ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಪಾತ್ರ ಮುಖ್ಯ
Team Udayavani, Dec 7, 2018, 5:18 PM IST
ಹುಣಸಗಿ: ಸಂವಿಧಾನ ರಚಿಸುವಲ್ಲಿ ಅಂಬೇಡ್ಕರ್ ಅವರ ಪಾತ್ರ ಮುಖ್ಯವಾಗಿದ್ದು, ದೇಶದ ಸಲುವಾಗಿ ದುಡಿದವರಲ್ಲಿ ಪ್ರಮುಖರು ಎಂದು ಮಲ್ಲಣ್ಣ ಕಟ್ಟಿಮನಿ ಹೇಳಿದರು. ಪಟ್ಟಣದಲ್ಲಿನ ಡಾ| ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ದಲಿತಪರ ಸಂಘಟನೆಗಳಿಂದ ಸಂವಿಧಾನ ಶಿಲ್ಪಿ
ಡಾ| ಅಂಬೇಡ್ಕರ್ ಅವರ 61ನೇ ಮಹಾ ಪರಿನಿರ್ವಾಣ ದಿನ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಡಾ| ಬಿ.ಆರ್. ಅಂಬೇಡ್ಕರ್ ಅವರು ತಮ್ಮ ಜೀವನದಲ್ಲಿ ಹಲವು ಕಷ್ಟ ಸವಾಲುಗಳನ್ನು ಅನುಭವಿಸಿ, ಆಕಾಶದ ಎತ್ತರಕ್ಕೆ ಬೆಳೆದವರು ಎಂದು ಗುಣಗಾನ ಮಾಡಿದರು. ಅನೇಕ ಶತಮಾನಗಳಿಂದಲೂ ತುಳಿಕ್ಕೊಳಗಾದವರಿಗೆ ಸಂವಿಧಾನ ಮೂಲಕ ಸಾಮಾಜಿಕ ನ್ಯಾಯ ಒದಗಿಸಿದ
ಮಹಾನ್ ಮಾನವತಾವಾದಿ ಎಂದು ಹೇಳಿದರು. ಸಮಾಜದಲ್ಲಿ ಎಷ್ಟೇ ಕಷ್ಟ ಅನುಭವಿಸಿದರೂ ಎಂದಿಗೂ ಯಾರನ್ನು ದೂಷಿಸದೇ ತಮ್ಮದೇ ಧೇಯದೊಂದಿಗೆ ಮುನ್ನಡೆದು ಸಮಾಜ ಸುಧಾರಣೆಗೆ ಮುಂದಾದವರು ಎಂದು ತಿಳಿಸಿದರು. ಮುಖಂಡರಾದ ಮರಿಲಿಂಗಪ್ಪ ನಾಟೇಕಾರ,
ನಿವೃತ್ತ ಶಿಕ್ಷಕ ಶರಣಪ್ಪ ಗುಳಬಾಳ, ಕನಕಪ್ಪ ಸಿದ್ದಾಪುರ, ಬಸಲಿಂಗಪ್ಪ ಚಲವಾದಿ, ನಿಂಗಪ್ಪ ಕಟ್ಟಿಮನಿ, ಮಲ್ಲಿಕಾರ್ಜುನ ನಾಟೇಕಾರ, ಮಾನಯ್ಯ ಗುತ್ತೇದಾರ, ವೀರೇಶ ಗುಳಬಾಳ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು