ಹೋಂ ಕ್ವಾರಂಟೈನ್‌ ವಿರೋಧಿಸುವಂತಿಲ್ಲ

ಅಗತ್ಯ ಮುಂಜಾಗ್ರತಾ ಕ್ರಮಕ್ಕೆ ಸೂಚನೆ|ವಲಸೆ ಕಾರ್ಮಿಕರಿಗೆ ಪಡಿತರ ವಿತರಿಸಲು ಕ್ರಮ ಕೈಗೊಳ್ಳಿ

Team Udayavani, May 31, 2020, 12:35 PM IST

31-May-07

ಸಾಂದರ್ಭಿಕ ಚಿತ್ರ

ಯಾದಗಿರಿ: ಹೋಂ ಕ್ವಾರಂಟೈನ್‌ನಲ್ಲಿರುವುದಕ್ಕೆ ಗ್ರಾಮಸ್ಥರು ಯಾವುದೇ ಕಾರಣಕ್ಕೂ ವಿರೋಧಿಸುವಂತಿಲ್ಲ. ಅಲ್ಲದೆ ಹೋಂ ಕ್ವಾರಂಟೈನ್‌ ಗೊಳಗಾದ ವ್ಯಕ್ತಿಗಳು ಕೂಡ ಮನೆ ಬಿಟ್ಟು ಹೊರಗಡೆ ಬರತಕ್ಕದ್ದಲ್ಲ ಎಂದು ಪ್ರಾದೇಶಿಕ ಆಯುಕ್ತರು ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಡಾ.ಎನ್‌.ವಿ. ಪ್ರಸಾದ್‌ ಎಚ್ಚರಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕೋವಿಡ್‌-19 ತಡೆಗೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮಮಟ್ಟದ ಟಾಸ್ಕ್ಫೋರ್ಸ್‌ ಸಮಿತಿಗಳಲ್ಲಿರುವ ಜನಪ್ರತಿನಿಧಿಗಳು, ಪಿಡಿಒ, ಗ್ರಾಮ ಲೆಕ್ಕಾಧಿಕಾರಿಗಳು ಹೋಂ ಕ್ವಾರಂಟೈನ್‌ನಲ್ಲಿದ್ದವರ ಚಲನವಲನಗಳ ಮೇಲೆ ನಿಗಾವಹಿಸಬೇಕು. ಮನೆಬಿಟ್ಟು ಹೊರಗಡೆ ಓಡಾಡಿದಲ್ಲಿ ಅಥವಾ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಲ್ಲಿ ಜಿಲ್ಲಾಡಳಿತದ ಕಂಟ್ರೋಲ್‌ ರೂಂ. 08473 253950 ಸಂಖ್ಯೆಗೆ ಮಾಹಿತಿ ನೀಡಲು ತಿಳಿಸಿ ಎಂದು ಸಲಹೆ ನೀಡಿದರು.

ಇನ್ನು ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ಇರಲಿ ಅಥವಾ ಇಲ್ಲದಿರಲಿ ಆಹಾರ ಧಾನ್ಯ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಸರ್ಕಾರದ ಹೊಸ ಮಾರ್ಗಸೂಚಿಯಂತೆ ಹೊರ ರಾಜ್ಯಗಳಿಂದ ಬಂದ ಕಾರ್ಮಿಕರಿಗೆ ನಿಗದಿತ ಅವಧಿವರೆಗೆ ಸಾಂಸ್ಥಿಕ ಕ್ವಾರಂಟೈನ್‌ ನಂತರ ಹೋಂ ಕ್ವಾರಂಟೈನ್‌ ಕಡ್ಡಾಯವಾಗಿದೆ. ಇದಕ್ಕಾಗಿ ಜಿಲ್ಲಾಡಳಿತ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಕ್ವಾರಂಟೈನ್‌ನ ಅವಧಿಯಲ್ಲಿ ಶಿಷ್ಟಾಚಾರದಂತೆ ಗಂಟಲು ದ್ರವ ಮಾದರಿ ಸಂಗ್ರಹಿಸಬೇಕು. ನಂತರ ಅವರ ಆರೋಗ್ಯ ಸ್ಥಿತಿ ಮತ್ತು ಯಾವ ರಾಜ್ಯದಿಂದ ಹಿಂದಿರುಗಿದವರು ಎಂಬ ಆಧಾರದ ಮೇಲೆ ಹೋಂ ಕ್ವಾರಂಟೈನ್‌ಗೆ ಸೂಚಿಸಬಹುದು. ಮನೆಗೆ ಕಳುಹಿಸುವ ಮುನ್ನ ಕ್ವಾರಂಟೈನ್‌ಗೆ ಒಳಪಟ್ಟವರ ಕೈ ಮೇಲೆ ಸ್ಟ್ಯಾಂಪಿಂಗ್‌ ಮತ್ತು ಹೆಲ್ತ್‌ ಸ್ಕ್ರೀನಿಂಗ್‌ ಮಾಡಬೇಕು. ಈ ಸಂದರ್ಭದಲ್ಲಿ ಅವರ ವಿಳಾಸ, ಮೊಬೈಲ್‌ ಸಂಖ್ಯೆ ಸೇರಿದಂತೆ ಇನ್ನಿತರ ವಿವರಗಳನ್ನು ಮತ್ತೂಮ್ಮೆ ಖಚಿತಪಡಿಸಿಕೊಳ್ಳಬೇಕು. ಮನೆಯಲ್ಲಿ ವೃದ್ಧರು, ಮಕ್ಕಳು ಮತ್ತು ಗರ್ಭಿಣಿಯರಿದ್ದು ಹೋಂ ಕ್ವಾರಂಟೈನ್‌ ಬದಲು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರುವುದಾಗಿ ಮನವಿ ಮಾಡಿದಲ್ಲಿ 14 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿರಲು ವ್ಯವಸ್ಥೆ ಮಾಡಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಮಾತನಾಡಿ, ಹೊರ ರಾಜ್ಯಗಳಿಂದ ಯಾದಗಿರಿ ಜಿಲ್ಲೆಗೆ ಆಗಮಿಸಿದ ಒಟ್ಟು 13,141 ಜನರನ್ನು ಜಿಲ್ಲೆಯ 211 ಇನ್‌
ಸ್ಟಿಟ್ಯೂಶನಲ್‌ ಕ್ವಾರಂಟೈನ್‌ ಸೆಂಟರ್‌ಗಳಲ್ಲಿ ಪ್ರತ್ಯೇಕವಾಗಿರಿಸಲಾಗಿದೆ. ಈ ಪೈಕಿ ಈಗಾಗಲೇ 11 ಸಾವಿರ ಜನರ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ವಲಸೆ ಕಾರ್ಮಿಕರ ಅವಲೋಕನ ಅವಧಿ ಮುಕ್ತಾಯವಾದ ನಂತರ ಅವರನ್ನು ಬಿಡುಗಡೆಗೊಳಿಸುವಾಗ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ತಾಲೂಕುವಾರು ನೋಡಲ್‌ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಮೇ 29ರಂದು 1502 ಜನರನ್ನು ಕ್ವಾರಂಟೈನ್‌ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಕೋವಿಡ್‌19 ಟೆಸ್ಟ್‌ ಪೂರ್ವಭಾವಿಯಾಗಿ ನಡೆಸುವ 2 ಟ್ರೂನ್ಯಾಟ್‌ ಲ್ಯಾಬ್‌ಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಹೊಸ ಜಿಲ್ಲಾಸ್ಪತ್ರೆಯಲ್ಲಿ ಆರ್‌ಟಿ-ಪಿಸಿಆರ್‌ ಟೆಸ್ಟ್‌ ಲ್ಯಾಬ್‌ ಸ್ಥಾಪನೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಷಿನ್‌ ಬಂದ ನಂತರ ಜಿಲ್ಲೆಯಲ್ಲಿಯೇ ಪರೀಕ್ಷೆ ನಡೆಸಬಹುದು. ಹೊಸ ಜಿಲ್ಲಾಸ್ಪತ್ರೆಯಲ್ಲಿ 132 ಹಾಸಿಗೆಗಳಿಗೆ ಹೈಫ್ಲೋ ಆಕ್ಸಿಜನ್‌ ಸರಬರಾಜು ವ್ಯವಸ್ಥೆ ಮಾಡಲಾಗಿದೆ. 33 ತಜ್ಞ ವೈದ್ಯರು, 63 ವೈದ್ಯರು, 18 ಶುಶ್ರೂಷಕರು, 16 ಲ್ಯಾಬ್‌ ತಂತ್ರಜ್ಞರು ಹಾಗೂ 20 ಫಾರ್ಮಾಸಿಸ್ಟ್‌ಗಳ ಅವಶ್ಯಕತೆ ಇದೆ. ಅರ್ಜಿ ಕರೆದರೂ ತಜ್ಞವೈದ್ಯರು, ವೈದ್ಯರು, ಲ್ಯಾಬ್‌ ತಂತ್ರಜ್ಞರು ಬರುತ್ತಿಲ್ಲ ಎಂದು ತಿಳಿಸಿದರು.

ಶೇ.78.47 ಸರ್ವೇ ಕಾರ್ಯ
ಜಿಲ್ಲೆಯಲ್ಲಿ ಸುರಪುರದ ಆಸರ್‌ವೊಹಲ್ಲಾ, ಶಹಾಪುರ ತಾಲೂಕಿನ ಕನ್ಯಾಕೋಳೂರು, ಚಂದಾಪುರ ಕೆಳಗಿನ ತಾಂಡಾ ಮತ್ತು ಯಾದಗಿರಿ ನಗರದ ದುಖಾನವಾಡಿ ಸೇರಿ ಒಟ್ಟು 4 ಕಂಟೇನ್ಮೆಂಟ್‌ ಝೋನ್‌ಗಳನ್ನು ಗುರತಿಸಲಾಗಿದ್ದು, ಸಿಝಡ್‌ ಆ್ಯಪ್‌ ಮೂಲಕ ಶೇ.78.47ರಷ್ಟು ಸರ್ವೇ ಮಾಡಲಾಗಿದೆ. ಇನ್ನು ಜಿಲ್ಲೆಯಾದ್ಯಂತ ಮತಗಟ್ಟೆ ಅಧಿಕಾರಿಗಳು, ಶಿಕ್ಷಕರು ಮತ್ತು ಆಶಾ ಕಾರ್ಯಕರ್ತೆಯರಿಂದ ಹೆಲ್ತ್‌ ವಾಚ್‌ ಆ್ಯಪ್‌ ಮೂಲಕ ನಡೆಸುತ್ತಿರುವ ಕುಟುಂಬಗಳ ಸಾರ್ವತ್ರಿಕ ಸಮೀಕ್ಷೆ ಕಾರ್ಯ ಶೇ.79.44ರಷ್ಟು ಪೂರ್ಣಗೊಂಡಿದೆ ಎಂದು ವಿವರಿಸಿದರು. ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.