ನಾಗರಪಂಚಮಿಯಂದು ಚೇಳಿಗೆ ಹಾಲೆರೆದು ಜಾತ್ರೆ!
ಮೈಮೇಲೆ ಕೆಂಪು ಚೇಳುಗಳನ್ನು ಬಿಟ್ಟುಕೊಂಡು ವಿಶಿಷ್ಟ ಆಚರಣೆ!
Team Udayavani, Aug 3, 2022, 8:57 PM IST
ದೋಟಿಹಾಳ: ಸಾಮಾನ್ಯವಾಗಿ ರಾಜ್ಯದ ನಾಗರಪಂಚಮಿಯಂದು ನಾಗರ ಹಾವಿಗೆ ಮತ್ತು ಹಾವಿನ ವಿಗ್ರಹಕ್ಕೆ ಹಾಲು ಹಾಕುತ್ತಾರೆ ಆದರೆ ಈ ಗ್ರಾಮದಲ್ಲಿ ಮಾತ್ರ ಚೋಳುಗಳಿಗೆ ಹಾಲೆರೆದು ಹಬ್ಬ ಆಚರಿಸುತ್ತಾರೆ.
ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಂದಕೂರು ಗ್ರಾಮದ ಕೊಂಡಮಾಯಿ ಬೆಟ್ಟದ ಮೇಲೆ ಪ್ರತಿ ನಾಗರಪಂಚಮಿಯಂದು ಚೇಳುಗಳ ಹಾಲೆರೆಯದು ಜಾತ್ರೆಯಲ್ಲಿ ಚೇಳಿಗಳನ್ನು ಮೈಮೇಲೆ ಬಿಟ್ಟುಕೊಂಡು ಆರಾಧಿಸಿಸುತ್ತಾರೆ. ಈ ಚೋಳಿನ ಜಾತ್ರೆಗೆ ರಾಜ್ಯದ ವಿವಿಧ ಭಾಗದ ಜನರು ಸೇರಿದಂತೆ ಪಕ್ಕದ ಆಂಧ್ರ, ತೆಲಂಗಾಣ ಹಾಗೂ ಮಹಾರಾಷ್ಟ್ರದಿಂದ ಭಕ್ತರು ಪಂಚಮಿ ದಿನ ಇಲ್ಲಿಗೆ ಆಗಮಿಸುತ್ತಾರೆ.
ಮಾಯಿ ಅಂದರೆ ಚೇಳುಗಳ ದೇವತೆ. ಜುಲೈ- ಆಗಸ್ಟ್ ತಿಂಗಳ, ಶ್ರಾವಣ ಮಾಸದ ನಾಗರಪಂಚಮಿಯಂದು ಇಡೀ ಬೆಟ್ಟದಲ್ಲಿ ಕೆಂಪು ಚೇಳುಗಳದ್ದೇ ಕಾರುಬಾರು. ಕಲ್ಲುಸಂದಿಗಳಲ್ಲಿರುವ ಚೇಳುಗಳನ್ನು ಹೊರ ತೆಗೆದು ಯುವಕರು, ಮಕ್ಕಳು, ಮಹಿಳೆಯರು, ಹಿರಿ-ಕಿರಿಯರು ಮೈಮೇಲೆಲ್ಲಾ ಬಿಟ್ಟುಕೊಂಡು ಹಬ್ಬ ಆಚರಿಸುತ್ತಾರೆ.
ಇದನ್ನೂ ಓದಿ: ಶಬರಿಮಲೆ, ಮಂತ್ರಾಲಯದಲ್ಲಿ ಛತ್ರ ಅಭಿವೃದ್ದಿಗೆ ವಿಶೇಷ ಅನುದಾನ: ಸಚಿವೆ ಶಶಿಕಲಾ ಜೊಲ್ಲೆ
ಚೇಳುಗಳ ಜೊತೆ ಸರಸ: ಅಚ್ಚರಿ ಎಂದರೆ, ಈ ಜಾತ್ರೆಗೆ ಬರುವ ಬಹುತೇಕರಿಗೆ ಚೇಳು ಕಡಿಯುವುದೇ ಇಲ್ಲ. ಚೇಳುಗಳು ಮೈಮೇಲೆ ಹರಿದಾಡಿದ ಬಳಿಕ ಕೆಳಗೆ ಬಿಡುತ್ತಾರೆ. ಕೆಲವರಿಗೆ ಕಡಿದರೂ ಅಲ್ಲಿನ ‘ಆಧಾರ (ವಿಭೂತಿ) ಹಚ್ಚಿದರೆ ನೋವು ಮಾಯವಾಗಿ ವಿಷ ಇಳಿಯುತ್ತದೆ ಅನ್ನೋ ನಂಬಿಕೆಯಿದೆ.
-ಮಲ್ಲಿಕಾರ್ಜುನ ಮೆದಿಕೇರಿ ದೋಟಿಹಾಳ, ಭೀಮಣ್ಣ ಬ ವಡವಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್