ಸಮಾಜಮುಖೀಯಾಗಿ ಬೆಳೆಯಲು ಯುವಕರಿಗೆ ಸಲಹೆ
Team Udayavani, Jan 9, 2022, 2:31 PM IST
ಸುರಪುರ: ಯುವಕರು ಉತ್ತಮ ಹವ್ಯಾಸ ಬೆಳೆಸಿಕೊಳ್ಳುವ ಮೂಲಕ ಸಮಾಜಮುಖೀಯಾಗಿ ಬೆಳೆಯಬೇಕು ಎಂದು ಕಲಬುರಗಿ, ಯಾದಗಿರಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಡಾ| ಸುರೇಶ ಆರ್. ಸಜ್ಜನ್ ಹೇಳಿದರು.
ರಂಗಂಪೇಟೆಯ ಖಾದಿ ಕೇಂದ್ರದ ಆವರಣದಲ್ಲಿ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಕಲಾವಿದರ ಸಂಗಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಆಧುನಿಕತೆಯ ಭರಾಟೆಯಲ್ಲಿ ಗ್ರಾಮೀಣ ಭಾಗದ ಕಲೆ ನಶಿಸಿ ಹೋಗುತ್ತಿವೆ ಎಂದರು. ಕಲ್ಯಾಣ ಕರ್ನಾಟಕ ಒಕ್ಕೂಟದ ಕೇಂದ್ರ ಸಮಿತಿ ಅಧ್ಯಕ್ಷ ವಿಜಯ ಕುಮಾರ ಸೋನಾರೆ ಅಧ್ಯಕ್ಷತೆ ವಹಿಸಿದ್ದರು.
ಸುಗೂರೇಶ ವಾರದ ದಿನದರ್ಶಿಕೆ ಬಿಡುಗಡೆ ಮಾಡಿದರು. ಅಖೀಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕ ಅಧ್ಯಕ್ಷ ಮಂಜುನಾಥ ಜಾಲಹಳ್ಳಿ, ಕೋಶಾಧ್ಯಕ್ಷ ಬಸವರಾಜ ಬೂದಿಹಾಳ, ಉಪಾಧ್ಯಕ್ಷ ಸಿದ್ದನಗೌಡ ಹೆಬ್ಟಾಳ, ಮಲ್ಲಿಕಾರ್ಜುನರೆಡ್ಡಿ ಅಮ್ಮಾಪುರ ಶಾಂತು ನಾಯಕ,ಪ್ರಕಾಶ ಅಂಗಡಿ ವೇದಿಕೆ ಮೇಲಿದ್ದರು. ವಿಶಾಲ ಸಿಂಧೆ ಪ್ರಾಸ್ತಾವಿಕವಾಗಿ ಮಾತನಾಡಿದರು.
34 ಜನ ಕಲಾವಿದರನ್ನು ಸನ್ಮಾನಿಸಲಾಯಿತು. ಶರಣು ಕುಮಾರ ಯಾಳಗಿ ಪ್ರಾರ್ಥಿಸಿದರು. ಹಣಮಂತ್ರಾಯ ದೇವತ್ಕಲ್ ನಿರೂಪಿಸಿದರು. ಮಲ್ಲು ಬಾದ್ಯಾಪುರ ಸ್ವಾಗತಿಸಿದರು. ದೇವರಾಜ ನಂದಗಿರಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್