ಯಾದಗಿರಿ ನಾಯಕರ ಕಾಂಗ್ರೆಸ್‌ ಸೇರ್ಪಡೆ-ಮರುಕ್ಷಣವೇ ರದ್ದು!

ಪ್ರಭಾವಿಗಳ ವಿರೋಧವೇ ಸೇರ್ಪಡೆ ರದ್ದತಿ ಕಾರಣ? ಡಾ| ಭೀಮಣ್ಣ ಮೇಟಿ ಇನ್ನಿತರರು ಕಾಂಗ್ರೆಸ್‌ ಸೇರ್ಪಡೆ ಡ್ರಾಮಾ

Team Udayavani, Apr 4, 2019, 1:00 PM IST

4-April-10

ಯಾದಗಿರಿ: ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್‌ ಅವರನ್ನು ಡಾ| ಭೀಮಣ್ಣ ಮೇಟಿ ಸನ್ಮಾನಿಸಿದರು.

ಯಾದಗಿರಿ: ಬಿಜೆಪಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಡಾ| ಭೀಮಣ್ಣ ಮೇಟಿ ಮತ್ತು ಬೆಂಬಲಿಗರನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ ಕಾಂಗ್ರೆಸ್‌ ಪಕ್ಷಕ್ಕೆ ಅಧಿಕೃತವಾಗಿ ಬುಧವಾರ ಸೇರ್ಪಡೆ ಮಾಡಿಕೊಂಡ ಕೆಲವೇ ಗಂಟೆಗಳಲ್ಲಿ ರದ್ದುಗೊಳಿಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

ಜಿಲ್ಲೆಯ ಕಾಂಗ್ರೆಸ್‌ ಪ್ರಭಾವಿ ನಾಯಕರ ವಿರೋಧವೇ ಸೇರ್ಪಡೆ ರದ್ದುಗೊಳ್ಳಲು ಕಾರಣ ಎನ್ನುವ ಮಾತು ಪ್ರಬಲವಾಗಿ ಕೇಳಿಬರುತ್ತಿದೆ. ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಡಾ| ಭೀಮಣ್ಣ ಮೇಟಿ, ದೇವಿಂದ್ರಪ್ಪ ಮುನಮಟ್ಟು, ಸಿದ್ಧಪ್ಪ ಗುಂಡಳ್ಳಿ, ಭೀಮರೆಡ್ಡಿ ಚಟ್ನಳ್ಳಿ, ಮಲ್ಲಿಕಾರ್ಜುನ ತಡಿಬಿಡಿ ಹಾಗೂ ಮಹಾಲಿಂಗರಾವ ಖಾನಾಪುರ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರು. ಪಕ್ಷಕ್ಕೆ ಬರಮಾಡಿಕೊಂಡ ಕೆಪಿಸಿಸಿ ಅಧ್ಯಕ್ಷ ಗುಂಡೂರಾವ್‌, ಯಾದಗಿರಿ ಜಿಲ್ಲೆಯ ಬಿಜೆಪಿ ಮುಖಂಡರು ನಮ್ಮ ಪಕ್ಷಕ್ಕೆ ಸೇರುತ್ತಿರುವುದು ಹೆಚ್ಚಿನ ಶಕ್ತಿ ತುಂಬುವ ಕೆಲಸವಾಗಿದೆ. ಕಲಬುರಗಿ ಮತ್ತು ರಾಯಚೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ. ಚುನಾವಣೆ ಇರುವ ಹಿನ್ನೆಲೆಯಲ್ಲಿ ಪಕ್ಷದ ಚಟುವಟಿಕೆಯಲ್ಲಿ ತೊಡಗುವಂತೆ ಹೇಳಿದ್ದರು. ಆದರೇ, ಕೆಲ ಗಂಟೆಗಳಲ್ಲಿಯೇ ಭೀಮಣ್ಣ ಮೇಟಿ ಮತ್ತು ಇತರರ ಸೇರ್ಪಡೆ ರದ್ದುಗೊಳಿಸಿ ಕೆಪಿಸಿಸಿ ಚುನಾವಣೆ ನಿರ್ವಹಣೆ ಸಮಿತಿ ಅಧ್ಯಕ್ಷ ಪ್ರಕಾಶ ಕೆ. ರಾಠೊಡ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಇಂತಹದೊಂದು ರಾಜಕೀಯ ಆಟ ನಡೆದಿದ್ದು, ಕೆಪಿಸಿಸಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರೂ ಸೇರಿದಂತೆ ಮುಖಂಡರ ಗಮನಕ್ಕಿಲ್ಲದೇ ಭೀಮಣ್ಣ ಮೇಟಿ ಮತ್ತು ಬೆಂಬಲಿಗರನ್ನು ಸೇರ್ಪಡೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಸ್ಥಳೀಯ ನಾಯಕರೊಂದಿಗೆ ಚರ್ಚಿಸದೇ ನಿರ್ಧಾರ ಕೈಗೊಂಡಿರುವುದರಿಂದ ಪ್ರಭಾವಿ ನಾಯಕರೊಬ್ಬರು ಅವರಿಂದಲೇ ಚುನಾವಣೆ ನಡೆಸಿಕೊಳ್ಳಿ ಎಂದು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಇದರಿಂದ ಹೈಕ ಪ್ರಮುಖರು ಕೆಪಿಸಿಸಿಯನ್ನು ಸಂಪರ್ಕಿಸಿ ಮನದಟ್ಟು ಮಾಡಿದ್ದಾರೆ ಎನ್ನಲಾಗಿದೆ.

ಮೇಟಿ ಜತೆ ಸೇರ್ಪಡೆಗೆ ತೆರಳಿದ್ದ ಭೀಮರೆಡ್ಡಿ ಚಟ್ನಳ್ಳಿ ಎಂಬುವವರು ಈ ಮೊದಲಿನಿಂದಲೂ ಕಾಂಗ್ರೆಸ್‌ನಲ್ಲಿಯೇ ಇದ್ದಾರೆ. ಅಸಂಘಟಿತ ಕಾರ್ಮಿಕರ ಕಾಂಗ್ರೆಸ್‌ ಸಮಿತಿಯ ಸದಸ್ಯರಾಗಿದ್ದಾರೆ ಎಂದು ಪಕ್ಷದ ಸ್ಥಳೀಯ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಬಿಜೆಪಿಯಲ್ಲಿ ಮೇಟಿ ಕಡೆಗಣಿಸಿದರೇ?: 2 ವರ್ಷಗಳ ಹಿಂದೆಯಷ್ಟೇ ಬಿಜೆಪಿಗೆ ಸೇರಿದ್ದ ಡಾ| ಭೀಮಣ್ಣ ಮೇಟಿಗೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿ ವಹಿಸಲಾಗಿತ್ತು. ಅಲ್ಲದೇ ಮೇಟಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದನ್ನು ಬಿಜೆಪಿ ಹೈಕಮಾಂಡ್‌ಗೆ ಮಾಹಿತಿ ಸಲ್ಲಿಸಲಾಗಿದೆ ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ.

ಕಾರಣ ಏನು?
ಕೆಪಿಸಿಸಿ ಡಾ| ಭೀಮಣ್ಣ ಮೇಟಿ ಇತರರ ಸೇರ್ಪಡೆ ವಿಚಾರವಾಗಿ ಜಿಲ್ಲೆಯ ಮುಖಂಡರ ಗಮನಕ್ಕೆ ಏಕೆ ತಂದಿಲ್ಲ ಎಂದು ಕಾಂಗ್ರೆಸ್‌ನಲ್ಲಿಯೇ ಚರ್ಚೆಯಾಗುತ್ತಿದೆ. ಸುಮಾರು ವರ್ಷಗಳಿಂದ ಪಕ್ಷಕ್ಕಾಗಿ ದುಡಿಯುತ್ತಿರುವ ಹಿರಿಯರೊಂದಿಗೆ ಚರ್ಚೆ ನಡೆಸದೇ ಇಂತಹ ನಿರ್ಧಾರಕ್ಕೆ ಪ್ರಭಾವಿಗಳು ವಿರೋಧ ವ್ಯಕ್ತಪಡಿಸಿ ಹೈಕ ಭಾಗದ ನಾಯಕರಿಂದ ಕೆಪಿಸಿಸಿ ಮೇಲೆ ಒತ್ತಡ ಹೇರಿದ್ದರಿಂದ ಸೇರ್ಪಡೆ ರದ್ದುಗೊಂಡಿದೆ ಎನ್ನುವ ಮಾಹಿತಿ ಕಾಂಗ್ರೆಸ್‌ ಮೂಲಗಳಿಂದ ಲಭ್ಯವಾಗಿದೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.