318 ಅಂಗನವಾಡಿ ಕೇಂದ್ರಗಳಿಗಿಲ್ಲ ಸ್ವಂತ ಕಟ್ಟಡ


Team Udayavani, Jul 1, 2018, 12:55 PM IST

ray-2.jpg

ಯಾದಗಿರಿ: ಜಿಲ್ಲೆಯಲ್ಲಿ 1386 ಅಂಗನವಾಡಿ ಕೇಂದ್ರಗಳ ಪೈಕಿ 944 ಕೇಂದ್ರಗಳಿಗೆ ಸ್ವಂತ ಕಟ್ಟಡ ಸೌಕರ್ಯವಿದ್ದು, 318 ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳಿಲ್ಲದೆ ಇರುವುದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಕಾಳಜಿವಹಿಸುವ ಇಲಾಖೆಗೆ ಜಿಲ್ಲೆಯಲ್ಲಿ ಮೂಲಸೌಕರ್ಯಗಳ ಕೊರತೆಯುಂಟಾಗಿದೆ.

ಸುಮಾರು ವರ್ಷಗಳಿಂದ ನಿರ್ಮಿತಿ ಕೇಂದ್ರ ಮತ್ತು ಪಿಆರ್‌ಇಗೆ ವಹಿಸಿರುವ ಕಾಮಗಾರಿಗಳು ಹಲವೆಡೆ ಪ್ರಾರಂಭವಾಗದೇ ಇರುವುದು ತಿಂಗಳಿಗೊಮ್ಮೆ ಕೇವಲ ಕಟ್ಟಡಗಳ ಬಾಡಿಗೆಯೇ ಲಕ್ಷಾಂತರ ರೂಪಾಯಿ ವ್ಯಯಿಸಬೇಕಾಗಿರುವ ಪರಿಸ್ಥಿತಿ ಇಲಾಖೆಗೆ ಎದುರಾಗಿದೆ.

ಜಿಲ್ಲೆಯ ಶಹಾಪುರ ತಾಲೂಕಿಗೆ 386 ಅಂಗನವಾಡಿ ಕೇಂದ್ರಗಳು ಮತ್ತು 9 ಮಿನಿ ಅಂಗನವಾಡಿ ಕೇಂದ್ರಗಳು ಮಂಜೂರಾಗಿವೆ. 279 ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸಿದರೆ, ಪಂಚಾಯಿತಿ ಕಟ್ಟಡದಲ್ಲಿ 12, ಸಮುದಾಯ ಭವನದಲ್ಲಿ 12 ಹಾಗೂ ಶಾಲೆ ಕಟ್ಟಡದಲ್ಲಿ 16 ಕೇಂದ್ರಗಳನ್ನು ತೆರೆಯಲಾಗಿದ್ದು, 76 ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡಗಳನ್ನು ಅವಲಂಭಿಸಿವೆ.

ಸುರಪುರ ತಾಲೂಗೆ 451 ಅಂಗನವಾಡಿ ಮತ್ತು 23 ಮಿನಿ ಅಂಗನವಾಡಿ ಕೇಂದ್ರಗಳು ಮಂಜೂರಾಗಿವ. ಇದರಲ್ಲಿ 315 ಅಂಗನವಾಡಿಗಳು ಸ್ವಂತ ಕಟ್ಟದಲ್ಲಿ ನಡೆಯುತ್ತಿವೆ. ಸಮುದಾಯ ಭವನದಲ್ಲಿ 16, ಶಾಲಾ ಕಟ್ಟಡದಲ್ಲಿ 27 ಕೇಂದ್ರಗಳಿದ್ದರೆ 116 ಅಂಗನವಾಡಿಗಳಿಗೆ ಬಾಡಿಗೆ ಕಟ್ಟಡಗಳೇ ದಿಕ್ಕು ಎನ್ನುವಂತಿದೆ.

ಯಾದಗಿರಿ ತಾಲೂಕಿನಲ್ಲಿ 239 ಅಂಗನವಾಡಿ, 4 ಮಿನಿ ಅಂಗನವಾಡಿ ಕೇಂದ್ರಗಳು ಮಂಜೂರಾಗಿವೆ. 158 ಸ್ವಂತ ಕಟ್ಟಡ ಹೊಂದಿದ್ದರೆ ಪಂಚಾಯಿತಿ ಕಟ್ಟಡದಲ್ಲಿ 3, ಸಮುದಾಯ ಭವನದಲ್ಲಿ 4, ಶಾಲಾ ಕಟ್ಟಡದಲ್ಲಿ 8 ಅಂಗನವಾಡಿಗಳು ಕಾರ್ಯನಿರ್ವಹಿಸುತ್ತಿವೆ. 

ಇನ್ನೂ 70 ಅಂಗನವಾಡಿಗಳಿಗೆ ಸ್ವಂತ ಕಟ್ಟಡದ ಭಾಗ್ಯ ಕರುಣಿಸಬೇಕಿದೆ. ಇನ್ನೂ ಯಾದಗಿರಿ ತಾಲೂಕಿನಿಂದ ವಿಭಜನೆಗೊಂಡ ನೂತನ ಗುರುಮಠಕಲ್‌ನಲ್ಲಿ ಕೂಡ ಇಂತಹದ್ದೇ ಸಮಸ್ಯೆ ಇದೆ. 260 ಅಂಗನವಾಡಿ, 14 ಮಿನಿ ಅಂಗನವಾಡಿ ಕೇಂದ್ರಗಳು ಗುರುಮಠಕಲ್‌ ತಾಲೂಕಿಗೆ ಮಂಜೂರಾಗಿದ್ದು, 192 ಕೇಂದ್ರಗಳು ಸ್ವಂತ ಕಟ್ಟಡದಲ್ಲಿದೆ. 5 ಪಂಚಾಯಿತಿ ಕಟ್ಟಡದಲ್ಲಿ, 5 ಸಮುದಾಯ ಭವನಗಳಲ್ಲಿ ಹಾಗೂ 16 ಶಾಲಾ ಕಟ್ಟಡಗಳಲ್ಲಿ ಮಕ್ಕಳಿಗೆ ಪೂರ್ವ ಪ್ರಾಥಮಿಕ ಅಕ್ಷರ ಜ್ಞಾನ ನೀಡುತ್ತಿದ್ದು, 56 ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿಯೇ ನಡೆಯುತ್ತಿವೆ.

ಸರ್ಕಾರ ಮಹಿಳೆಯರು ಮತ್ತು ಮಕ್ಕಳಿಗಾಗಿ ಜಾರಿಗೆ ತರುವ ಹಲವು ಯೋಜನೆಗಳ ಅನುಷ್ಠಾನಕ್ಕೆ ಅಂಗನವಾಡಿ ಕೇಂದ್ರಗಳು ಪ್ರಮುಖ ಪಾತ್ರವಹಿಸುತ್ತವೆ. ಅಂತಹದ್ದರಲ್ಲಿ ನಿರ್ಮಿತಿ ಕೇಂದ್ರಕ್ಕೆ ವಹಿಸಿರುವ ಅಂಗನವಾಡಿ ಕೇಂದ್ರಗಳ
ಕಟ್ಟಡಗಳ ನಿರ್ಮಾಣದಲ್ಲಿ ಜಿಲ್ಲಾಡಳಿತವೂ ಆಸಕ್ತಿವಹಿಸದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ 

„ಅನೀಲ ಬಸೂದೆ

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

1-sadsad

CHC; ದಿಢೀರ್ ಭೇಟಿ ನೀಡಿ ಸಿಬಂದಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಕಂದಕೂರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.