ಬಸವಸಾಗರದಿಂದ ಕೃಷ್ಣಾ ನದಿಗೆ 1.28 ಲಕ್ಷ ಕ್ಯೂಸೆಕ್ ನೀರು
Team Udayavani, Aug 18, 2022, 5:57 PM IST
ನಾರಾಯಣಪುರ: ಬಸವಸಾಗರ ಜಲಾಶಯಕ್ಕೆ ನಿರಂತರ ಒಳಹರಿವು ಬರುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ ಕೃಷ್ಣಾ ನದಿಗೆ 1.28 ಲಕ್ಷ ಕ್ಯೂಸೆಕ್ನಷ್ಟು ನೀರನ್ನು ಹರಿಸಲಾಗುತ್ತಿದೆ. ಕೃಷ್ಣಾ ನದಿ ಜಲಾನಯನ ಪ್ರದೇಶಗಳಲ್ಲಿ ಮಳೆ ಪ್ರಮಾಣ ತಗ್ಗಿದ್ದರೂ ನದಿಗಳಲ್ಲಿ ನೀರಿನ ಹರಿವು ಇದ್ದು, ಹೀಗಾಗಿ ಆಲಮಟ್ಟಿ ಶಾಸ್ತ್ರೀ ಸಾಗರದಿಂದ ಬಸವಸಾಗರಕ್ಕೆ ಬರುವ ಒಳಹರಿವು ಮಂಗಳವಾರ ಬೆಳಗ್ಗೆ 1.50 ಲಕ್ಷ ಕ್ಯೂಸೆಕ್ನಷ್ಟಿತ್ತು. ಸಂಜೆ 1.25 ಲಕ್ಷಕ್ಕೆ ಇಳಿಕೆಯಾಗಿ, ಬುಧವಾರ ಬೆಳಗ್ಗೆ ಒಳಹರಿವು ಯಥಾಸ್ಥಿತಿ ಕಾಯ್ದುಕೊಂಡಿದೆ.
ಪ್ರಸ್ತುತ ಜಲಾಶಯದ 14 ಕ್ರಸ್ಟ್ ಗೇಟ್ಗಳನ್ನು ತೆರೆದು 1.22 ಲಕ್ಷ ಕ್ಯೂಸೆಕ್ ಹಾಗೂ ಮುರಡೇಶ್ವರ ಜಲವಿದ್ಯುತ್ ಸ್ಥಾವರ ಮೂಲಕ ಆರು ಸಾವಿರ ಒಟ್ಟು 1.28 ಕ್ಯೂಸೆಕ್ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಸದ್ಯ ಆಲಮಟ್ಟಿ ಶಾಸ್ತ್ರೀ ಜಲಾಶಯದಿಂದ ಬಸವಸಾಗರಕ್ಕೆ ಬರುವ ಒಳಹರಿವನ್ನು ಗಮನಿಸಿ ಕೃಷ್ಣಾ ನದಿಗೆ ನೀರು ಹರಿಸಲಾಗುತಿದೆ. ಒಂದೊಮ್ಮೆ ಜಲಾಶಯಕ್ಕೆ ಬರುವ ಒಳಹರಿವು ಹೆಚ್ಚಾದರೆ ನದಿಗೆ ನೀರು ಹರಿಸುವ ಪ್ರಮಾಣ ಹೆಚ್ಚಾಗಲಿದೆ.
ಕಡಿಮೆಗೊಂಡರೆ ನದಿಗೆ ನೀರು ಹರಿಸುವುದು ಕಡಿಮೆಯಾಗುವ ಸಾಧ್ಯತೆ ಇದೆ. ನದಿಯಲ್ಲಿ ನೀರಿನ ಹರಿವು ಏರಿಳಿತವಾಗುತ್ತಿದೆ. ನದಿ ತೀರದ ಗ್ರಾಮಗಳ ಜನ ಜಾನುವಾರುಗಳು ಮುಂಜಾಗ್ರತಾ ಕ್ರಮವಾಗಿ ನದಿಗೆ ಇಳಿಯದಂತೆ ಎಚ್ಚರ ವಹಿಸಬೇಕು ಎಂದು ಅಣೆಕಟ್ಟು ಅಧಿಕಾರಿಗಳು ಮನವಿ ಮಾಡಿದ್ದಾರೆ. ಜಲಾಶಯದ ಗರಿಷ್ಠ 492.25ಮೀ. ಎತ್ತರದಲ್ಲಿ ಬುಧವಾರ 491.71 ಮೀ. ನೀರಿದ್ದು, ಗರಿಷ್ಠ ಸಂಗ್ರಹ 33.31 ಟಿಎಂಸಿ ಅಡಿಗಳಲ್ಲಿ 30.83 ಟಿಎಂಸಿ ಅಡಿ ನೀರು ಸಂಗ್ರಹವಿದೆ. ಒಳಹರಿವು 1.25 ಲಕ್ಷ ಕ್ಯೂಸೆಕ್ ಇದ್ದರೆ, ಹೊರ ಹರಿವು 1.28 ಲಕ್ಷ ಕ್ಯೂಸೆಕ್ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ