ಆನ್‌ಲೈನ್‌ನಲ್ಲೇ ಇ-ಫೈಲಿಂಗ್‌ ಮಾಡಿ

ಐಟಿ ವೆಬ್‌ಸೈಟ್‌ನಲ್ಲಿ ವ್ಯಾಪಾರ-ವೈಯಕ್ತಿಕ ಆದಾಯ ತೆರಿಗೆ ಪಾವತಿಗೆ ಅವಕಾಶ

Team Udayavani, Sep 18, 2019, 6:11 PM IST

18-Sepctember-24

ಯಾದಗಿರಿ: ವಾಣಿಜ್ಯೋದ್ಯಮಿಗಳ ಸಂಘದ ಆವರಣದಲ್ಲಿ ಸರಳ ತೆರಿಗೆ ಪಾವತಿ ಕುರಿತು ಕಾರ್ಯಾಗಾರ ನಡೆಯಿತು.

ಯಾದಗಿರಿ: ಭಾರತ ಸರ್ಕಾರ ತೆರಿಗೆ ಪಾವತಿ ವ್ಯವಸ್ಥೆಯನ್ನೂ ಆನ್‌ಲೈನ್‌ನಲ್ಲಿ ಮಾಡಿದೆ. ತೆರಿಗೆ ಪಾವತಿದಾರರು ಇನ್ನು ಮುಂದೆ ಯಾವುದೇ ಸಮಸ್ಯೆ ಇಲ್ಲದೇ ಸರಳವಾಗಿ ಆನ್‌ಲೈನ್‌ನಲ್ಲಿಯೇ ಇ-ಫೈಲಿಂಗ್‌ ಮಾಡಬಹುದು ಎಂದು ಜಿಲ್ಲಾ (ವಾರ್ಡ್‌-1ರ) ಆದಾಯ ತೆರಿಗೆ ಅಧಿಕಾರಿ ದೇಬಸುಂದರ್‌ ಗೋರ್‌ ಹೇಳಿದರು.

ನಗರದ ಗಂಜ್‌ ಆವರಣದಲ್ಲಿರುವ ಜಿಲ್ಲಾ ವಾಣಿಜ್ಯೋದ್ಯಮಿಗಳ ಸಂಘದ ವತಿಯಿಂದ ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ಆನ್‌ಲೈನ್‌ ತೆರಿಗೆ ಪಾವತಿ ಮತ್ತು ಟಿಡಿಎಸ್‌ ವ್ಯವಸ್ಥೆ ಕುರಿತು ಏರ್ಪಡಿಸಲಾಗಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಆನ್‌ಲೈನ್‌ ಆಗಿರುವುದರಿಂದ ಪ್ರತಿಯೊಬ್ಬ ನಾಗರಿಕರು ನಮ್ಮ ಇಲಾಖೆ ವೆಬ್‌ಸೈಟ್‌ಗೆ ಭೇಟಿ ನೀಡಿ ನಿಮ್ಮ ವ್ಯವಹಾರ ವ್ಯಾಪಾರ ಇಲ್ಲವೆ ವೈಯಕ್ತಿಕ ಆದಾಯದ ಮೇಲೆ ತೆರಿಗೆ ಪಾವತಿಸಬಹುದಾಗಿದೆ. ಇದರಿಂದ ವ್ಯಾಪಾರ ವ್ಯವಹಾರ ಆರ್ಥಿಕ ಶಿಸ್ತಿಗೆ ಒಳಪಡಲಿದೆ. ಅಲ್ಲದೇ ದೇಶದ ಅರ್ಥ ವ್ಯವಸ್ಥೆಸಹ ಒಂದು ಶಿಸ್ತಿಗೆ ಒಳಪಡಲಿದೆ ಎಂದು ಹೇಳಿದರು.

ಯಾವುದೇ ವ್ಯವಹಾರ ಇಲ್ಲವೇ ಕೊಡುಕೊಳೆ ನಡೆದಾಗ ತೆರಿಗೆ ಕಡಿತ ಮಾಡಿಕೊಳ್ಳಲಾಗುತ್ತದೆ. ನಂತರ ನೀವು ಆದಾಯ ತೆರಿಗೆ ಅರ್ಜಿ ತುಂಬಿದಲ್ಲಿ ನಿಮ್ಮಿಂದ ಕಡಿತಗೊಂಡ ಹೆಚ್ಚುವರಿ ಹಣವನ್ನು ಮರಳಿಸುವ ವ್ಯವಸ್ತೆ ಟಿಡಿಎಸ್‌ನಲ್ಲಿದೆ ಎಂದು ವಿವರಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ವಾಣಿಜ್ಯೋದ್ಯಮಿಗಳ ಸಂಘದ ಗೌರವ ಕಾರ್ಯದರ್ಶಿ ಚನ್ನಮಲ್ಲಿಕಾರ್ಜುನ ಅಕ್ಕಿ ಮಾತನಾಡಿ, ಈ ಸಲದ ಬಜೆಟ್‌ನಲ್ಲಿ ಒಂದು ಕೋಟಿ ವರೆಗೆ ನಗದು ವ್ಯವಹಾರ ಮಾಡಬಹುದು. ಇದನ್ನು ಮೀರಿದವರಿಗೆ ಶೇ.2ರಷ್ಟು ಟಿಡಿಎಸ್‌ ಕಡಿತ ಮಾಡಲಾಗುತ್ತಿದೆ. ಇದರಿಂದ ನಿತ್ಯ ನಗದು ವ್ಯವಹಾರ ಮಾಡುವವರಿಗೆ ತೊಂದರೆಯಾಗಿದೆ ಎಂದು ಹೇಳಿದರು.

ರೈತರು ಹೆಚ್ಚಾಗಿ ನಗದು ವ್ಯವಹಾರ ಮಾಡುತ್ತಾರೆ. ಅವರು ಹಣ ತಂದು ಕೊಡುವುದರಿಂದ ಅವರ ಜತೆ ಆನ್‌ಲೈನ್‌ ವ್ಯವಹಾರ ಸಾಧ್ಯವಾಗುತ್ತಿಲ್ಲ. ಗಂಜ್‌ ಒಂದರಲ್ಲಿಯೇ ನಿತ್ಯ ಒಂದು ಕೋಟಿ ನಗದು ಸಂಗ್ರಹವಾದರೆ ಇದಕ್ಕೆ 2 ಲಕ್ಷ ರೂ. ಸರ್ಕಾರ ಕಡಿತ ಮಾಡಿಕೊಂಡು ಹಣ ಇಟ್ಟುಕೊಂಡರೆ ವ್ಯಾಪಾರಸ್ಥರಿಗೆ ತೀವ್ರ ತೊಂದರೆಯಾಗುತ್ತದೆ. ಇದು ಒಂದು ರೀತಿ ರೈತರು ಆನ್‌ಲೈನ್‌ ವ್ಯವಹಾರ ಮಾಡದಿದ್ದರೆ ವರ್ತಕರಿಗೆ ಬರೆ ಎಳೆದಂತೆ ಸರಿ. ಆದ್ದರಿಂದ ಇದಕ್ಕೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.

ಎಲ್ಲ ವ್ಯವಹಾರಸ್ಥರಿಗೆ ಅನುಕೂಲವಾಗುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಹೇಳಿದರು.

ಯಾದಗಿರಿ ನಗರದ ಹಿರಿಯ ಲೆಕ್ಕ ಪರಿಶೋಧಕ (ಚಾರ್ಟೆಡ್‌ ಅಕೌಂಟೆಂಟ್) ಸಂತೋಷ ಪಾಟೀಲ ಟಿಡಿಎಸ್‌ ಕುರಿತು ವಿವರವಾಗಿ ಮಾತನಾಡಿ, ತೆರಿಗೆ ಕಡಿತವಾದರೂ ನಂತರ ಶಿಸ್ತುಬದ್ಧವಾಗಿ ಆದಾಯ ತೆರಿಗೆ ಪಾವತಿ ಮಾಡಿದಾಗ ನಿಮ್ಮ ಹೆಚ್ಚುವರಿ ಹಣ ಮರಳಿ ಪಡೆಯಲು ಇದರಲ್ಲಿ ಅವಕಾಶ ವಿದೆ. ಆದರೆ ದೊಡ್ಡ ವ್ಯವಹಾರಸ್ಥರಿಗೆ ಟಿಡಿಎಸ್‌ನಿಂದ ಆರ್ಥಿಕ ಸಮಸ್ಯೆಯಾಗುತ್ತದೆ. ಇದು ಸರ್ಕಾರ ಮಟ್ಟದಲ್ಲಿ ಆಗಿರುವ ತೀರ್ಮಾನವಾಗಿದೆ. ಆದ್ದರಿಂದ ಸರ್ಕಾರ ಮಟ್ಟದಲ್ಲಿಯೇ ಪರಿಹಾರ ಸಾಧ್ಯ ಎಂದು ಹೇಳಿದರು.

ಉಪಾಧ್ಯಕ್ಷ ವಿಷ್ಣುಕುಮಾರ ವ್ಯಾಸ್‌ ಕಾಂತಿಲಾಲ್ ದೋಕಾ, ದಿನೇಶ ಜೈನ್‌, ಭರತ ಭಾನುಷಾಲಿ, ಸೋಮನಾಥ ಜೈನ್‌, ರಾಜೇಂದ್ರ ಗಾಂದಿ, ಪರಮಾನಂದರೆಡ್ಡಿ ಕೊಲ್ಲೂರು, ಲಾಯಿಕ್‌ ಹುಸೇನ ಬಾದಲ್, ಸುರೇಶ ಬಾಣಾ, ವೀರೇಶಗೌಡ ಗೋನಾಲ ಸೇರಿದಂತೆ ವ್ಯಾಪಾರಸ್ಥರು ಇದ್ದರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.