88.54 ಲಕ್ಷ ರೂ. ಕೊರತೆ ಬಜೆಟ್‌ ಮಂಡನೆ ಯಾದಗಿರಿ:

ಬೀದಿ ದೀಪಗಳ ನಿರ್ವಹಣೆ ಸೇರಿ ಇತರ ಕಾರ್ಯಕ್ರಮಗಳಿಗೆ ಹಣ ನಿಗದಿಪಡಿಸಲಾಗಿದೆ ಎಂದರು.

Team Udayavani, Apr 9, 2021, 7:12 PM IST

Budget

ಯಾದಗಿರಿ: ನಗರದ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ಪೂರಕ ಬಜೆಟ್‌ ಮಂಡಿಸಲಾಗಿದ್ದು,  ಹಿಂದಿನ ಎಲ್ಲ ಅಭಿವೃದ್ಧಿ ಕಾರ್ಯಕ್ರಮ ಮುಂದುವರಿಸಿಕೊಂಡು ಹೋಗುವ ಜತೆಗೆ ಈ ವರ್ಷ ಹಲವಾರು ಹೊಸ ಕಾರ್ಯಕ್ರಮ ರೂಪಿಸಲು ಪ್ರಯತ್ನಿಸಲಾಗಿದೆ ಎಂದು ನಗರಸಭೆ ಅಧ್ಯಕ್ಷ ವಿಲಾಸ್‌ ಪಾಟೀಲ್‌ ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಭಾಂಗಣದಲ್ಲಿ  2021-22ನೇ ಸಾಲಿಗೆ 25.78 ಕೋಟಿ ರೂ. ಗಾತ್ರದ
ಬಜೆಟ್‌ ಮಂಡಿಸಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನಲ್ಲಿ ಒಟ್ಟು 2490.06 ಲಕ್ಷ ಆದಾಯ ನಿರೀಕ್ಷಿಸಲಾಗಿದ್ದು, ಅಂದಾಜು 2578.60 ಲಕ್ಷ ಖರ್ಚಾಗಲಿದ್ದು 88.54 ಲಕ್ಷ ರೂ. ಕೊರತೆಯಾಗಲಿದ್ದು
ಹಿಂದಿನ ವರ್ಷಗಳ ಆಸ್ತಿಗೆ ತೆರಿಗೆ ಇತರ ತೆರಿಗೆ ವಸೂಲಿ ಮಾಡಿ ಕೊರತೆ ಸರಿದೂಗಿಸಲಾಗುವುದು. ಸರ್ವ ಸದಸ್ಯರು ಮತ್ತು ಸಾರ್ವಜನಿಕರ ಸಹಕಾರದಿಂದ
ನಗರದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಪತ್ರಕರ್ತರ ಕುಟುಂಬಗಳಿಗೆ ಸಹಾಯಧನಕ್ಕೆ ಯೋಜನೆ ರೂಪಿಸಲಾಗುವುದು ಎಂದು ಘೋಷಿಸಿದರು. ಬಜೆಟ್‌ ಮೇಲಿನ ಚರ್ಚೆ
ಆರಂಭಿಸುತ್ತಿದ್ದಂತೆ ಸದಸ್ಯೆ ಲಲಿತಾ ಅನಪೂರ ಮಾತನಾಡಿ, ಪತ್ರಕರ್ತರ ಕುಟುಂಬಗಳಿಗೆ ಸಹಾಯಧನ ವಿತರಣೆಗೆ ಯಾವ ಮಾನದಂಡ
ಅನುಸರಿಸಲಾಗಿದೆ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅಧ್ಯಕ್ಷರು, ಆರೋಗ್ಯ ಮತ್ತು ಅಪಘಾತ ಇತರ ಸಂಕಷ್ಟದ ಸಂದರ್ಭದಲ್ಲಿ ಸಹಾಯಧನ
ನೀಡಲಾಗುವುದು. ಇದಕ್ಕಾಗಿ ಈ ಬಜೆಟ್‌ನಲ್ಲಿ 5 ಲಕ್ಷ ರೂ. ಮೀಸಲಿಡಲಾಗಿದೆ ಎಂದರು.

ವಿವಿಧ ವಾರ್ಡ್‌ಗಳಲ್ಲಿರುವ ಸಾರ್ವಜನಿಕ ಶೌಚಾಲಯ ಸ್ವತ್ಛತೆಗೆ, ಪ.ಜಾತಿ, ಪ.ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಅಲ್ಲದೇ ಅಂಗವಿಕಲರ ಅಭಿವೃದ್ಧಿಗಾಗಿ ಕಾರ್ಯಯೋಜನೆ  ರೂಪಿಸಲಾಗಿದೆ. ವಾರ್ಡ್‌ಗಳ ಸ್ವತ್ಛತೆ, ನೀರು  ಹಾಗೂ ಇತರ ಸಮಸ್ಯೆ ನೀಗಿಸಲು ಪ್ರತಿ ವಾರ್ಡ್‌ಗೆ 5 ಲಕ್ಷ ರೂ. ನಿಗ ಪಡಿಸಿ ಒಟ್ಟು 155.00 ಲಕ್ಷ ರೂ. ಮೀಸಲಿರಿಸಲಾಗಿದೆ ಎಂದರು.

ಪೌರ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ, ಶುಲ್ಕ ಮತ್ತು ಪುಸ್ತಕಗಳಿಗಾಗಿ ಧನ ಸಹಾಯ ನೀಡುವುದು, ಉದ್ಯಾನವನ ನಿರ್ವಹಣೆ, ನಗರದ ಮುಖ್ಯ
ರಸ್ತೆಗಳಲ್ಲಿ ಸ್ವಾಗತ ಕಮಾನು ಅಳವಡಿಕೆ, ಬೀದಿ ದೀಪಗಳ ನಿರ್ವಹಣೆ ಸೇರಿ ಇತರ ಕಾರ್ಯಕ್ರಮಗಳಿಗೆ ಹಣ ನಿಗದಿಪಡಿಸಲಾಗಿದೆ ಎಂದರು.

ಸರ್ಕಾರದ ಅನುದಾನದಲ್ಲಿ ಎಸ್‌ಎಫ್‌ಸಿ ವೇತನ, ಎಸ್‌ಎಫ್‌ಸಿ ವಿದ್ಯುತ್‌, ಎಸ್‌ಎಫ್‌ಸಿ ಮುಕ್ತನಿಧಿ, ಎಸ್‌ ಸಿಪಿ, ಟಿಎಸ್‌ಪಿ, ಕುಡಿವ ನೀರು ಪರಿಹಾರ ನಿಧಿ  15ನೇ
ಹಣಕಾಸು ಅನುದಾನ, ಇತರ ಅನುದಾನ ಈಗಾಗಲೇ ಸರ್ಕಾರದ ಮುಂಗಡ ಪತ್ರದಲ್ಲಿ ಯಾದಗಿರಿ ನಗರಸಭೆಗೆ ಹಂಚಿಕೆಯಾದ ಮೊತ್ತಕ್ಕನುಸಾರವಾಗಿ
ಸರ್ಕಾರದ ಅನುದಾನ ಒಟ್ಟು 1934 ಲಕ್ಷ ಅನುದಾನ ನಿರೀಕ್ಷಿಸಲಾಗಿದೆ ಎಂದರು. ಇದೇ ಸಂದರ್ಭದಲ್ಲಿ ಕುಡಿವ ನೀರಿನ ಸಮಸ್ಯೆಗೆ ತ್ವರಿತಗತಿಯಲ್ಲಿ
ಸ್ಪಂದಿಸುವುದು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು. ಈ ವೇಳೆ ಉಪಾಧ್ಯಕ್ಷೆ ಪ್ರಭಾವತಿ ಎಂ. ಕಲಾಲ್‌, ಪೌರಾಯುಕ್ತ ಭೀಮಣ್ಣ
ನಾಯಕ ಸೇರಿದಂತೆ ಸದಸ್ಯರು ಭಾಗವಹಿಸಿದ್ದರು.

ಅಂದಾಜು 556.06 ಲಕ್ಷ ರೂ. ಆದಾಯ ನಿರೀಕ್ಷೆ
2021-22ನೇ ಸಾಲಿನಲ್ಲಿ ನಗರಸಭೆ ನಿಧಿ ಯಲ್ಲಿ ಆಸ್ತಿ ತೆರಿಗೆಯಿಂದ 300 ಲಕ್ಷ , ಮಳಿಗೆ ಬಾಡಿಗೆ 40.25 ಲಕ್ಷ , ಕಟ್ಟಡ ಪರವಾನಗಿ 8.57 ಲಕ್ಷ , ಪರವಾನಗಿ
ಶುಲ್ಕದಿಂದ 5 ಲಕ್ಷ, ಅಭಿವೃದ್ಧಿ ಕರದಿಂದ 3.11 ಲಕ್ಷ, ನೀರಿನ ತೆರಿಗೆ 10 ಲಕ್ಷ , ರಸ್ತೆ ಅಗೆತ ಶುಲ್ಕ 5 ಲಕ್ಷ, ಖಾತಾ ನಕಲು 6.03 ಲಕ್ಷ, ಆಸ್ತಿ ತೆರಿಗೆ ದಂಡ 12 ಲಕ್ಷ, ವರ್ಗಾವಣೆ ಶುಲ್ಕ 105.82 ಲಕ್ಷ, ನೋಂದಣಿ 2.10 ಲಕ್ಷ ಮತ್ತು ಜಾಹೀರಾತು ತೆರಿಗೆ 4 ಲಕ್ಷ ಎಸ್‌ಡಬ್ಲೂಎಂ, ಸೆಸ್‌ 17.12 ಲಕ್ಷ ರೂ. ಇತರ ಆದಾಯಗಳು ಸೇರಿ ಒಟ್ಟು 556.06 ಲಕ್ಷ ರೂ. ಅಂದಾಜು ಆದಾಯ ನಿರೀಕ್ಷಿಸಲಾಗಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.