ಹೊಸ ತಾಲೂಕು ಹೆಸರಿಗಷ್ಟೇ ಸೀಮಿತ
ಹೆಚ್ಚಿದ ಅಸಮಾಧಾನಯಾದಗಿರಿಗೆ ತಪ್ಪದ ಜನರ ಅಲೆದಾಟಬಾಡಿಗೆ ಕಟ್ಟಡಗಳಲ್ಲಿ ಕಚೇರಿ ಅನಿವಾರ್ಯ
Team Udayavani, Sep 28, 2019, 12:24 PM IST
ಅನೀಲ ಬಸೂದೆ
ಯಾದಗಿರಿ: ಹೊಸ ತಾಲೂಕು ಕೇಂದ್ರಗಳು ಘೋಷಣೆಯಾದರೂ ಸಮರ್ಪಕ ಅನುಷ್ಠಾನಗಿಲ್ಲ. ತಾಲೂಕು ಕೇಂದ್ರಗಳಿಂದ ದೂರ ಇರುವ ಗ್ರಾಮಗಳ ಜನರಿಗೆ ಅನುಕೂಲವಾಗುವ ಬದಲಿಗೆ ಇನ್ನೂ ಅನಾನುಕೂಲ ಮಾತ್ರ ತಪ್ಪಿಲ್ಲ. ಸರ್ಕಾರವೇ ಹೊಸ ತಾಲೂಕುಗಳಲ್ಲಿ 14 ಇಲಾಖೆ ಕಚೇರಿಗಳನ್ನು ಸ್ಥಾಪಿಸಬೇಕು ಎಂದು ನಿರ್ದೇಶಿಸಿತ್ತು. ಆದರೆ ಬೆರಳಣಿಕೆ ಅಷ್ಟೇ ಕಚೇರಿಗಳು ಮಾತ್ರ ಆರಂಭವಾಗಿದ್ದು, ಹೊಸ ತಾಲೂಕುಗಳಿಗೆ ಕಂದಾಯ ದಾಖಲೆಗಳು ಹಸ್ತಾಂತರವಾಗಿದ್ದು, ಕಚೇರಿಗಳ ಮೂಲ ಸೌಕರ್ಯಕ್ಕೆ ತಲಾ 5 ಲಕ್ಷದಂತೆ ಹಳೆ ತಹಶೀಲ್ದಾರ್ ಖಾತೆಗೆ ನೀಡಲಾಗಿದೆ ಎನ್ನುವ ಮಾಹಿತಿ ಇದೆ.
ಜಿಲ್ಲೆಯಲ್ಲಿ ಗುರುಮಠಕಲ್, ಹುಣಸಗಿ ಹಾಗೂ ವಡಗೇರಾ ನೂತನ ತಾಲೂಕುಗಳಾಗಿ ಘೋಷಣೆಯಾಗಿದ್ದು, ಸಮರ್ಪಕ ಅನುಷ್ಠಾನ ಆಗದಿರುವುದು ಇಲ್ಲಿನ ಜನರಲ್ಲಿ ನಿರಾಸೆ ಮೂಡಿಸಿದೆ. ಸರ್ಕಾರಗಳು ಚುನಾವಣೆ ಸಂದರ್ಭದಲ್ಲಿ ಹೊಸ ವಿಷಯಗಳ ಮೂಲಕ ಚುನಾವಣೆ ಎದುರಿಸಿ ಜನರ ಅಮಾಯಕತೆಯೊಂದಿಗೆ ಆಟವಾಡುವ ಕೆಲಸ ನಿರಂತರ ನಡೆಯುತ್ತಿದೆ ಎನ್ನುವ ಬೇಸರದ ಮಾತು ಸಾರ್ವಜನಿಕರಿಂದ ಕೇಳಿ ಬರುತ್ತಿದೆ.
ಗುರುಮಠಕಲ್ನಲ್ಲಿ ಕೇವಲ ತಹಶೀಲ್ದಾರರು, ಆರೋಗ್ಯ ಇಲಾಖೆ ತಾಲೂಕು ಕಾರ್ಯಾರಂಭವಾಗಿ ಅದನ್ನು ಹೊರತು ಪಡಿಸಿ ಬೇರೆ ಯಾವುದೇ ಇಲಾಖೆ ಕಚೇರಿಗಳು ಕಾರ್ಯಾರಂಭ ಆಗದಿರುವುದರಿಂದ ಸಾರ್ವಜನಿಕರು ಯಾದಗಿರಿಗೆ ಅಲೆದಾಡುವುದು ತಪ್ಪಿಲ್ಲ. ನೂತನ ತಾಲೂಕು ಕೇಂದ್ರವು ಗುರುಮಠಕಲ್ ಮತ್ತು ಕೊಂಕಲ್ ಹೋಬಳಿಗಳಲ್ಲಿ ಸೇರಿಸಿ 70 ಗ್ರಾಮಗಳನ್ನು ಕೂಡಿಸಿ ತಾಲೂಕು ಕೇಂದ್ರವನ್ನು ರಚಿಸಲಾಗಿದೆ.
ಗುರುಮಠಕಲ್ಗೆ ಹತ್ತಿರದ ಸೇಡಂ ತಾಲೂಕು ವ್ಯಾಪ್ತಿಗೆ ಒಳಪಡುವ ಇಟಕಾಲ್, ಮೋತಕಪಲ್ಲಿ, ಕಾನಾಗಡ್ಡ ಗ್ರಾಮ ಪಂಚಾಯಿತಿಗೆ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಹಳ್ಳಿಗಳನ್ನು ಗುರುಮಠಕಲ್ ನೂತನ ತಾಲೂಕಿಗೆ ಸೇರಿಸುವುದರಿಂದ ಈ ಭಾಗದ ಜನರಿಗೆ ಅನುಕೂಲವಾಗುತ್ತದೆ. ಹಾಗಾಗಿ ಸರ್ಕಾರ ಕ್ರಮವಹಿಸಬೇಕು ಎಂದು ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರವನ್ನು ಅಂಗಲಾಚಿದ್ದರೂ ಸಾರ್ವಜನಿಕರ ಹಿತದೃಷ್ಟಿಯನ್ನು ಗಾಳಿಗೆ ತೂರಲಾಗಿದೆ ಎನ್ನುವ ಅಸಮಾಧಾನವೂ ಜನರಲ್ಲಿದೆ.
ಪ್ರಸ್ತುತ ಸರ್ಕಾರಿ ಕಚೇರಿಗಳು ಆರಂಭಿಸುವುದಕ್ಕೆ ಬಾಡಿಗೆ ಕಟ್ಟಡಗಳಲ್ಲಿ ಆರಂಭಿಸುವ ಅನಿವಾರ್ಯತೆಯಿದೆ. ಸ್ಥಳಾವಕಾಶ ಕಡಿಮೆ ಇರುವುದರಿಂದ ಈ ಹಿಂದಿನ ಮಾಜಿ ಮುಖ್ಯಮಂತ್ರಿ
ಎಚ್.ಡಿ. ಕುಮಾರಸ್ವಾಮಿ ಸರ್ಕಾರ ಇದ್ದಾಗ ಸ್ಥಳೀಯ ಶಾಸಕ ನಾಗನಗೌಡ ಕಂದಕೂರ ಎಲ್ಲಾ ಕಚೇರಿಗಳು ಒಂದೆಡೆ ನಿರ್ಮಿಸಿದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ ಎನ್ನುವ ನಿಟ್ಟಿನಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಸರ್ಕಾರಕ್ಕೆ ಮನವರಿಕೆ ಮಾಡಿದ್ದರು ಎನ್ನಲಾಗಿದೆ.
ಸರ್ಕಾರದ ಬದಲಾಗಿರುವುದರಿಂದ ಆಸೆಗೆ ತಣ್ಣೀರೆರೆಚಿದಂತಾಗಿದೆ. ಇನ್ನೂ ಗ್ರಾಮ ಪಂಚಾಯಿತಿ ಕೇಂದ್ರವಾಗಿದ್ದ ವಡಗೇರಾವನ್ನು ನೂತನ ತಾಲೂಕು ಕೇಂದ್ರವಾಗಿ ಸರ್ಕಾರ ಘೋಷಿಸಿರುವುದು ಅಲ್ಲಿಯೂ ಕೇವಲ ತಹಶೀಲ್ದಾರ್ ಕಚೇರಿ ಆರಂಭಿಸಿ ಹುದ್ದೆ ಮಂಜೂರು ಮಾಡಲಾಗಿದೆ. ಅಲ್ಲಿನ ಆಸ್ಪತ್ರೆ ಆವರಣದ ಕೊಠಡಿಯಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ತೆರೆಯಲಾಗಿದೆ. ಅದನ್ನು ಹೊರತು ಪಡಿಸಿ ಬೇರೆ ಇಲಾಖೆ ಕಚೇರಿಗಳು ಕಾರ್ಯಾರಂಭವಾಗಿಲ್ಲ.
ಪ್ರಸ್ತುತ ತಾಲೂಕು ಪಂಚಾಯಿತಿ ಸೇರಿದಂತೆ ವಿವಿಧ ಕಚೇರಿಗಳು ಆರಂಭಿಸಿ ಅನುಕೂಲ ಕಲ್ಪಿಸಬೇಕು ಎನ್ನುವುದು ವಡಗೇರಾ ತಾಲೂಕಿನ ಜನರ ಬೇಡಿಕೆಯಾಗಿದೆ. ಪ್ರಸ್ತುತ ವಡಗೇರಾ ಮತ್ತು ಹಯ್ನಾಳ (ಬಿ) ಹೋಬಳಿಯ 64 ಗ್ರಾಮಗಳನ್ನು ಸೇರಿಸಿ ಹೊಸ ತಾಲೂಕು ಕಾರ್ಯಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಅಂದುಕೊಂಡಂತೆ ತಾಲೂಕು ಕೇಂದ್ರದಲ್ಲಿ ವಿವಿಧ ಕಚೇರಿಗಳು ಆರಂಭವಾಗಿದ್ದರೇ ಈ ಭಾಗದ ಜನರು ದೂರದ ಶಹಾಪುರಕ್ಕೆ ಅಲೆದಾಡುವುದನ್ನು ತಪ್ಪಿಸಬಹುದು.
ಅಲ್ಲದೇ ಸುರಪುರ ತಾಲೂಕಿನಿಂದ ಬೇರ್ಪಡಿಸಿ ಹುಣಸಗಿ ಮತ್ತು ಕೊಡೇಕಲ್ ಹೋಬಳಿಗಳ ಸುಮಾರು 82 ಗ್ರಾಮಗಳನ್ನು ನೂತನ ಹುಣಸಗಿ ತಾಲೂಕು ಕೇಂದ್ರಕ್ಕೆ ಸೇರಿಸಲಾಗಿತ್ತು. ಇಲ್ಲಿಯೂ ತಹಶೀಲ್ದಾರ್ ಕಚೇರಿ ಕಾರ್ಯಾರಂಭಿಸಿದ್ದು, ತಾಲೂಕು ಪಂಚಾಯಿತಿ ಕಚೇರಿ ಆರಂಭವಾಗಿದೆ. ಬೇರೆ ಇಲಾಖೆಗಳ ಕಚೇರಿಗಳು ಆರಂಭವಾಗದಿರುವುದು ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ಸುರಪುರಕ್ಕೆ ಅಲೆದಾಡುವ ಅನಿವಾರ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ