ಅನುದಾನ ದುರ್ಬಳಕೆಯಾದರೆ ಕ್ರಮ
•ಸ್ವಚ್ಛತೆಗೆ ಆದ್ಯತೆ ನೀಡಿ ವಸತಿ ನಿಲಯಗಳ ಆವರಣದಲ್ಲಿ ಸಸಿ ನೆಡಿ
Team Udayavani, Jul 9, 2019, 12:20 PM IST
ಯಾದಗಿರಿ: ಉಪ ವಿಭಾಗ ಮಟ್ಟದ ಅನುಸೂಚಿತ ಜಾತಿ, ಅನುಸೂಚಿತ ಪಂಗಡದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಸಹಾಯಕ ಆಯುಕ್ತ ಶಂಕರಗೌಡ ಎಸ್. ಸೋಮನಾಳ ಮಾತನಾಡಿದರು.
ಯಾದಗಿರಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನರಿಗಾಗಿ ಮೀಸಲಿರುವ ಅನುದಾನವನ್ನು ಅವರ ಕಾಲೋನಿ ಅಥವಾ ವಾರ್ಡ್ಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗಾಗಿ ಮಾತ್ರ ಬಳಸಬೇಕು. ತಪ್ಪಿದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ನಾಗರಿಕ ಹಕ್ಕು ಜಾರಿ ಅಧಿನಿಯಮ ಪ್ರಕಾರ ಎಫ್.ಐ.ಆರ್ ದಾಖಲಿಸುವಂತೆ ಸಹಾಯಕ ಆಯುಕ್ತ ಶಂಕರಗೌಡ ಎಸ್. ಸೋಮನಾಳ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಭವನದ ಸಹಾಯಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಸೋಮವಾರ ಉಪ ವಿಭಾಗ ಮಟ್ಟದ ಅನುಸೂಚಿತ ಜಾತಿ/ಅನುಸೂಚಿತ ಪಂಗಡ (ದೌರ್ಜನ್ಯ ನಿಯಂತ್ರಣ ನಿಯಮಗಳು) 1995ರ ನಿಯಮ 17ರನ್ವಯ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಮೂರು ತಾಲೂಕಿನಲ್ಲಿ ಒಂದೊಂದು ವಸತಿ ನಿಲಯವನ್ನು ಆಯ್ಕೆ ಮಾಡಿಕೊಂಡು ಮಾದರಿ ವಸತಿ ನಿಲಯ ಮಾಡಬೇಕು. ಸ್ವಚ್ಛತೆಗೆ ಆದ್ಯತೆ ಕೊಟ್ಟು ನಿಲಯಗಳ ಆವರಣದಲ್ಲಿ ಹೆಚ್ಚಿನ ಸಸಿ-ಗಿಡಗಳನ್ನು ನೆಟ್ಟು ಹಸಿರು ವಸತಿ ನಿಲಯಗಳಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳಬೇಕು. ಕೇವಲ ಪತ್ರ ವ್ಯವಹಾರ ಮಾಡದೇ ಸಮಿತಿಯಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಜಾರಿಗೆ ಬರುವಂತೆ ಕಾರ್ಯಪ್ರವೃತ್ತರಾಗಬೇಕು ಎಂದು ನಿರ್ದೇಶಿಸಿದರು.
ಜಿಲ್ಲೆಯಲ್ಲಿ ಮಲ ಹೊರುವ ಪದ್ಧತಿ ಇರುವುದಿಲ್ಲವೆಂದು ಜಿಲ್ಲೆಯ ಸಂಬಂಧಪಟ್ಟ ಪುರಸಭೆ ಮುಖ್ಯಾಧಿಕಾರಿಗಳು ಮತ್ತು ನಗರಸಭೆ ಆಯುಕ್ತರು ಸಭೆಯ ಗಮನಕ್ಕೆ ತಂದರು.
ಯಾದಗಿರಿ ನಗರಸಭೆ ಪೌರಾಯುಕ್ತ ರಮೇಶ ಸುಣಗಾರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ