ಜನೌಷಧಿ ಕೇಂದ್ರ ಸದ್ಬಳಕೆಗೆ ಸಲಹೆ


Team Udayavani, Jun 25, 2018, 5:32 PM IST

yadagiri.jpg

ಯಾದಗಿರಿ: ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರಗಳಲ್ಲಿ ಎಲ್ಲ ರೀತಿಯ ಔಷಧಿಗಳು ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆಗೆ ಸಿಗುತ್ತವೆ. ಬಡ ಸಾರ್ವಜನಿಕರು ಇದರ ಲಾಭ ಪಡೆಯಬೇಕು ಎಂದು ನಗರದ ಜನೌಷಧಿ ಮಳಿಗೆ ವ್ಯವಸ್ಥಾಪಕ ಭೀಮಣ್ಣಗೌಡ ಬಿರಾದಾರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ಕಡೆ ಜನೌಷಧಿಯಲ್ಲಿ ಔಷಧ ಕೊರತೆ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದ್ದು, ಇದು ಸರಿಯಲ್ಲ. ಎಲ್ಲ ರೀತಿಯ ಔಷಧಿಗಳು ಲಭ್ಯ ಇವೆ. ಈ ಮಳಿಗೆಗಳು ನಡೆಸುವ ಮಾಲಕರಿಗಾಗಲಿ ಸರ್ಕಾರಕ್ಕೆ ಆಗಲಿ ಲಾಭವಿಲ್ಲ. ಬದಲಿಗೆ ಬಡ ಜನತೆಗೆ ಅತ್ಯಂತ ಕಡಿಮೆ ಬೆಲೆಗೆ ಜೀವ ರಕ್ಷಕ ಔಷಧಿಗಳು ಲಭ್ಯ ಆಗುತ್ತಿರುವುದರಿಂದ ಜನತೆಗೆ ಲಾಭವಿದೆ.

ಆದರೆ ಜನೌಷಧಿ ಮಳಿಗೆಗಳ ಕುರಿತು ಸರಿಯಾದ ಪ್ರಚಾರ ಸಿಗದೇ ಇರುವುದರಿಂದ ಮತ್ತು ಸಂಬಂಧಪಟ್ಟ ಆರೋಗ್ಯ
ಇಲಾಖೆ ನಿರ್ಲಕ್ಷ್ಯದಿಂದ ಜನತೆಗೆ ಇದರ ಲಾಭ ಪಡೆಯಲು ಆಗುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಈ ಜನೌಷಧಿ ಕೇಂದ್ರಗಳ ಕುರಿತು ಆರೋಗ್ಯ ಇಲಾಖೆ ವಿಶೇಷ ಕಾಳಜಿ ವಹಿಸಬೇಕಿತ್ತು. ಆದರೆ ಇದುವರೆಗೆ ಆರೋಗ್ಯ ಇಲಾಖೆ ರಾಜ್ಯದಲ್ಲಿ ಇಂತಹ ಕಾರ್ಯಕ್ಕೆ ಕೈ ಜೋಡಿಸುವ ಬದಲಿಗೆ ನಿದ್ರೆಯಲ್ಲಿದೆ ಎಂದು ಟೀಕಿಸಿದರು.

ಸುಪ್ರಿಂಕೋರ್ಟ್‌ ಸಹ ಔಷಧಿಯ ಮೂಲ ಹೆಸರನ್ನು ಸ್ಪಷ್ಟವಾಗಿ ಬರೆಯಬೇಕು ಎಂದು ನಿರ್ದೇಶಿಸಿದೆ. ಇದರಿಂದ
ಜನರು ಕಡಿಮೆ ಬೆಲೆಯಲ್ಲಿ ಜನೌಷಧಿ ಕೇಂದ್ರಗಳಲ್ಲಿ ಅಗತ್ಯ ಔಷಧಿ ಪಡೆಯಲು ಸಹಕಾರಿ ಆಗುತ್ತದೆ ಎಂದ ಅವರು, ವೈದ್ಯರು ಸಹ ಮಾನವೀಯ ದೃಷ್ಟಿಕೋನದಿಂದ ಬೆಂಬಲಿಸಬೇಕಿದೆ ಎಂದರು.

ಉದಾಹರಣೆಯಾಗಿ ಏಡ್ಸ್‌ ರೋಗದ ಔಷಧ ಮಾರುಕಟ್ಟೆಯಲ್ಲಿ 3 ಸಾವಿರಕ್ಕೂ ಮಿಕ್ಕಿ ಇದ್ದರೇ ಅದೇ ಗುಣಮಟ್ಟದ ಜನೌಷಧಿ ಕೇವಲ 425 ರೂಪಾಯಿಗೆ ಲಭ್ಯ ಆಗುತ್ತದೆ. ಇದರಿಂದ ಗರಿಷ್ಟ ಪ್ರಮಾಣದಲ್ಲಿ ಉಳಿತಾಯವಾಗಿ ಬಡ ಜನತೆಗೆ ಲಾಭ ಆಗುತ್ತದೆ ಎಂದರು. ಈ ಸಂದರ್ಭದಲ್ಲಿ ಚೆನ್ನಪ್ಪಗೌಡ ಮೋಸಂಬಿ, ಶೇಖರ ವಿಶ್ವಕರ್ಮ, ಬನ್ನಪ್ಪ ಕಾಳೆಬೆಳಗುಂದಿ ಇದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.