ಹೊಲಿಗೆ ಯಂತ್ರಗಳ ಪ್ರಸ್ತಾವನೆಗೆ ಸಲಹೆ


Team Udayavani, Jan 19, 2019, 11:54 AM IST

yad-1.jpg

ಯಾದಗಿರಿ: ಜಿಲ್ಲೆಯಲ್ಲಿ ಬರ ಇದ್ದು, ಕನಿಷ್ಟ ಅಲ್ಪಸ್ವಲ್ಪ ಓದಿದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆಯಿಂದ ಅವರ ಕುಟುಂಬಕ್ಕೆ ಆಸರೆ ಆಗುತ್ತದೆ. ಈ ನಿಟ್ಟಿನಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಅಧಿಕಾರಿಗಳು ಈಗಾಗಲೇ 562 ಹೊಲಿಗೆ ಯಂತ್ರಗಳನ್ನು ಖರೀದಿಸಲು ಮುಂದಾಗಿದ್ದು, ಹೆಚ್ಚಿನ ಯಂತ್ರಗಳಿಗೆ ಪ್ರಸ್ತಾವನೆ ಸಲ್ಲಿಸಲು ಜಿಪಂ ಸದಸ್ಯ ಬಸನಗೌಡ ಯಡಿಯಾಪೂರ ಸೂಚಿಸಿದರು.

ನಗರದ ಜಿಪಂ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ವೃತ್ತಿಪರ ಕುಶಲ ಕರ್ಮಿಗಳಿಗೆ ಉಚಿತ ಸುಧಾರಿತ ಸಲಕರಣೆಗಳು ಕ್ಷೌರಿಕ, ಅಗಸರಿಗೆ ನೀಡಲಾಗುತ್ತಿದ್ದು, ಬಡಿಗ, ಕುಂಬಾರ ಸೇರಿದಂತೆ ಎಲ್ಲಾ ಕುಶಲ ಕರ್ಮಿಗಳಿಗೆ ಇದರ ಸೌಕರ್ಯ ದೊರೆಯುವಂತಾಗಬೇಕು ಎಂದು ಹೇಳಿದರು.

ಸುರಪುರಿನ ಮೀನುಗಾರಿಕೆ ಇಲಾಖೆ ಕಚೇರಿ ರಿಪೇರಿಗಾಗಿ ಈ ವರೆಗೆ ಎಷ್ಟು ಹಣ ಖರ್ಚಾಗಿದೆ. ಕಾಮಗಾರಿ ಯಾವ ಹಂತದಲ್ಲಿದೆ ಎಂದು ಮೀನುಗಾರಿಕೆ ಇಲಾಖೆ ಮಹೇಶ ಅವರನ್ನು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿ, ಈವರೆಗೆ ಹಂತ ಹಂತವಾಗಿ ಕಟ್ಟಡ ರಿಪೇರಿಗಾಗಿ ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ವಿಭಾಗಕ್ಕೆ ಒಟ್ಟು 7.50 ಲಕ್ಷ ರೂಪಾಯಿ ಬಿಡುಗಡೆಯಾಗಿದೆ. ಆದರೆ, ಕೆಲಸ ಮಾತ್ರ ಆಗುತ್ತಿಲ್ಲ ಎಂದು ಸಭೆ ಗಮನಕ್ಕೆ ತಂದರು.

ಈ ವೇಳೆ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಅವರು, ಕಾಮಗಾರಿ ಮಾಡದಿರುವ ಕುರಿತು ಇಷ್ಟು ದಿನದಿಂದ ಏಕೆ ಕೇಳಿಲ್ಲ. ಬೋಗಸ್‌ ಬಿಲ್‌ ಸೃಷ್ಟಿಸಲಾಗಿದೆ ಎನ್ನುವ ಆರೋಪ ಕೇಳಿ ಬರುತ್ತಿದ್ದು, ಈ ಬಗ್ಗೆ ಜಿಪಂ ಸಾಮಾನ್ಯ ಸಭೆಯ ಒಳಗಾಗಿ ಸಂಪೂರ್ಣ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಮೀನುಗಾರಿಕೆ ಇಲಾಖೆಯ ದ್ವಿಚಕ್ರ ವಾಹನ ಖರೀದಿಸಲು 10 ಸಾವಿರ ರೂಪಾಯಿ ಸಹಾಯ ಧನ ನೀಡುವ ಯೋಜನೆಯಡಿ ಯಾದಗಿರಿ ಹೊರತುಪಡಿಸಿ ವಿಜಾಪುರದ ಜಿಲ್ಲೆಯ 2 ಫಲಾನುಭವಿಗಳಿಗೆ ಹೇಗೆ ಆಯ್ಕೆ ಮಾಡಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡರು. ಅಲ್ಲದೆ 2016-17ನೇ ಸಾಲಿನಲ್ಲಿ ಯಾದಗಿರಿ ಮತಕ್ಷೇತ್ರದ ಮೀನುಗಾರರಿಗೆ 110, ಗುರುಮಠಕಲ್‌ ಕ್ಷೇತ್ರಕ್ಕೆ 20 ಮನೆಗಳು ಮಂಜೂರಾಗಿದ್ದು, ಇನ್ನೂ ಫಲಾನುಭವಿಗಳಿಗೆ ಸಮರ್ಪಕ ಲಾಭ ದೊರೆತಿಲ್ಲ. ಈ ಬಗ್ಗೆ ಶೀಘ್ರವೇ ನೈಜ ಫಲಾನುಭವಿಗಳನ್ನು ಗುರುತಿಸಿ ಸೌಲಧ್ಯ ಒದಗಿಸಬೇಕು ಎಂದು ಸೂಚಿಸಿದರು.

ಮೀನುಗಾರಿಕೆ ಇಲಾಖೆ ಎಲ್ಲಾ ಯೋಜನೆಗಳ ಕುರಿತು ಸಮಗ್ರವಾಗಿ ಪರಿಶೀಲಿಸಲು ಅಧ್ಯಕ್ಷರು ದಿನಾಂಕ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು. ಮೀನುಗಾರಿಕೆ, ರೇಷ್ಮೆ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸರ್ಕಾರದ ಯೋಜನೆಗಳ ಕುರಿತು ಜನಪ್ರತಿನಿಧಿಗಳಿಗೆ ಸಮರ್ಪಕ ಮಾಹಿತಿ ನೀಡಿ, ಇದರಿಂದಾಗಿ ಗ್ರಾಮೀಣ ಭಾಗದ ಜನರಿಗೆ ತಿಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ಲಾಭ ಪಡೆಯುವಂತಾಗುತ್ತದೆ ಎಂದು ಜಿಪಂ ಸದಸ್ಯ ಭೀಮರೆಡ್ಡಿ ಬಳಿಚಕ್ರ ಹೇಳಿದರು.

ತೋಟಗಾರಿಕೆ ಕುರಿತು ಜಿಲ್ಲೆಯ ರೈತರಿಗೆ ಹೆಚ್ಚಿನ ಮಾಹಿತಿ ಒದಗಿಸಲು ಅಧಿಕಾರಿಗಳು ಮುಂದಾಗ ಬೇಕು. ಪಾಲಿಹೌಸ್‌ ನಿರ್ಮಾಣದ ಕುರಿತು ರೈತರಲ್ಲಿ ಜಾಗೃತಿ ಮೂಡಿಸಬೇಕು ತೋಟಗಾರಿ ಉಪನಿರ್ದೇಶಕ‌ರಿಗೆ ಸೂಚಿಸಲಾಯಿತು.

ಕೃಷಿ ಜಂಟಿ ನಿರ್ದೇಶಕಿ ದೇವಿಕಾ ಆರ್‌. ಮಾತನಾಡಿ, ಜಿಲ್ಲೆಯಲ್ಲಿ ಪ್ರಸಕ್ತ ಹಿಂಗಾರು ಹಂಗಾಮಿನಲ್ಲಿ ಶೇ. 40.63 ಬಿತ್ತನೆಯಾಗಿದ್ದು, ಶೇ. 81ರಷ್ಟು ಮಳೆ ಕೊರತೆಯಾಗಿದೆ ಎಂದು ವಿವರಿಸಿದರು. ಜಿಲ್ಲೆ ಬರಗಾಲ ಪೀಡಿತ ಎಂದು ಘೋಷಣೆಯಾಗಿದ್ದು, 99 ಕೋಟಿ ರೂ. ಹಾನಿ ಅಂದಾಜಿಸಲಾಗಿದೆ. ಕೇಂದ್ರದ ಬರ ಅಧ್ಯಯನ ತಂಡ ಪರಿಶೀಲಿಸಿದ್ದು, ರೈತರ ಖಾತೆಗೆ ನೇರವಾಗಿ ಪರಿಹಾರ ಜಮಾ ಆಗಲಿದೆ ಎಂದರು.

ಜಿಲ್ಲೆಯ ಬೆಂಡೆಬೆಂಬಳಿ, ಮುದನೂರ, ಅರಕೇರಾ (ಕೆ), ಯರಗೋಳನಲ್ಲಿ ರೈತ ಸಂಪರ್ಕ ಕೇಂದ್ರ ಆರಂಭಿಸುವ ಬೇಡಿಕೆ ಇದ್ದು, ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಲಾಗಿದೆ. 1262 ಕೃಷಿ ಹೊಂಡ ನಿರ್ಮಾಣದ ಗುರಿಯಿದ್ದು, 615 ಪೂರ್ಣವಾಗಿದ್ದು, ಫೆಬ್ರವರಿ ವೇಳೆ ಸಂಪೂರ್ಣ ಗುರಿ ಸಾಧಿಸುವುದಾಗಿ ಸಭೆಗೆ ತಿಳಿಸಿದರು.

ಹಾವು ಕಡಿದು ಸಾವನ್ನಪ್ಪುವ ರೈತರಿಗೆ ಪರಿಹಾರ ವಿತರಣೆಯಲ್ಲಿ ವಿಳಂಬ ಆಗುತ್ತಿರುವುದಕ್ಕೆ ಅಸಮಧಾನ ವ್ಯಕ್ತಪಡಿಸಿದ ಸದಸ್ಯರು, ರೈತರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸುವಂತೆ ತಿಳಿಸಿದರು. ಸಮಿತಿ ಅಧ್ಯಕ್ಷೆ ಸರಸ್ವತಿ ಹೊನಗೇರಾ, ಜಿಪಂ ಸದಸ್ಯೆ ಗಿರಿಜಮ್ಮ, ಅಶೋಕರೆಡ್ಡಿ ಗೋನಾಳ ಇದ್ದರು. ವಿವಿಧ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.