ್ತಿಲ್ಲ ಎಂದು ರೈತರು ಗೋಳು ತೋಡಿಕೊಂಡಿದ್ದರು.
ಭರವಸೆ ನೀಡಿದ್ದ ಜಿಲ್ಲಾಧಿಕಾರಿ: ಜೂನ್ 4ರಂದು ರೈತರ ಕಷ್ಟ ಆಲಿಸಿದ್ದ ಜಿಲ್ಲಾಧಿಕಾರಿ ಕೂರ್ಮಾರಾವ್ ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಅದರಂತೆ ಜಿಲ್ಲಾಡಳಿತದಿಂದ ಜೂನ್ ಕೊನೆ ವಾರದಲ್ಲಿ ಸಕ್ಕರೆ ಕಾರ್ಖಾನೆಗೆ ನೋಟಿಸ್ ಜಾರಿಗೊಳಿಸಿ 10 ದಿನಗಳಲ್ಲಿ ರೈತರಿಗೆ ಬಾಕಿ ಹಣ ಪಾವತಿಸುವಂತೆ ಸೂಚಿಸಲಾಗಿತ್ತು ಎಂದು ತಿಳಿದು ಬಂದಿದೆ.
ಆಡಳಿತ ಮಂಡಳಿ ಜಿಲ್ಲಾಡಳಿತಕ್ಕೆ 15 ದಿನಗಳ ಕಾಲಾವಕಾಶ ಕೇಳಿತ್ತು ಎನ್ನಲಾಗಿದೆ. ಈ ಮಧ್ಯೆಯೇ ಜಿಲ್ಲಾಡಳಿತ ಆದೇಶದಂತೆ ವಡಗೇರಾ ತಹಶೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಸಕ್ಕರೆ ಗೋದಾಮು ಜಪ್ತಿ ಮಾಡಿದೆ.
ಜಿಲ್ಲಾಡಳಿತ ತನಗೆ ಬರಬೇಕಿರುವ ಕಂದಾಯವನ್ನು ವಸೂಲಿ ಮಾಡಿಕೊಳ್ಳುವುದರ ಜತೆಗೆ ಉಳಿದ ರೈತರ ಹಣವನ್ನು ಶೀಘ್ರ ಪಾವತಿಸುವಂತೆ ಕ್ರಮಕೈಗೊಳ್ಳಲಿ ಎಂದು ರೈತ ಮುಖಂಡರು ಒತ್ತಾಯಿಸಿದ್ದಾರೆ.
ಈ ವಿಭಾಗದಿಂದ ಇನ್ನಷ್ಟು
-
ನಂಜನಗೂಡು: ಪಂಚ ಮಹಾರಥೋತ್ಸವ ಅಂಗವಾಗಿ ಶ್ರೀಕಂಠೇಶ್ವರನ ಸನ್ನಿಧಿಯ ಕಪಿಲಾ ನದಿಯಲ್ಲಿ ಶುಕ್ರವಾರ ಸಡಗರ, ಸಂಭ್ರಮದಿಂದ ಶ್ರೀಕಂಠೇಶ್ವರಸ್ವಾಮಿ ತೆಪ್ಪೋತ್ಸವ...
-
ಮೈಸೂರು: ತೆರಿಗೆ ಹೆಚ್ಚಳದಿಂದ ವಸತಿ ನಿರ್ಮಾಣಕ್ಕೆ ಸಮಸ್ಯೆ ಎದುರಾಗಿದ್ದು, ಮಧ್ಯಮ ಮತ್ತು ಬಡವರ್ಗದ ಜನರು ಅತ್ಯಂತ ಕಡಿಮೆ ವೆಚ್ಚದಲ್ಲಿ ಮನೆ ನಿರ್ಮಿಸಿಕೊಳ್ಳುವುದು...
-
ಚಾಮರಾಜನಗರ: ರೈತರು ಸಾಂಪ್ರದಾಯಿಕ ವಿಧಾನದ ಕೃಷಿಗೇ ಅವಲಂಬಿತರಾಗದೇ, ಆಧುನಿಕ ಅನ್ವೇಷಣೆಗೆ, ಕೃಷಿ ಆಧಾರಿತ ಉಪ ಕಸುಬಿಗೆ ತೆರೆದುಕೊಂಡರೆ ಕೃಷಿಯನ್ನು ಲಾಭದಾಯಕವನ್ನಾಗಿಸಬಹುದು...
-
ಹನೂರು: ಸುಳ್ವಾಡಿ ಕಿಚ್ಚುಗುತ್ತು ಮಾರಮ್ಮ ದೇವಾಲಯದ ವಿಷಪ್ರಸಾದ ಪ್ರಕರಣದ ವೇಳೆ ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಸುಳ್ವಾಡಿ ಗ್ರಾಮದ ಆಸ್ಪತೆಯನ್ನು ಮೇಲ್ದರ್ಜೆಗೇರಿಸುವುದು...
-
ಮಂಗಳೂರು: ಸಿಎಂ ಯಡಿಯೂರಪ್ಪ, ಎಲ್ಲ ಸಚಿವರು, ಶಾಸಕರು, ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಸಂಘಟಿತವಾಗಿ ಕೆಲಸ ಮಾಡಿದ್ದರಿಂದ ಉಪ ಚುನಾವಣೆ ಯಲ್ಲಿ ಬಿಜೆಪಿ...
ಹೊಸ ಸೇರ್ಪಡೆ
-
ಬೆಂಗಳೂರು: ಸರ್ಕಾರದ ಆಡಳಿತ ಯಂತ್ರವನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳ ಲಾಗುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ...
-
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹಠ ಹಿಡಿದು ಸರ್ಕಾರ ರಚಿಸಿ, ಬಹುಮತಕ್ಕೆ ಅಗತ್ಯವಿರುವ ಶಾಸಕರನ್ನು ಗೆಲ್ಲಿಸಿಕೊಂಡು ನೆಮ್ಮದಿಯ ನಿಟ್ಟುಸಿರು...
-
ಬೆಂಗಳೂರು: ವಿದ್ಯಾರ್ಥಿಗಳಿಗೆ ಪರೀಕ್ಷಾ ಕೊಠಡಿ ಆಟದ ಮೈದಾನಗಳಿದ್ದಂತೆ ವಾತಾವರಣ ಸೃಷ್ಟಿಸಿ, ಭಯ, ಖನ್ನತೆ, ಹಿಂಜರಿಕೆಗಳಿಲ್ಲದೇ ಆತ್ಮವಿಶ್ವಾಸದಿಂದ ಪರೀಕ್ಷೆ...
-
ಬೆಳಗಾವಿ: ಕಡೋಲಿ ಗ್ರಾಮದಲ್ಲಿ ಬುಧ ವಾರ ನಡೆದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಗೆ ಕಠಿಣ (ಗಲ್ಲು) ಶಿಕ್ಷೆ ವಿ ಧಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು...
-
ಬೆಂಗಳೂರು: ಹೊಸ ಶಾಸಕರ ಬೆಂಬಲಿ ಗರಿಗೆ ಕ್ಷೇತ್ರವ್ಯಾಪ್ತಿಯಲ್ಲಿ ಪಕ್ಷದ ಪ್ರಮುಖ ಜವಾಬ್ದಾರಿ ವಹಿಸಲು ಬಿಜೆಪಿ ಗಂಭೀರ ಚಿಂತನೆ ನಡೆಸಿದೆ. ಉಪಚುನಾವಣೆ ಕಾರ್ಯ...