ಯಾದಗಿರಿ ಜಿಲ್ಲೆಯಲ್ಲಿ 873 ಸೋಂಕಿತರು


Team Udayavani, Jun 19, 2020, 7:23 AM IST

ಯಾದಗಿರಿ ಜಿಲ್ಲೆಯಲ್ಲಿ 873 ಸೋಂಕಿತರು

ಯಾದಗಿರಿ: ಜಿಲ್ಲೆಯಲ್ಲಿ ಮಹಾರಾಷ್ಟ್ರದ ಕೋವಿಡ್ ನಂಜು ಇನ್ನು ಕಾಡುತ್ತಿದ್ದು, ಗುರುವಾರ ಜಿಲ್ಲೆಯಲ್ಲಿ 8 ಜನರಿಗೆ ಸೋಂಕು ದೃಢವಾಗಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 873ಕ್ಕೆ ಏರಿಕೆಯಾಗಿದೆ.

ಗುರುವಾರ ಪತ್ತೆಯಾದ ಮೂವರು ಮಹಿಳೆಯರಲ್ಲಿ ಸೋಂಕಿನ ಮೂಲವೇ ಪತ್ತೆಯಾಗದಿರುವುದು ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯ ಸುರುಪುರ ತಾಲೂಕು ದಿವಳಗುಡ್ಡದ 38 ವರ್ಷದ ಪಿ-7894, ಹೊಸ ಸಿದ್ದಾಪುರದ 36 ವರ್ಷದ ಪಿ-7895 ಹಾಗೂ ಯಾದಗಿರಿ ನಗರದ ದುಕಾನವಾಡಿಯ 34 ವರ್ಷದ ಪಿ-7896ರಲ್ಲಿ ಸೋಂಕು ಕಾಣಿಸಿಕೊಂಡಿದೆ. ಮೂವರು ಮಹಿಳೆಯರಿಗೆ ಸೋಂಕು ಹೇಗೆ ಬಂತು ಎನ್ನುವುದು ಗೊತ್ತಾಗದೇ ಇರುವುದು ದೊಡ್ಡ ತಲೆನೋವಾಗಿದೆ. ಜನರಲ್ಲಿ ಆತಂಕವೂ ಮೂಡಿಸಿದೆ. ಸೋಂಕು ದೃಢವಾದವರು ಸೋಂಕಿತರ ಸಂಪರ್ಕಕ್ಕೆ ಬಂದಿದ್ದರೇ? ಇಲ್ಲ ಸಮುದಾಯಕ್ಕೆ ವೈರಸ್‌ ವಕ್ಕರಿಸುತ್ತಿದೆ ಎನ್ನುವ ಭಯ ಕಾಡತೊಡಗಿದೆ.

ಸೋಂಕಿತರ ಮೂಲವನ್ನು ಪತ್ತೆ ಹಚ್ಚುವಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ. ಅಲ್ಲದೆ ಸುರಪುರ ತಾಲೂಕು ಕೊಡೇಕಲ್‌ನ 7 ವರ್ಷದ ಬಾಲಕ ಪಿ- 7893, ಯಾದಗಿರಿ ತಾಲೂಕು ಚಂದಾಪುರದ 31 ವರ್ಷದ ಮಹಿಳೆ ಪಿ-7889, ವಡಗೇರಾದ 24 ವರ್ಷದ ಪುರುಷ ಪಿ-7890, ಸುರಪುರ ಬೈಚಿಬಾಳದ 30 ವರ್ಷದ ಪುರುಷ ಪಿ- 7891 ಹಾಗೂ 26 ವರ್ಷದ ಮಹಿಳೆ ಪಿ- 7892 ಮಹಾರಾಷ್ಟ್ರದ ನಂಟು ಹೊಂದಿದ್ದಾರೆ.

1026 ವರದಿ ಬಾಕಿ: ನೋವೆಲ್‌ ಕೋವಿಡ್ ವೈರಸ್‌ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ ಮಾದರಿಗಳಲ್ಲಿ ಈವರೆಗೆ 20302 ಜನರ ವರದಿ ನೆಗೆಟಿವ್‌ ಬಂದಿವೆ. ಹೊಸದಾಗಿ ಕಳುಹಿಸಲಾದ 289 ಮಾದರಿಗಳು ಸೇರಿದಂತೆ 1026 ಜನರ ವರದಿ ಬರಬೇಕಿದೆ. ಜಿಲ್ಲೆಯಲ್ಲಿ ಗುರುವಾರ ಕೋವಿಡ್‌19 ಖಚಿತಪಟ್ಟ 5 ಸೋಂಕಿತರು ಗುಣಮುಖರಾಗಿದ್ದು, ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 1356 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 2753 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ.

ಜಿಲ್ಲೆಯಲ್ಲಿ 52 ಕಂಟೇನ್ಮೆಂಟ್‌ ಝೋನ್‌ ರಚಿಸಲಾಗಿದೆ. ಹೊಸ ಜಿಲ್ಲಾಸ್ಪತ್ರೆಯಲ್ಲಿ 175 ಜನ, ಶಹಾಪುರ ಕೋವಿಡ್ ಕೇರ್‌ ಸೆಂಟರ್‌ನಲ್ಲಿ 54, ಸುರಪುರ ಕೋವಿಡ್ ಕೇರ್‌ ಸೆಂಟರ್‌ನಲ್ಲಿ 44 ಮತ್ತು ಬಂದಳ್ಳಿ ಏಕಲವ್ಯ ಕೊರೊನಾ ಕೇರ್‌ ಸೆಂಟರ್‌ನಲ್ಲಿ 68 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯ 21 ಸಾಂಸ್ಥಿಕ ಕ್ವಾರಂಟೈನ್‌ ಸೆಂಟರ್‌ಗಳಲ್ಲಿ ಒಟ್ಟು 883 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ ಖಚಿತಪಟ್ಟ ಒಟ್ಟು 873 ಪ್ರಕರಣಗಳ ಪೈಕಿ 483 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಬ್ಬರು ಮೃತಪಟ್ಟಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.