ತೆಲಂಗಾಣ ಸಾರಿಗೆ.. ಸುರಕ್ಷಿತ ಜವಾಬ್ಧಾರಿ ಯಾರಿಗೆ?
Team Udayavani, Oct 12, 2019, 3:09 PM IST
ಅನೀಲ ಬಸೂದೆ
ಯಾದಗಿರಿ: ರಾಜ್ಯದ ಗಡಿ ಜಿಲ್ಲೆ ಯಾದಗಿರಿಯಲ್ಲಿ ತೆಲಂಗಾಣ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಅಧಿಕೃತ ಚಾಲಕ ಮತ್ತು ನಿರ್ವಾಹಕರಿಲ್ಲದ ಬಸ್ ಸಂಚಾರ ನಡೆಯುತ್ತಿದ್ದು, ಅದರಲ್ಲಿ ಪ್ರಯಾಣಿಕರಿಂದ ಹಣ ಪಡೆಯಲಾಗುತ್ತಿದೆ ವಿನಃ ಟಿಕೆಟ್ ಮಾತ್ರ ನೀಡಲಾಗುತ್ತಿಲ್ಲ.
ನೆರೆಯ ತೆಲಂಗಾಣದ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರು ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಒಂದು ವಾರದಿಂದ ಸೇವೆಗೆ ಗೈರಾಗಿ ಪ್ರತಿಭಟನೆಯಲ್ಲಿ ತೊಡಗಿದ್ದು, ತೆಲಂಗಾಣ ಸರ್ಕಾರ ಪ್ರಯಾಣಿಕರಿಗೆ ತೊಂದರೆಯಾಗಬಾರದೆಂದು ಕಳೆದೆರಡು ದಿನಗಳಿಂದ ಖಾಸಗಿ ವ್ಯಕ್ತಿಗಳನ್ನು ನೇಮಿಸಿಕೊಂಡು ಯಥಾವತ್ತಾಗಿ ಸಾರಿಗೆ ಸೇವೆ ಆರಂಭಿಸಿದೆ. ಅಲ್ಲಿಯ ವಾಹನಗಳು ನಮ್ಮ ರಾಜ್ಯದ ಬಸ್ ನಿಲ್ದಾಣದಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿಕೊಂಡು ಸಂಚರಿಸುತ್ತಿವೆ. ಬಸ್ನಲ್ಲಿ ಹಣ ಪಡೆಯಲಾಗುತ್ತದೆ ಹೊರತು ಟಿಕೆಟ್ ನೀಡಲಾಗುತ್ತಿಲ್ಲ.
ಏನಾದರೂ ಹೆಚ್ಚು ಕಡಿಮೆಯಾದ್ರೆ ಗತಿಯೇನು ಎಂದು ಆತಂಕದಿಂದಲೇ ಪ್ರಯಾಣಿಸುವಂತಾಗಿದೆ. ರಾಜ್ಯದ ಸಾರಿಗೆ ಇಲಾಖೆ ಅಧಿಕಾರಿಗಳು ಈ ಕುರಿತು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ನಮ್ಮ ರಾಜ್ಯದ ಸಾರಿಗೆ ವಾಹನಗಳು ಪರವಾನಗಿ ಪಡೆದು ಆ ರಾಜ್ಯಕ್ಕೆ ಸಂಚರಿಸುವುದು ಮತ್ತು ತೆಲಂಗಾಣದ ಬಸ್ಗಳು ನಮ್ಮ ಭಾಗದಲ್ಲಿ ಸಂಚರಿಸುವುದು ಸಾಮಾನ್ಯ. ಅಧಿಕೃತ
ಚಾಲಕ, ನಿರ್ವಾಹಕರು ಇಲ್ಲದೇ ಇರುವ ಬಸ್ಗಳು ನಮ್ಮ ರಾಜ್ಯಕ್ಕೆ ಪ್ರವೇಶಿಸಿ ಇಲ್ಲಿನ ಪ್ರಯಾಣಿಕರನ್ನು ಹತ್ತಿಸಿಕೊಂಡು ಸಂಚರಿಸುವುದು ಎಷ್ಟು ಸುರಕ್ಷಿತ ಎನ್ನುವ ಪ್ರಶ್ನೆ ಉದ್ಭವವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
MUST WATCH
ಹೊಸ ಸೇರ್ಪಡೆ
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
Movie Review: ಆಡು ಜೀವಿದಂ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ