ಆರಂಭವಾಗದ ಶುದ್ಧ ಕುಡಿಯುವ ನೀರಿನ ಘಟಕ
Team Udayavani, Aug 9, 2017, 5:31 PM IST
ಯಾದಗಿರಿ: ತಾಲೂಕಿನ ಹೆಡಗಿಮದ್ರಾ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಆರಂಭವಾಗದ ಹಿನ್ನೆಲೆಯಲ್ಲಿ ಗ್ರಾಮಸ್ಥರಿಗೆ ಫ್ಲೋರೈಡ್ಯುಕ್ತ ನೀರೇ ಗತಿಯಾಗಿದೆ. ಹೆಡಗಿಮದ್ರಾ ಗ್ರಾಮದಲ್ಲಿ ಸುಮಾರು ಐದುನೂರು ಮನೆಗಳಿದ್ದು, 2,500 ಜನಸಂಖ್ಯೆ ಇದೆ. ಠಾಣಾಗುಂದಿ ಗ್ರಾಪಂ ವ್ಯಾಪ್ತಿಗೆ ಗ್ರಾಮ ಒಳಪಟ್ಟಿದ್ದು, ಆರು ಗ್ರಾಪಂ ಸದಸ್ಯತ್ವ ಸ್ಥಾನ ಹೊಂದಿದೆ ಆದರೂ ಶುದ್ಧ ಕುಡಿಯುವ ನೀರು ಒದಗಿಸಲು ಸಾಧ್ಯವಾಗಿಲ್ಲ. ಗ್ರಾಮದಲ್ಲಿ ಎಲ್ಲಿ ಬಾವಿ, ಕೊಳವೆಬಾವಿ ಕೊರೆದರೂ ಫ್ಲೋರೈಡ್ ಯುಕ್ತ ಮತ್ತು ಉಪ್ಪಿನ ಅಂಶ ಹೊಂದಿರುವ ನೀರು ಲಭ್ಯವಾಗುತ್ತಿದೆ. ಕಳೆದ 15 ವರ್ಷಗಳ ಹಿಂದೆಯೇ ಗಣಿ ಮತ್ತು ಭೂ ವಿಜ್ಞಾನಿ ಇಲಾಖೆ ಅ ಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ನೀರು ಪರಿಶೀಲಿಸಿ ಉಪ್ಪಿನ ಅಂಶ ಮತ್ತು ಫ್ಲೋರೈಡ್ ಯುಕ್ತ ಹೇರಳವಾಗಿದ್ದು, ಈ ನೀರು ಅಡುಗೆ ಮಾಡಲು ಮತ್ತು ಕುಡಿಯಲು
ಯೋಗ್ಯವಾಗಿಲ್ಲ ಎಂದು ಜಿಪಂಗೆ ವರದಿ ಸಲ್ಲಿಸಿತ್ತು. ವರದಿ ಆಧಾರದ ಮೇಲೆ ಜಿಪಂ ಗ್ರಾಮದಲ್ಲಿ ಶುದ್ಧ ನೀರಿನ ಘಟಕ ಸ್ಥಾಪನೆ
ಮಾಡಿತ್ತು. ಆದರೆ, ಸಮರ್ಪಕ ನಿರ್ವಹಣೆ ಇಲ್ಲದೆ ಮಶೀನ್ ತುಕ್ಕು ಹಿಡಿದು ಹಾಳಾದ ಪರಿಣಾಮ ಪುನಃ ಗ್ರಾಮಸ್ಥರಿಗೆ ವಿಷಯುಕ್ತ ನೀರೇ ಗತಿಯಾಗಿದೆ. ಗ್ರಾಮಸ್ಥರ ಒತ್ತಾಯದ ಮೇರೆಗೆ ಈಗ ಮತ್ತೆ ಹೊಸ ಶುದ್ಧ ನೀರಿನ ಘಟಕ ಸ್ಥಾಪನೆ ಮಾಡಲು ಗ್ರಾಮೀಣ ನೀರು
ಸರಬರಾಜು ಇಲಾಖೆ 10 ಲಕ್ಷ ರೂ. ವೆಚ್ಚದಲ್ಲಿ ಮುಂದಾಗಿದ್ದು, ಈಗಾಗಲೇ ಶುದ್ಧ ಕುಡಿಯುವ ನೀರಿನ ಕ್ಯಾಬಿನ್ ರೆಡಿಯಾಗಿದೆ. ಆದರೆ ಇನ್ನೂ ಯಂತ್ರ ಅಳವಡಿಸಿಲ್ಲ. ಆದ್ದರಿಂದ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಗಗನ ಕುಸಮವಾಗಿದೆ. ಸಂಬಂಧಿಸಿದ ಅಧಿ ಕಾರಿಗಳು ಎಚ್ಚೆತ್ತುಕೊಂಡು ಆದಷ್ಟು ಬೇಗ ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸಿ ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಡಬೇಕಿದೆ.
ರಾಜೇಶ ಪಾಟೀಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ