371(ಜೆ) ಅಡಿ ಸಾರಿಗೆ ಸಿಬ್ಬಂದಿ ನೇಮಿಸಿ: ಗದ್ದಗಿ

ಸಂವಿಧಾನ ಸರ್ವರಿಗೂ ಸಮಾನ ಹಕ್ಕು ನೀಡಿದೆ

Team Udayavani, Aug 17, 2019, 3:44 PM IST

17-Agust-34

ಯಾದಗಿರಿ: ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಈಶಾನ್ಯ ಸಾರಿಗೆ ಸಂಸ್ಥೆ ನೌಕರರ 5ನೇ ಮಹಾ ಅಧಿವೇಶನ ಉದ್ಘಾಟಿಸಿ ಸಾರಿಗೆ ನೌಕರರ ಮಹಾ ಮಂಡಳ ಅಧ್ಯಕ್ಷ ಚಂದ್ರಕಾಂತ ಗದ್ದಗಿ ಮಾತನಾಡಿದರು.

ಯಾದಗಿರಿ: ಸಾರಿಗೆ ಇಲಾಖೆಯಲ್ಲಿ ಹೈಕ ಭಾಗಕ್ಕೆ 371(ಜೆ) ಜಾರಿಯಾದಾಗಿನಿಂದ ಈಶಾನ್ಯ ಸಾರಿಗೆ ಸಂಸ್ಥೆಯಲ್ಲಿ ಮೇಲ್ವಿಚಾರಕ, ಅಧಿಕಾರಿ ದರ್ಜೆ 2 ಮತ್ತು 1ರ ಕಿರಿಯ ಶ್ರೇಣಿ ವರೆಗಿನ ಹುದ್ದೆಗಳನ್ನು ನೇಮಕ ಮಾಡಬೇಕು ಎಂದು ಅಖೀಲ ಕರ್ನಾಟಕ ರಾಜ್ಯ ಸಾರಿಗೆ ನೌಕರರ ಮಹಾ ಮಂಡಳ ಅಧ್ಯಕ್ಷ ಚಂದ್ರಕಾಂತ ಗದ್ದಗಿ ಒತ್ತಾಯಿಸಿದರು.

ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಜರುಗಿದ ಯಾದಗಿರಿ ವಿಭಾಗದ ರಾಜ್ಯ ಸಾರಿಗೆ ನೌಕರರ ಸಂಘದ 5ನೇ ಮಹಾ ಅಧಿವೇಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನೌಕರರ ಅಗತ್ಯತೆಯ ಕುರಿತು ಸರ್ಕಾರದ ಮಟ್ಟದಲ್ಲಿ ಹೋರಾಟಗಳನ್ನು ರೂಪಿಸಲು ಸಂಘ ನಿರ್ಧರಿಸಿದ್ದು, ಸಂವಿಧಾನ ಸರ್ವರಿಗೂ ಸಮಾನ ಹಕ್ಕುಗಳನ್ನು ನೀಡಿದೆ. ಆದರೇ ಅಧಿಕಾರದಲ್ಲಿರುವವರು ಸಂವಿಧಾನದ ಆಶಯದಂತೆ ಸರ್ವರಿಗೂ ಒಳ್ಳೆಯದಾಗುವಂತೆ ಸೌಕರ್ಯಗಳನ್ನು ಒದಗಿಸಬೇಕು ಎಂದರು.

ಕಲಬುರಗಿ ವಿಭಾಗದ ಪ್ರದಾನ ಕಾರ್ಯದರ್ಶಿ ಚಂದ್ರಕಾಂತ ಡೊಳ್ಳಿ ಮಾತನಾಡಿ, ಈಶಾನ್ಯ ಸಾರಿಗೆ ಸಂಸ್ಥೆಯಲ್ಲಿ ಚಾಲಕ ಮತ್ತು ನಿರ್ವಾಹಕರ ಹುದ್ದೆಗಳು ಕಳೆದ ನಾಲ್ಕು ವರ್ಷದಿಂದ ನೇಮಕವಾಗಿಲ್ಲ. ಸಂಸ್ಥೆ ಸಾಕಷ್ಟು ಸಿಬ್ಬಂದಿ ಕೊರತೆಯನ್ನು ಅನುಭವಿಸುತ್ತಿದೆ. 2400 ನೌಕರರ ಹುದ್ದೆ ನೇಮಕಕ್ಕೆ ಸರ್ಕಾರದ ಅನುಮೋದನೆಗೆ ಕಳಿಸಿರುವ ಮಾಹಿತಿಯಿದೆ ಎಂದರು.

ಸಂಸ್ಥೆಯಲ್ಲಿ ನೌಕರರು ಹೆಚ್ಚು ಸಮಯ ಮೀರಿ ಕೆಲಸ ಮಾಡಿದರೂ ಒಂದು ಕಿರುಕುಳ, ವಾಹನ ಕಡಿಮೆ ಓಡಿದರೂ ತೊಂದರೆಯಿಂದ ನೌಕರರನ್ನು ಸಂಕಷ್ಟಕ್ಕೆ ಸಿಲುಕಿಸದೆ ಮಾನವೀಯವಾಗಿ ಸೇವೆಯನ್ನು ಪಡೆಯಬೇಕು ಎಂದು ಒತ್ತಾಯಿಸಿದರು.

ಅಖೀಲ ಕರ್ನಾಟಕ ರಾಜ್ಯ ಸಾರಿಗೆ ನೌಕರರ ಮಹಾ ಮಂಡಳ ಪ್ರದಾನ ಕಾರ್ಯದರ್ಶಿ ಬಸವರಾಜ ಕಣ್ಣಿ ಮಾತನಾಡಿ, 371(ಜೆ)ಯಡಿ ನೇಮಕಕ್ಕೆ ಸರ್ಕಾರದ ಆರ್ಥಿಕ ಇಲಾಖೆಯ ಅನುಮೋದನೆ ಬೇಕಿಲ್ಲ. ಆದರೂ ಆರ್ಥಿಕ ಇಲಾಖೆಗೆ ಕಳಿಸಿದ್ದರಿಂದ ವರ್ಷಗಟ್ಟಲೇ ಕಡತಗಳು ಕೊಳೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹೈಕ ಭಾಗದ 371 (ಜೆ) ಕಲಂ ಕೇವಲ ಚಾಲಕರು, ನಿರ್ವಾಹಕರು ಹಾಗೂ ತಾಂತ್ರಿಕ ಸಿಬ್ಬಂದಿಗೆ ಮಾತ್ರ ಅನ್ವಯವಾಗುತ್ತಿದೆ. ನಮ್ಮಲ್ಲಿ ಅಧಿಕಾರಿ ವರ್ಗಗಳ ನೇಮಕಕ್ಕೆ ಇದು ಅನ್ವಯವಾಗುತ್ತಿಲ್ಲ ಎಂದವರು, ಹೈಕ ಭಾಗದಲ್ಲಿ 92 ಅಧಿಕಾರಿ ಹುದ್ದೆ ಹಾಗೂ 225 ಮೇಲ್ವಿಚಾಕರ ಹುದ್ದೆಗಳು ಖಾಲಿಯಾಗಿದೆ ಎಂದರು. ಅಲ್ಲದೇ ಈಗಾಗಲೇ ಸೇವೆಯಲ್ಲಿರುವ ಸಿಬ್ಬಂದಿಗೆ ಮುಂಬಡ್ತಿಯೂ ಸಿಕ್ಕಿಲ್ಲ. ಹಾಗಾಗಿ ಶೀಘ್ರವೇ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ನೌಕರರ ಸಮಸ್ಯೆಗಳ ಈಡೇರಿಸುವಂತೆ ಮನವಿ ಮಾಡಲಿದೆ ಎಂದರು.

ರವೀಂದ್ರನಾಥ ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು.ಮಾನಯ್ಯ ಹತ್ತಿಗೂಡೂರ, ನಾಗರೆಡ್ಡಿ ಸಾವೂರ, ಸಿದ್ದಣ್ಣ ಗೌಡ ಚನ್ನೂರ, ಸಿದ್ದಣ್ಣ ಸೀಕೆ, ವಿವೇಕಾನಂದ, ಎಸ್‌.ಎಸ್‌. ಸಜ್ಜನ್‌ ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.