ಮಾಲಗತ್ತಿ ಕೆರೆ ನೀರು ಸರಬರಾಜು ಯೋಜನೆ ಕೈಬಿಡಿ

ಯೋಜನೆ ಹಿಂಪಡೆಯದಿದ್ದರೆ ಉಗ್ರ ಹೋರಾಟ

Team Udayavani, Apr 6, 2019, 4:06 PM IST

06-April-29

ಯಾದಗಿರಿ: ಮಾಲಗತ್ತಿ ಗ್ರಾಮದ ಕೆರೆ ನೀರು ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಯಾದಗಿರಿ: ಸುರಪುರ ತಾಲೂಕಿನ ಮಾಲಗತ್ತಿ ಗ್ರಾಮದ ಕೆರೆ ನೀರು
ಬೇರೆ ಗ್ರಾಮಗಳಿಗೆ ಸರಬರಾಜು ಮಾಡುವ ಯೋಜನೆ ರೂಪಿಸಲಾಗಿದೆ. ಇದನ್ನು ಕೈಬಿಟ್ಟು ಮಾಲಗತ್ತಿ ಜನರಿಗೆ
ನೀರಿನ ಬರ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗುವುದನ್ನು ತಡೆಯಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ (ಹಸಿರು ಸೇನೆ) ಜಿಲ್ಲಾಧಿಕಾರಿಗಳಿಗೆ ಆಗ್ರಹಿಸಿದೆ.

ಮಾಲಗತ್ತಿ ಗ್ರಾಮ ಘಟಕದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ
ಆಗಮಿಸಿದ ರೈತರು ಆಕ್ರೋಶ ವ್ಯಕ್ತಪಡಿಸಿ ಕಳೆದ ವರ್ಷ ಅಧಿಕಾರಿಗಳು ಯಾವುದೇ ರೈತರ ಸಭೆ, ಗ್ರಾಮಸಭೆ ನಡೆಸದೇ ಈ
ಭಾಗದ ರೈತರ ಅಭಿಪ್ರಾಯ ಕೇಳದೇ ಮಾಲಗತ್ತಿ ಕೆರೆಯಿಂದ 12 ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಯೋಜನೆ ರೂಪಿಸಿ ಅನ್ಯಾಯ ಮಾಡಿದ್ದಾರೆ. ಅಧಿಕಾರಿಗಳು ಮನಸ್ಸಿಗೆ ತೋಚಿದಂತೆ ಯೋಜನೆ ರೂಪಿಸಿ ಜಾರಿಗೆ ತಂದು ಬಿಲ್‌ ಎತ್ತುವ ಹವಣಿಕೆಯಲ್ಲಿದ್ದಾರೆ.

ಆದರೆ ಅಧಿಕಾರಿಗಳು ಬಿಲ್‌ ಎತ್ತಲು ಮಾಡಿದ ಯೋಜನೆ ಇದಾಗಿದೆ ಹೊರತು ಜನರಿಗೆ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ಉದ್ದೇಶ ಯೋಜನೆಯಲ್ಲಿ ಎಳ್ಳಷ್ಟು ಇಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ಕಳೆದ ವರ್ಷ ಈ ಯೋಜನೆ ಜಾರಿಗೊಳಿಸಲು ಮುಂದಾಗಿದ್ದಾಗ ರೈತ ಸಂಘದಿಂದ ಆಕ್ಷೇಪಣೆ ಸಲ್ಲಿಸಿದಾಗ
ಕಾಮಗಾರಿ ತಡೆಹಿಡಿದಿದ್ದರು. ಆದರೆ ಇದೀಗ ಚುನಾವಣೆ ಮುಂದೆ ಏಕಾಏಕಿ ಈ ಕಾಮಗಾರಿ ಪುನಾರಂಭಿಸಿ ಇನ್ನೊಂದು ಕೆಲಸಕ್ಕೆ ಬಾರದ ಯೋಜನೆ ಪೂರ್ಣಗೊಳಿಸಿ ಹಣ ಎತ್ತಲು ಮುಂದಾಗಿರುವುದು ನಾಚಿಕೆಗೇಡು. ತಕ್ಷಣ ಯೋಜನೆ ಕೈಬಿಡದಿದ್ದರೆ ನಮ್ಮ ಗ್ರಾಮದವರಿಗೆ ಕುಡಿಯುವ ನೀರಿಲ್ಲದೇ ಹಾಹಾಕಾರವಾಗುತ್ತದೆ.

ತಾವು ಮಧ್ಯ ಪ್ರವೇಶಿಸಿ ಕಾಮಗಾರಿ ವಜಾಗೊಳಿಸಬೇಕು. ಇಲ್ಲವಾದಲ್ಲಿ ನಮ್ಮ ಪಾಲಿನ ನೀರಿನ ಹಕ್ಕಿಗಾಗಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಅಯ್ಯಣ್ಣ ಹಾಲಭಾವಿ ನೇತೃತ್ವ ವಹಿಸಿ ಮನವಿ ಸಲ್ಲಿಸಿದರು. ಜಿಲ್ಲಾ ಉಪಾಧ್ಯಕ್ಷ ಹನಮಂತ್ರಾಯ
ಚಂದಲಾಪುರ, ಮಾಲಗತ್ತಿ ಅಧ್ಯಕ್ಷ ವೆಂಕೋಬ ಹವಾಲ್ದಾರ, ಉಪಾಧ್ಯಕ್ಷ ಚಾಂದಪಾಷಾ ಗುತ್ತೇದಾರ, ಗೌರವಾಧ್ಯಕ್ಷ ಬಾಪುಗೌಡ ಮಾಲೀಪಾಟೀಲ, ಕಾರ್ಯದರ್ಶಿ ಭೀಮಣ್ಣ ರಾಂಪುರ, ಮಹಾಂತೇಶ ಸಾಹುಕಾರ, ಬಸವರಾಜ ಯನಗುಂಟಿ, ರವಿ ಚನ್ನೂರು, ಕೃಷ್ಟಪ್ಪ ದೊರೆ, ನಂದಪ್ಪ ನಾಯ್ಕೋಡಿ, ದ್ಯಾವಣ್ಣ
ಖಾನಾಪುರ, ಖುದಾಭಕ್ಷಿ, ಮಕಾಂದಾರ, ಮಲ್ಲಣ್ಣ, ಬಸವರಾಜ ಸತ್ಯಂಪೇಟೆ, ಬಸವರಾಜ ಯಕ್ತಾಪುರ, ಸಂಜೀವಪ್ಪ ದ್ಯಾವಪುರ, ಪಂಪಣ್ಣ ಮಾಲಗತ್ತಿ, ನೀಲಪಪ್ಪ, ರೋಷನ್‌, ಶರಣಪ್ಪ,
ನಬಿಪಟೇಲ್‌, ಹುಸೇನಸಾಬ ಇದ್ದರು.

ರೈತರ ಅಸಮಾಧಾನ
ಮಾಲಗತ್ತಿ ಕೆರೆಯಲ್ಲಿ ಈಗಾಗಲೇ ಹೂಳು ತುಂಬಿ ನೀರು ಸಂಗ್ರಹಣೆ
ಕಡಿಮೆಯಾಗಿದೆ. ಅಲ್ಲದೇ ಸತತ ಬರಗಾಲ ಇರುವ
ಸಂದರ್ಭದಲ್ಲಿಯೇ ಕೆರೆಯಲ್ಲಿರುವ ಅಲ್ಪಸ್ವಲ್ಪ ನೀರನ್ನು 12 ಗ್ರಾಮಗಳಿಗೆ ಸರಬರಾಜು ಮಾಡುವ ಯೋಜನೆ ರೂಪಿಸಿರುವುದೇ
ಹಣ ಹೊಡೆಯಲು ಎಂಬುದು ಅರ್ಥವಾಗುತ್ತದೆ ಎಂದು ರೈತರು
ಅಸಮಾಧಾನ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.