ಆಗ್ರೋ ಕೇಂದ್ರ ಮೇಲೆ ಕೃಷಿ ಅಧಿಕಾರಿಗಳ ದಾಳಿ
Team Udayavani, Nov 22, 2020, 5:39 PM IST
ಶಹಾಪುರ: ಅನಧಿಕೃತ ಕೀಟನಾಶಕ ಔಷಧ ಗಳನ್ನು ಮಾರಾಟ ಮಾಡುತ್ತಿರುವ ಆರೋಪ ಹಿನ್ನೆಲೆ ನಗರದ ಎರಡು ಆಗ್ರೋಗಳ ಕೇಂದ್ರಗಳ ಮೇಲೆ ಕೃಷಿ ಅಧಿಕಾರಿಗಳು ದಾಳಿ ನಡೆಸಿದ್ದು, ಎರಡು ಅಂಗಡಿಗಳ ಪರವಾನಗಿ ರದ್ದತಿಗೆ ಶಿಫಾರಸ್ಸು ಮಾಡಿದ ಘಟನೆ ನಗರದಲ್ಲಿ ನಡೆದಿದೆ.
ಕೃಷಿ ಜಂಟಿ ನಿರ್ದೇಶಕಿ ಆರ್.ದೇವಿಕಾ ಮತ್ತು ಉಪಕೃಷಿ ನಿರ್ದೇಶಕ ಹಾಗೂ ಶಹಾಪುರ ಸಹಾಯಕ ಕೃಷಿ ನಿರ್ದೇಶಕ ಗೌತಮ್ ವಾಗ್ಮೋರೆ ಅವರ ತಂಡ ದಾಳಿ ಮಾಡಿದ್ದು, ಔಷಧಿ ಅಂಗಡಿಗಳನ್ನು ಪರಿಶೀಲಿಸಿದರು. ಆಗ ಎರಡು ರಸಗೊಬ್ಬರ ಮಾರಾಟ ಅಂಗಡಿಗಳ ಪರವಾನಗಿ ರದ್ದುಪಡಿಸಿದೆ ಎಂದು ಮೂಲಗಳು ತಿಳಿಸಿವೆ.
ನಗರದ ಪಾಟೀಲ್ ಆಗ್ರೋ ಕೇಂದ್ರ ಹಾಗೂ ಹಾಲಭಾವಿ ರಸ್ತೆಯಲ್ಲಿರುವ ಸಂಗಮೇಶ್ವರ ಆಗ್ರೋ ಕೇಂದ್ರಗಳ ಮೇಲೆ ದಾಳಿ ನಡೆಸಿದ ಕೃಷಿ ಅಧಿಕಾರಿಗಳು ಪರವಾನಗಿ ರದ್ದುಪಡಿಸಿ ಆದೇಶಿಸಿದೆ ಎನ್ನಲಾಗಿದೆ.
ಪದವಿ ವಿದ್ಯಾರ್ಥಿಗಳ ಬಸ್ಪಾಸ್ ವಿತರಣೆ ಶುರು :
ಯಾದಗಿರಿ: ಪ್ರತಿ ವರ್ಷದಂತೆ ಈ ವರ್ಷವೂ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 2020-21ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ಗಳನ್ನು ವಿತರಿಸಲಿದೆ.
ಪದವಿ ವಿಭಾಗದಲ್ಲಿ ಸಾಮಾನ್ಯ ವರ್ಗದ ವಿದ್ಯಾರ್ಥಿಗಳು 10 ತಿಂಗಳ ಅವಧಿಯ ಬಸ್ ಪಾಸ್ಗೆ 1050 ರೂ.ಗಳು ಹಾಗೂಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ನೀಡಲಾಗುವುದು.
ಪ್ರಸ್ತಕ್ತ ಸಾಲಿನಿಂದ ವಿದ್ಯಾರ್ಥಿಗಳಿಗೆ ಆನ್ಲೈನ್ನಲ್ಲಿ ಸರ್ಕಾರ ನಿಗದಿ ಪಡಿಸಿರುವ ಸೇವಾ ಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಸಲ್ಲಿಸಿರುವ ಅರ್ಜಿಗೆ ಶಾಲಾ- ಕಾಲೇಜುಗಳ ಮುಖ್ಯಸ್ಥರಿಂದ ರುಜುಹಾಕಿಸಿ, ನೇರವಾಗಿ ಬಸ್ ನಿಲ್ದಾಣದ ಪಾಸ್ ಕೌಂಟರ್ನಲ್ಲಿ ಹಣ ಪಾವತಿಸಿ ಪಡೆಯಬಹುದು.
ಮ್ಯಾನ್ಯುಯಲ್ ಅರ್ಜಿಗಳನ್ನು ಸ್ವೀಕರಿಸುವುದನ್ನು ಸ್ಥಗಿತಗೊಳಿಸಲಾಗಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಯಾದಗಿರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ