ಶರಣಗೌಡರನ್ನು ಎಲ್ಲರೂ ಬೆಂಬಲಿಸಿ
Team Udayavani, Dec 7, 2021, 5:08 PM IST
ಸಿಂಧನೂರು: ಕಾಂಗ್ರೆಸ್ ಅಭ್ಯರ್ಥಿ ಶರಣಗೌಡ ಬಯ್ನಾಪುರ ಅವರು ಗ್ರಾಮ ಪಂಚಾಯತ್ಗಳ ಬೇಡಿಕೆಗಳನ್ನು ಈಡೇರಿಸುವ ಸಾಮರ್ಥ್ಯ ಹೊಂದಿದ್ದು, ಅವರನ್ನು ಬೆಂಬಲಿಸಲು ಎಲ್ಲ ಸದಸ್ಯರು ಒಮ್ಮತದಿಂದ ಕೆಲಸ ಮಾಡಬೇಕು ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಕೆ.ಕರಿಯಪ್ಪ ಹೇಳಿದರು.
ತಾಲೂಕಿನ ಗೋಮರ್ಸಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಗೌಡ ಬಯ್ನಾಪುರ ಪರವಾಗಿ ಹಮ್ಮಿಕೊಂಡ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಗೋಮರ್ಸಿ ಗ್ರಾಮದ ನಿರುಪಾದೇಶ್ವರ ಮಠಕ್ಕೆ ಭೇಟಿ ನೀಡಿದ ಬೆಂಬಲಿಗರ ಸಭೆ ನಡೆಸಿದರು. ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸುವಂತೆ ಮನವಿ ಮಾಡಿದರು. ಮಾಡಸಿರವಾರ ಗ್ರಾಪಂ ಅಧ್ಯಕ್ಷ ಶ್ರೀನಿವಾಸ ಸೇರಿದಂತೆ ಗ್ರಾಪಂ ಸದಸ್ಯರು, ಗ್ರಾಮದ ಮುಖಂಡರು ಇದ್ದರು.
ಹೆಡಗಿನಾಳ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಸಭೆಯನ್ನು ಕರೆದು ಅವರೊಂದಿಗೆ ಚರ್ಚಿಸಿದರು. ಬಳಿಕ ಗೋನವಾರ ಗ್ರಾಪಂ ವ್ಯಾಪ್ತಿಯ ಹುಲುಗುಂಚಿ ಗ್ರಾಪಂ ಸದಸ್ಯರ ಸಭೆಯನ್ನು ಆಯೋಜಿಸಿ, ಶರಣಗೌಡ ಬಯ್ನಾಪುರ ಪರವಾಗಿ ಮತ ಚಲಾಯಿಸುವಂತೆ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ