ಕ್ಷೌರಿಕರಿಗೆ 500 ಮಾಸ್ಕ್ ವಿತರಣೆ
Team Udayavani, May 17, 2020, 6:10 AM IST
ಸುರಪುರ: ಕೋವಿಡ್ ಸಂದರ್ಭದಲ್ಲೂ ಕ್ಷೌರಿಕರ ವೃತ್ತಿಗೆ ಅನುಮತಿ ನೀಡಲಾಗಿತ್ತು. ಆದರೆ ನಗರದಲ್ಲಿ ಕೋವಿಡ್-19 ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಪುನಃ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಅಂಗಡಿಗಳು ಶೀಘ್ರದಲ್ಲಿ ಆರಂಭವಾಗಬಹುದು ಎಂದು ಪೌರಾಯುಕ್ತ ಜೀವನ ಕಟ್ಟಿಮನಿ ಹೇಳಿದರು.
ನಗರಸಭೆ ವತಿಯಿಂದ ಶನಿವಾರ ಕಚೇರಿ ಎದುರು ಕ್ಷೌರಿಕರಿಗೆ 500 ಮಾಸ್ಕ್ ಗಳನ್ನು ಉಚಿತವಾಗಿ ವಿತರಿಸಿ ಅವರು ಮಾತನಾಡಿ, ವೃತ್ತಿಯಲ್ಲಿ ಅಂತರ ಕಾಯ್ದುಕೊಳ್ಳುವುದು ಅಸಾಧ್ಯ. ಕಾರಣ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾನಿಟೈಸರ್ ಬಳಸಿ. ಆರೋಗ್ಯದ ಬಗ್ಗೆ ಜಾಗೃತರಾಗಿರಿ ಎಂದು ತಿಳಿಸಿದರು.
ಸವಿತಾ ಸಮಾಜದ ಅಧ್ಯಕ್ಷ ಗೋಪಾಲ ಚಿನ್ನಾಕಾರ ಮಾತನಾಡಿ, ನಗರಸಭೆ ಉಚಿತವಾಗಿ ಮಾಸ್ಕ್ ವಿತರಿಸಿ ಸಹಾಯ ನೀಡಿದೆ. ಸರ್ಕಾರದ ನಿಯಮ ಕಡ್ಡಾಯವಾಗಿ ಪಾಲಿಸುತ್ತೇವೆ. ಕೆಲಸದಲ್ಲಿ ಅಂತರ ಕಾಯ್ದುಕೊಳ್ಳುತ್ತೇವೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತೇವೆ. ಪೊಲೀಸ್ ಇಲಾಖೆಗೆ ಪಿಪಿಇ ಕಿಟ್ ಮತ್ತು ಗ್ಲೌಸ್ ನೀಡಲು ಮನವಿ ಮಾಡಿದ್ದೇವೆ. ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎಂದರು.
ಸರ್ಕಾರ ಕ್ಷೌರಿಕರಿಗೆ ಪರಿಹಾರ ಘೋಷಿಸಿ ನೆರವಿನ ಹಸ್ತ ಚಾಚಿದೆ. ಅದೇ ರೀತಿ ಸರ್ಕಾರ ಕ್ಷೌರಿಕರಿಗೆ 10 ಲಕ್ಷ ರೂ. ವಿಮೆಗೆ ಒಳಪಡಿಸಬೇಕು ಎಂದು ಮನವಿ ಮಾಡಿದರು. ಸವಿತಾ ಸಮಾಜದ ರಾಜ್ಯ ಘಟಕದ ನಿರ್ದೇಶಕ ಸೂರ್ಯಕಾಂತ ಚಿನ್ನಾಕಾರ, ಚಂದ್ರಾಮ ಮುಂದಿನಮನಿ, ಯಲ್ಲಪ್ಪ ದುಗನೂರ, ರಾಮು ದೇವಿಕೇರಿ, ಗೋಪಾಲ ಬಿಳಾರ, ಗೋವಿಂದ ಚಿನ್ನಾಕಾರ, ಬಸವರಾಜ ಗೌಡಗೇರಿ, ರಾಘವೇಂದ್ರ ಕಡಬೂರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ