ಕೃಷ್ಣಾ ನದಿಗೆ 19 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
Team Udayavani, Aug 30, 2022, 6:38 PM IST
ನಾರಾಯಣಪುರ: ಬಸವಸಾಗರ ಜಲಾಶಯದ 492.25 ಮೀ. ಗರಿಷ್ಠ ಎತ್ತರದಲ್ಲಿ 492.11 ಮೀಟರ್ಗೆ ನೀರು ತಲುಪಿದೆ. ಜಲಾಶಯದ ಗರಿಷ್ಠ 33.31 ಟಿಎಂಸಿ ಸಂಗ್ರಹ ಮಟ್ಟದಲ್ಲಿ 32.65 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹವಾಗಿದ್ದರಿಂದ, ಜಲಾಶಯ ಶೇ. 98 ಪ್ರತಿಶತದಷ್ಟು ಭರ್ತಿಯಾಗಿದೆ ಎಂದು ಕೆಬಿಜೆಎನ್ಎಲ್ ಮೂಲಗಳಿಂದ ತಿಳಿದು ಬಂದಿದೆ.
ಸದ್ಯ ಬಸವಸಾಗರಕ್ಕೆ ಆಲಮಟ್ಟಿ ಶಾಸ್ತ್ರೀ ಸಾಗರದಿಂದ ಒಳಹರಿವು 20 ಸಾವಿರ ಕ್ಯೂಸೆಕ್ ಇದ್ದು ಜಲಾಶಯದ ಸಂಗ್ರಹ ಮಟ್ಟಕ್ಕೂ ಮೀರಿ ಹೆಚ್ಚುವರಿಯಾಗಿ ಬರುತ್ತಿರುವ ನೀರನ್ನು ನದಿಗೆ ಹರಿಸಲಾಗುತ್ತಿದೆ. ಮಾಹಿತಿಯಂತೆ ಸೋಮವಾರ ಸಂಜೆ ಜಲಾಶಯದ ಎರಡು ಕ್ರಸ್ಟ್ಗೇಟ್ ಗಳನ್ನು ತೆರದು 13 ಸಾವಿರ ಕ್ಯೂಸೆಕ್ ಹಾಗೂ ಎಂಪಿಸಿಎಲ್ ಖಾಸಗಿ ಜಲವಿದ್ಯುತ್ ಸ್ಥಾವರದಿಂದ 6 ಸಾವಿರ ಕ್ಯೂ. ಸೇರಿ ಒಟ್ಟು 19 ಸಾವಿರ ಕ್ಯೂಸೆಕ್ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ.
ಒಂದೊಮ್ಮೆ ಕೃಷ್ಣಾ ಜಲಾನಯನ ಹಾಗೂ ಬಸವಸಾಗರ ಹಿನ್ನೀರು ವ್ಯಾಪ್ತಿಯಲ್ಲಿ ಮಳೆ ಸುರಿದರೆ ಇಲ್ಲವೆ ಆಲಮಟ್ಟಿ ಶಾಸ್ತ್ರೀ ಜಲಾಶಯದಿಂದ ಹೊರಹರಿವು ಹೆಚ್ಚಿಸಿದರೆ ಬಸವಸಾಗರದಿಂದ ನದಿಗೆ ನೀರು ಹರಿಸುವ ಪ್ರಮಾಣ ಹೆಚ್ಚಿಸಲಾಗುವುದು. ಒಳಹರಿವು ಕಡಿಮೆಯಾದರೆ ನದಿಗೆ ನೀರು ಹರಿಸುವುದು ಕಡಿಮೆಗೊಳಿಸಲಾಗುವುದು ಎಂದು ಪ್ರಭಾರ ಕಾರ್ಯನಿರ್ವಾಹಕ ಎಂಜನಿಯರ್ ಎಂ. ಪ್ರಕಾಶ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ