ಸಂವಿಧಾನ ಬದ್ಧ ಮೀಸಲಾತಿ ಜಾರಿಗೆ ಒತ್ತಾಯ
ಬೇಡಿಕೆಗೆ ಸ್ಪಂದಿಸದಿದ್ದರೆ ಉಗ್ರ ಹೋರಾಟ
Team Udayavani, Jun 19, 2019, 4:34 PM IST
ಯಾದಗಿರಿ: ಹೈಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ವಿಭಾಗೀಯ ಅಧ್ಯಕ್ಷ ನಂದಕುಮಾರ ಪಾಟೀಲ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಯಾದಗಿರಿ: ರಾಜ್ಯದಲ್ಲಿ ಪರಿಶಿಷ್ಟ ಪಂಗಡಕ್ಕೆ ಶೇ. 7.5 ಮೀಸಲಾತಿ ನೀಡುವ ಬೇಡಿಕೆಗೆ ಸರ್ಕಾರದ ಸ್ಪಂದಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಹೈಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ವಿಭಾಗೀಯ ಅಧ್ಯಕ್ಷ ನಂದಕುಮಾರ ಪಾಟೀಲ ತಿಳಿಸಿದರು.
ನಗರದ ವಾಲ್ಮೀಕಿ ಭವನದನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ಗುರು ಪೀಠದ ಜಗದ್ಗುರು ಪ್ರಸನ್ನಾನಂದ ಶ್ರೀಗಳು ಕಳೆದ 10 ದಿನಗಳಿಂದ ರಾಜನಹಳ್ಳಿಯಿಂದ ವಿಧಾನಸೌಧವರೆಗೆ ಹಮ್ಮಿಕೊಂಡ ಪಾದಯಾತ್ರೆ ನಡೆಸುತ್ತಿದ್ದರೂ ಸರ್ಕಾರದಿಂದ ಪ್ರತಿಕ್ರಿಯಿ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈಗಾಗಲೇ ಸಮುದಾಯಕ್ಕೆ ವಿವಿಧ ರಂಗಗಳಲ್ಲಿ ಶೇ. 7.5 ರಷ್ಟು ಮೀಸಲಾತಿ ಒದಗಿಸಲಾಗಿದೆ, ಆದರೇ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮಾತ್ರ ಮೀಸಲಾತಿ ಒದಗಿಸದೇ ದುರ್ಬಲಗೊಳಿಸುವ ಹುನ್ನಾರ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪೂಜ್ಯ ವಾಲ್ಮೀಕಿ ಆಶ್ರಮದ ವರದಾನೇಶ್ವರ ಶ್ರೀಗಳು ಮಾತನಾಡಿ, ಸರ್ಕಾರ ಸಮಾಜದ ಮೇಲೆ ಕಾಳಜಿ ಇದ್ದರೆ ಸಂವಿಧಾನ ಬದ್ಧವಾದ ಮೀಸಲಾತಿಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ವಾಲ್ಮೀಕಿ ಸಮಾಜ ಜಿಲ್ಲಾಧ್ಯಕ್ಷ ಮರೆಪ್ಪ ನಾಯಕ ಮಗದಂಪೂರ ಮಾತನಾಡಿ, ಸರ್ಕಾರ ಜೂನ್ 21ರೊಳಗೆ ಸ್ಪಂದಿಸದಿದ್ದಲ್ಲಿ ಚಂಡರಕಿ ಗ್ರಾಮಕ್ಕೆ ಮುಖ್ಯಮಂತ್ರಿ ಬರುವ ವೇಳೆ ವಿರೋಧ ವ್ಯಕ್ತಪಡಿಸಲಾಗುವುದು ಎಂದರು. ಜೂ. 25ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಈಗಾಗಲೇ ನಿರ್ಣಯಿಸಲಾಗಿದೆ ಎಂದರು.
ಈ ವೇಳೆ ಗೌಡಪ್ಪಗೌಳ ಆಲ್ದಾಳ, ಭೀಮರಾಯ ಠಾಣಗುಂದಿ, ಶರಣಪ್ಪ ಜಾಕನಳ್ಳಿ, ಚಂದ್ರಕಾಂತ ಹತ್ತಿಕುಣಿ, ಮೋನಪ್ಪ ನಾಯಕ ಹಳಿಗೇರಾ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ