ರೈಲ್ವೆ ಇಲಾಖೆ ವಿಚಾರಣೆ ಮುಕ್ತಾಯ; ಆಯೋಗಕ್ಕೆ ವರದಿ


Team Udayavani, May 20, 2019, 12:53 PM IST

20-May-15

ಯಾದಗಿರಿ: ನಗರ ರೈಲ್ವೆ ನಿಲ್ದಾಣ ಆವರಣದಲ್ಲಿ ಮ್ಯಾನುವೆಲ್ ಸ್ಕ್ಯಾವೆಂಜಿಂಗ್‌ ಕಾಯ್ದೆ ಉಲ್ಲಂಘನೆಯಾಗಿರುವ ಕುರಿತು ಇಲಾಖಾ ವಿಚಾರಣೆಗೆ ನೇಮಕವಾಗಿದ್ದ ಅಧಿಕಾರಿಗಳ ತಂಡದ ವರದಿ.

ಯಾದಗಿರಿ: ನಗರ ರೈಲ್ವೆ ನಿಲ್ದಾಣದಲ್ಲಿ ಶೌಚಾಲಯ ಮಲದ ಗುಂಡಿಗಿಳಿದು ಕಾರ್ಮಿಕನೊಬ್ಬ ಪೈಪ್‌ಲೈನ್‌ ಸ್ವಚ್ಛಗೊಳಿಸಿರುವ ಅಮಾನವೀಯ ವರದಿಯನ್ನು ಮಾರ್ಚ್‌ 27ರಂದು ಉದಯವಾಣಿ ಪ್ರಕಟಿಸಿದ ಹಿನ್ನೆಲೆ ವರದಿ ಪ್ರಕಟವಾದ ದಿನವೇ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗವು ರೈಲ್ವೆ ಇಲಾಖೆ ಉನ್ನತ ಅಧಿಕಾರಿಗಳಿಗೆ ನೋಟಿಸ್‌ ಜಾರಿ ಮಾಡಿತ್ತು. ಇದೀಗ ರೈಲ್ವೆ ಅಧಿಕಾರಿಗಳು ಇಲಾಖೆ ವಿಚಾರಣೆ ನಡೆಸಿ ವರದಿಯನ್ನು ಆಯೋಗಕ್ಕೆ ರವಾನಿಸಿರುವ ಮಾಹಿತಿ ಲಭ್ಯವಾಗಿದೆ.

ಘಟನೆ ಕುರಿತು ಗುಂತಕಲ್ ವಿಭಾಗದ ಉನ್ನತ ಅಧಿಕಾರಿಗಳಿಗೆ ಆಯೋಗ ನೋಟಿಸ್‌ ನೀಡಿದ ಹಿನ್ನೆಲೆ ಗುಂತಕಲ್ ಡಿಆರ್‌ಎಂ ಕಾರ್ಯಾಲಯ ರಾಯಚೂರಿನ ಎಡಿಇಎನ್‌ ಜಿ. ಸುದರ್ಶನಮ್‌ ಅಧ್ಯಕ್ಷತೆಯಲ್ಲಿ ಎಡಿಎಂಒ ಕೆ. ಅನೀಲಕುಮಾರ ಹಾಗೂ ಎಡಿಎಸ್‌ಟಿ ಡಿ. ಜನಾರ್ಧನ ಅವರನ್ನೊಳಗೊಂಡ ತನಿಖಾ ತಂಡ ರಚಿಸಿತ್ತು.

ಏಪ್ರಿಲ್ 3ರಂದು ಬೆಳಗ್ಗೆ 10:00 ಗಂಟೆಗೆ ರಾಯಚೂರಿನ ಸಹಾಯಕ ವಿಭಾಗೀಯ ಇಂಜಿನಿಯರ್‌ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ನೊಟೀಸ್‌ ನೀಡಿದ್ದರು. ಘಟನೆ ನಡೆದ ವೇಳೆ ಯಾದಗಿರಿ ರೈಲ್ವೆ ನಿಲ್ದಾಣದಲ್ಲಿಯೇ ಇದ್ದ ರಾಯಚೂರಿನ ಆರೋಗ್ಯ ನಿರೀಕ್ಷಕ ಮಿದುನ್‌ ಮತ್ತು ಮಲದ ಗುಂಡಿಗಿಳಿದ ಕಾರ್ಮಿಕ ಖಾದರವಲಿ ಅವರನ್ನು ವಿಚಾರಣೆ ನಡೆಸಿದ್ದಾರೆ.

ಕಾರ್ಮಿಕ ಯಾವುದೇ ಸುರಕ್ಷತೆ ಅಳವಡಿಸಿಕೊಳ್ಳದೇ ಮಲದ ಗುಂಡಿಗಿಳಿದು ಪೈಪ್‌ಲೈನ್‌ ಜಾಮ್‌ ಆಗಿರುವುದನ್ನು ಸ್ವಚ್ಛಗೊಳಿಸುತ್ತಿರುವ ಕುರಿತು ಚಿತ್ರ ಸಮೇತ ವರದಿಯಾಗಿದ್ದರೂ ಅಧಿಕಾರಿಗಳ ವರದಿಯಲ್ಲಿ ಮಾತ್ರ ಚರಂಡಿಯಲ್ಲಿನ ಸ್ನಾನದ ನಿರುಪಯುಕ್ತ ನೀರು ಸ್ವಚ್ಛಗೊಳಿಸಲಾಗಿದೆ ಎಂದು ಉಲ್ಲೇಖೀಸಿದ್ದು, ಮ್ಯಾನುವೆಲ್ ಸ್ಕಾ ್ಯವೆಂಜಿಂಗ್‌ ಕಾಯ್ದೆ 2013 ಉಲ್ಲಂಘನೆಯಾಗಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.

ಘಟನೆ ಸಾಕ್ಷ್ಯ ಸಂಗ್ರಹಿಸಿದ ಆಯೋಗದ ಸದಸ್ಯ: ರೈಲ್ವೆ ನಿಲ್ದಾಣ ಆವರಣದಲ್ಲಿ ಮಲದ ಗುಂಡಿಗಿಳಿದು ಕಾರ್ಮಿಕ ಕೇವಲ ಒಳ ಉಡುಪಿನಲ್ಲಿ ಸ್ವಚ್ಛಗೊಳಿಸಿರುವ ಅಮಾನವೀಯ ವರದಿ ಪ್ರಕಟವಾಗುತ್ತಿದ್ದಂತೆ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ ಹಿರೇಮನಿ ಘಟನೆಯ ಪೂರಕ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ.

ಘಟನೆ ಕುರಿತು ಗಂಭೀರವಾಗಿ ಪರಿಗಣಿಸಿರುವ ಸಫಾಯಿ ಕರ್ಮಚಾರಿ ಆಯೋಗ ರೈಲ್ವೆ ಅಧಿಕಾರಿಗಳು ನೀಡಿರುವ ವರದಿ ಆಧಾರದಲ್ಲಿಯೇ ಪ್ರಕರಣವನ್ನು ಮುಕ್ತಾಯಗೊಳಿಸುತ್ತದೆಯೋ ಇಲ್ಲವೇ ಆಯೋಗದಿಂದ ಪ್ರತ್ಯೇಕ ವಿಚಾರಣೆ ನಡೆಸುತ್ತದೋ ಎನ್ನುವುದನ್ನು ಕಾಯ್ದು ನೋಡಬೇಕಿದೆ.

ಆಯೋಗದಿಂದ ಗುಂತಕಲ್ ವಿಭಾಗದ ಉನ್ನತ ಅಧಿಕಾರಿಗಳಿಗೆ ನೋಟಿಸ್‌ ಜಾರಿಗೊಳಿ ಸಲಾಗಿತ್ತು. ಚರಂಡಿಯಲ್ಲಿ ಸ್ನಾನಗೃಹದ ನಿರುಪಯುಕ್ತ ನೀರು ನಿಂತಿರುವುದನ್ನು ಸ್ವಚ್ಛಗೊಳಿಸಲಾಗುತ್ತಿತ್ತು ಎಂದು ವರದಿಯಲ್ಲಿ ಉಲ್ಲೇಖೀಸಲಾಗಿದೆ. ಈ ಪ್ರಕರಣ ಕುರಿತು ಆಯೋಗದ ಕಾರ್ಯದರ್ಶಿಗೆ ಕಳಿಸಿ ಅಭಿಪ್ರಾಯ ಪಡೆಯಲಾಗುವುದು. ಬಳಿಕ ಮುಂದಿನ ಕ್ರಮದ ಕುರಿತು ನಿರ್ಧಾರ ಮಾಡಲಾಗುವುದು.
ಜಗದೀಶ ಹಿರೇಮನಿ,
ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.