ಬಸವಸಾಗರದ ಎಲ್ಲ ಕ್ರಸ್ಟ್ ಗೇಟ್ ಬಂದ್
Team Udayavani, Jul 24, 2022, 3:09 PM IST
ನಾರಾಯಣಪುರ: ಬಸವಸಾಗರಕ್ಕೆ ಒಳಹರಿವು ಕಡಿಮೆಯಾಗಿದ್ದರಿಂದ ಜಲಾಶಯದ ಎಲ್ಲ ಕ್ರಸ್ಟ್ಗೇಟ್ ಗಳನ್ನು ಬಂದ್ ಮಾಡಿ ಮುರುಡೇಶ್ವರ ಜಲವಿದ್ಯುತ್ ಸ್ಥಾವರದ ಮೂಲಕ ಆರು ಸಾವಿರ ಕ್ಯೂಸೆಕ್ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ. ಶನಿವಾರ ಬೆಳಗ್ಗೆ ಬಸವಸಾಗರಕ್ಕೆ 45 ಸಾವಿರ ಕ್ಯೂಸೆಕ್ನಷ್ಟಿದ್ದ ಒಳಹರಿವು ಮಧ್ಯಾಹ್ನ 1.30ರ ವೇಳೆಗೆ 40 ಸಾವಿರ ಕ್ಯೂಸೆಕ್ಗೆ ಇಳಿಕೆಯಾಗಿದ್ದರಿಂದ ಜಲಾಶಯದ ಸಂಗ್ರಹ ಮಟ್ಟವನ್ನು ಹೆಚ್ಚಿಸಿಕೊಳ್ಳಲು ಅಣೆಕಟ್ಟಿನ ಎಲ್ಲ ಮುಖ್ಯ ಗೇಟ್ ಬಂದ್ ಮಾಡಲಾಗಿದೆ ಎಂದು ಅಣೆಕಟ್ಟು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಒಂದೊಮ್ಮೆ ಆಲಮಟ್ಟಿ ಜಲಾಶಯದಿಂದ ಬಸವಸಾಗರಕ್ಕೆ ಈಗಿರುವ ಒಳಹರಿವಿಗಿಂತಲು ಹೆಚ್ಚಿನ ನೀರು ಬಂದರೆ ಮತ್ತೆ ಕೃಷ್ಣಾ ನದಿಗೆ ನೀರು ಹರಿಸುವ ಪ್ರಮಾಣ ಹೆಚ್ಚಿಸಲಾಗುತ್ತದೆ. ನದಿ ತೀರದ ಗ್ರಾಮಸ್ಥರು ಜಾಗೃತರಾಗಿರಬೇಕು ಎಂದು ಅಣೆಕಟ್ಟು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಾಶ ಎಂ. ತಿಳಿಸಿದರು.
ಪ್ರಸ್ತುತ ಜಲಾಶಯದಲ್ಲಿ 492.25 ಮೀಟರ್ ಗರಿಷ್ಠ ಮಟ್ಟದಲ್ಲಿ 491.48 ಮೀ. ಇದೆ. 33.31 ಟಿಎಂಸಿ ಅಡಿ ಗರಿಷ್ಠ ಸಂಗ್ರಹ ಸಾಮರ್ಥ್ಯದಲ್ಲಿ 29.82 ಟಿಎಂಸಿ ಅಡಿ ಇದೆ. ಒಳಹರಿವು 6 ಸಾವಿರ ಕ್ಯೂಸೆಕ್ ಇದೆ. ಹೊರಹರಿವು ಆರು ಸಾವಿರ ಕ್ಯೂಸೆಕ್ ಇದೆ. ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಬಿಟ್ಟಿದ್ದರಿಂದ ಸ್ಥಳೀಯ ಮೀನುಗಾರರು ತಂಡೋಪ ತಂಡವಾಗಿ ನದಿ ತೀರಕ್ಕೆ ಆಗಮಿಸಿ ಮೀನು ಹಿಡಿಯುವ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಗೇಟ್ ಬಂದ್ ಮಾಡಿರುವುದರಿಂದ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್