ಮಹರ್ಷಿ ವಾಲ್ಮೀಕಿ ಆದರ್ಶ ಪಾಲಿಸಿ

ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ, ವಸತಿ ನಿಲಯ ಸೌಲಭ್ಯ ಬಳಸಿಕೊಳ್ಳಲಿ: ಮುದ್ನಾಳ 

Team Udayavani, Oct 14, 2019, 12:03 PM IST

14-October-7

ಯಾದಗಿರಿ: ಆದಿಕವಿ ಮಹರ್ಷಿ ವಾಲ್ಮೀಕಿಯವರು ಒಂದು ಜಾತಿಗೆ ಸೀಮಿತವಲ್ಲ. ಅವರು ಇಡೀ ದೇಶದ ಎಲ್ಲಾ ಜನಾಂಗಕ್ಕೆ ಬೇಕಾದವರು. ವಾಲ್ಮೀಕಿ ಜೀವನ ಪ್ರತಿಯೊಬ್ಬರಿಗೂ ಆದರ್ಶವಾಗಿದೆ ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಹೇಳಿದರು.

ನಗರದ ಮಹರ್ಷಿ ವಾಲ್ಮೀಕಿ ಭವನದಲ್ಲಿ ರವಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಸಮಿತಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಾಚೀನ ಸಂಸ್ಕೃತಿ ಹೊಂದಿರುವ ನಮ್ಮ ದೇಶದಲ್ಲಿ ಅನೇಕ ಋಷಿಗಳು, ಶರಣರು, ಸಂತರು ಜನಿಸಿದ್ದಾರೆ. ಅವರಲ್ಲಿ ಮಾನವ ಜನಾಂಗಕ್ಕೆ ಮಾರ್ಗದರ್ಶನ ನೀಡುವ ರಾಮಾಯಣ ಮಹಾಕಾವ್ಯ ರಚಿಸಿದ ಆದಿಕವಿ ವಾಲ್ಮೀಕಿ ಪ್ರಮುಖರಾಗಿ ಕಾಣಿಸಿಕೊಳ್ಳುತ್ತಾರೆ. ಈ ಕಾರಣಕ್ಕಾಗಿ ಮಹರ್ಷಿಗಳು ಎಂದು ಕರೆಸಿಕೊಂಡಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಮಾತನಾಡಿ, ಮಹರ್ಷಿ ವಾಲ್ಮೀಕಿಯವರು ಪರಿಶ್ರಮದ ಮೂಲಕ ಸಾಧನೆ ಮಾಡಿದವರು. ಅವರ ಜೀವನದಲ್ಲಿನ ಸ್ಫೂರ್ತಿದಾಯಕವಾದ ಅಂಶಗಳನ್ನು ತಪ್ಪದೇ ಪಾಲಿಸಬೇಕು ಎಂದು ಹೇಳಿದರು.

ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸೇರಿದಂತೆ ಎಲ್ಲಾ ಸಮುದಾಯದವರಿಗೆ ಸರ್ಕಾರದ ವತಿಯಿಂದ ಅನೇಕ ಯೋಜನೆಗಳಿವೆ. ಅವುಗಳನ್ನು ಉದ್ದೇಶಿತ ಕಾರ್ಯಕ್ಕೆ ಬಳಸಿಕೊಳ್ಳುವ ಮೂಲಕ ಸದುಪಯೋಗ ಮಾಡಿಕೊಳ್ಳಬೇಕು. ವಿದ್ಯಾರ್ಥಿ ವೇತನ, ವಸತಿ ನಿಲಯ ಸೌಲಭ್ಯಗಳನ್ನು ಬಳಸಿಕೊಂಡು ಶೈಕ್ಷಣಿಕವಾಗಿ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್‌ ಸೋನಾವಣೆ ಮಾತನಾಡಿದರು. ಕರ್ನಾಟಕ ರಾಜ್ಯ ಪರಿಶಿಷ್ಟ ವರ್ಗಗಳ ಪತ್ರಕರ್ತರ ಸಂಘದ ಅಧ್ಯಕ್ಷರಾದ ಭೀಮರಾಯ ಹದ್ದಿನಾಳ ಉಪನ್ಯಾಸ ನೀಡಿದರು.

ಮುಖಂಡರಿಗೆ ಸನ್ಮಾನ: ಸಮಾಜಕ್ಕಾಗಿ ಗಣನೀಯ ಸೇವೆ ಸಲ್ಲಿಸಿದ ವಾಲ್ಮೀಕಿ ಸಮಾಜದ ಮುಖಂಡರಾದ ಪರಮಣ್ಣ ವಡಿಕೇರಿ ಕಕ್ಕೇರಾ, ಬಸವರಾಜಪ್ಪ ಕವಲ್ದಾರ ಬಾಚವಾರ, ಬಸವರಾಜಪ್ಪ ಬುಡಯ್ಯನೋರ್‌ ಯಾದಗಿರಿ, ಬಸವರಾಜ ಯಕ್ಷಿಂತಿ ಹಳಿಸಗರ, ಅಯ್ಯಪ್ಪ ನಾಯಕ ಠಾಣಗುಂದಿ ಅವರನ್ನು ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಯಿತು.

ನಗರಸಭೆ ಪೌರಾಯುಕ್ತ ರಮೇಶ ಎಸ್‌. ಸುಣಗಾರ, ವಾಲ್ಮೀಕಿ ನಾಯಕ ಸಂಘದ ಜಿಲ್ಲಾಧ್ಯಕ್ಷ ಮರೆಪ್ಪ ನಾಯಕ ಮಗದಂಪುರ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಅಧಿಕಾರಿಗಳು, ವಾಲ್ಮೀಕಿ ನಾಯಕ ಸಮಾಜದ ಮುಖಂಡರು, ಮಹಿಳೆಯರು, ಯುವಕರು, ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.