ಶ್ರೀ ವಿಶ್ವೇಶತೀರ್ಥರಿಗೆ ಭಾವಪೂರ್ಣ ಶ್ರದ್ಧಾಂಜಲಿ
ರಾಜಕಾರಣಿಗಳು-ಮಠಾಧಿಧೀಶರಿಗೆ ಮಾರ್ಗದರ್ಶಕರಾಗಿದ್ದರು ಪೇಜಾವರ ಶ್ರೀ
Team Udayavani, Dec 30, 2019, 4:19 PM IST
ಯಾದಗಿರಿ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಹರಿಪಾದ ಸೇರಿದ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಶರಣ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ರವಿವಾರ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಸಾಹಿತಿಗಳಾದ ಮಹಾಂತಪ್ಪ ಜಾಗಟೆ, ಅಯ್ಯಣ್ಣ ಹುಂಡೇಕಾರ, ಶೋಭಾ ಸಾಲಮಂಟಪಿ, ಡಾ| ಭೀಮರಾಯ ಲಿಂಗೇರಿ, ಬಸವರಾಜ ಮೋಟ್ನಳ್ಳಿ, ಶ್ರೀಗಳ ಆದರ್ಶ ಜೀವನ ಸಮಾಜಕ್ಕೆ ನೀಡಿದ ಕೊಡುಗೆ ಸ್ಮರಿಸಿದರು.
ಶ್ರೀಗಳು ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಶ್ರೀ ರಾಮ ಮಂದಿರಕ್ಕೆ ಅವರದ್ದೇ ಆದ ಸಲಹೆಯೊಂದಿಗೆ ಅದ್ಭುತ ಕೊಡುಗೆ ನೀಡಿದ್ದರು. ಈಗಿನ ರಾಜಕಾರಣಿಗಳು ಮತ್ತು ಮಠಾಧಿಧೀಶರು ಹಾಗೂ ಸಂಪೂರ್ಣ ಮಾನವಕುಲಕ್ಕೆ ಮಾರ್ಗದರ್ಶಕರಾಗಿದ್ದರು ಎಂದು ಹೇಳಿದರು.
ಪೂಜ್ಯರ ಆತ್ಮಕ್ಕೆ ಶಾಂತಿ ಕೋರಿ ಭಕ್ತ ಸಮೂಹಕ್ಕೆ ಆಘಾತ ಸಹಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸಿದರು. ಜಿಲ್ಲಾ ಕಸಾಪ ಅಧ್ಯಕ್ಷ ಡಾ| ಸಿದ್ದಪ್ಪ ಹೊಟ್ಟಿ, ಸಂಗಣ್ಣ ಹೋತಪೇಟ, ವಿಶ್ವನಾಥರೆಡ್ಡಿ ಗೊಂದಡಗಿ, ಮಹಾದೇವಪ್ಪ ಹೊಟ್ಟಿ, ಸ್ವಾಮಿ ದೇವ ದಾಸನಕೇರಿ, ಬಸವಂತರಾಯ ಗೌಡ ಮಾಲಿಪಾಟೀಲ, ವಿಶ್ವನಾಥ ಗಣಪೂರು, ಲಕ್ಷ್ಮೀನಾರಾಯಣ ಗುಂಡಾನೋರ, ನೀಲಕಂಠ ಶೀಲವಂತ, ನಾಗೇಂದ್ರ ಜಾಜಿ, ಬಾಲು ನಕ್ಕಲ್, ಗುರುಬಸಪ್ಪ ಗುಂಡಳ್ಳಿ, ದೇವರಾಜ ವರ್ಕನಳ್ಳಿ, ಚಂದ್ರಶೇಖರ ಅರಳಿ, ಶರಣಪ್ಪ ಗುಳಗಿ, ಸುಭಾಷ ಗಂಜಿ, ಸುಭಾಷ್ ಆಯಾರಕರ್ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ