ವ್ಹಾಲಿಬಾಲ್‌ ಚಾಂಪಿಯನ್‌ಶಿಫ್‌ನಲ್ಲಿ ಚಿನ್ನ ಗೆದ್ದ ಅಸ್ಪಾಕ್‌


Team Udayavani, Feb 8, 2018, 10:31 AM IST

yad-.jpg

ನಾರಾಯಣಪುರ: ಸ್ಥಳೀಯ ವ್ಹಾಲಿಬಾಲ್‌ ಪಟು ಅಸ್ಪಾಕ್‌ ಶೇಖ್‌ ರಾಷ್ಟ್ರಮಟ್ಟದ ಓಪನ್‌ ವ್ಹಾಲಿಬಾಲ್‌ ಚಾಂಪಿಯನ್‌ಶಿಫ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನದ ಪದಕ ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾನೆ.

ಈಚೆಗೆ ಮಹಾರಾಷ್ಟ್ರ ರಾಜ್ಯದ ಶಿರಡಿಯಲ್ಲಿ ಯುನೆಟೆಡ್‌ ಇಂಡಿಯಾ ಗೇಮ್ಸ್‌ ಅಶೋಷಿಯೇಶನ್‌ ವತಿಯಿಂದ 22 ವರ್ಷದ ಒಳಗಿನವರ ಆಲ್‌ ಇಂಡಿಯಾ ಓಪನ್‌ ವ್ಹಾಲಿಬಾಲ್‌ ಚಾಂಪಿಯನ್‌ಶಿಫ್‌ನಲ್ಲಿ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಯ್ಕೆಯಾದ ಉತ್ತಮ ವ್ಹಾಲಿಬಾಲ್‌ ಪಟುಗಳಲ್ಲಿ ಸ್ಥಾನ ಪಡೆದಿದ್ದ ಅಸ್ಪಾಕ್‌ ಶೇಖ್‌ ಪ್ರತಿ ಪಂದ್ಯಾಟದಲ್ಲಿ ಸಹ ಆಟಗಾರರೊಟ್ಟಿಗೆ ಉತ್ತಮ ಆಟ ಪ್ರದರ್ಶಿಸಿ ಕರ್ನಾಟಕವನ್ನು ಗೆಲ್ಲಿಸುವ ಮೂಲಕ ಚಿನ್ನದ ಪದಕ ಪಡೆಯುವಲ್ಲಿ ಯಶಸ್ವಿಯಾಗಿದ್ದಾನೆ.

ಚಾಂಪಿಯನ್‌ಶಿಫ್‌ನ ಫೈನಲ್‌ ಪಂದ್ಯದಲ್ಲಿ ಕರ್ನಾಟಕ ತಂಡವು ಮಹಾರಾಷ್ಟ್ರ ತಂಡವನ್ನು ಸೋಲಿಸಿ ಚಾಂಪಿಯನಾಗಿ ಮಿಂಚುವ ಮೂಲಕ ಪ್ರಥಮ ಸ್ಥಾನ ಪಡೆದು ಚಿನ್ನ ಗೆದ್ದುಕೊಂಡರೆ, ದ್ವಿತೀಯ ಸ್ಥಾನ ಪಡೆದ ಮಹಾರಾಷ್ಟ್ರವು ಬೆಳ್ಳಿ ಪದಕ ಪಡೆದುಕೊಂಡಿದೆ.
 
ಈ ಮೂಲಕ ರಾಷ್ಟ್ರಮಟ್ಟದ ಚಾಂಪಿಯನ್‌ ಶಿಫ್‌ನಲ್ಲಿ ಚಿನ್ನದ ಪದಕ ಗಳಿಸಿರುವ ತಂಡದ ಆಟಗಾರರು ಅಂತರಾಷ್ಟ್ರೀಯ ಮಟ್ಟದ ಓಪನ್‌ ವ್ಹಾಲಿಬಾಲ್‌ ಪಂದ್ಯಾಟಗಳಲ್ಲಿ ಭಾಗವಹಿಸುವ ಅರ್ಹತೆಯನ್ನು ಪಡೆದಿದ್ದಾರೆ ಎಂದು ವ್ಹಾಲಿಬಾಲ್‌ ಕೋಚ್‌ ದೈಹಿಕ ಶಿಕ್ಷಕ ಅಬ್ದುಲ್‌ ಖಾದಿರ್‌ ಚೌದ್ರಿ ತಿಳಿಸಿದರು. 

ರಾಷ್ಟ್ರಮಟ್ಟದ ವ್ಹಾಲಿಬಾಲ್‌ನಲ್ಲಿ ಮಿಂಚಿ ಅಂತಾರಾಷ್ಟ್ರೀಯ ಮಟ್ಟದ ಪಂದ್ಯಾಟದಲ್ಲಿ ಭಾಗವಹಿಸುವ ಅರ್ಹತೆ ಪಡೆದಿರುವ ಅಸ್ಪಾಕ್‌ ಶೇಖ್‌ ಸಾಧನೆಯನ್ನು ಸ್ಥಳೀಯ ಗಣ್ಯರು, ಶಿಕ್ಷಕ ವರ್ಗದವರು ಹಾಗೂ ಕುಟುಂಬ ಸದಸ್ಯರು ಹರ್ಷವ್ಯಕ್ತಪಡಿಸಿದ್ದಾರೆ.

ಅದ್ಧೂರಿ ಸ್ವಾಗತ: ಚಿನ್ನದ ಪದಕ ಹಾಗೂ ಪ್ರಮಾಣ ಪತ್ರದೊಂದಿಗೆ ಮಂಗಳವಾರ ಪಟ್ಟಣದ ಬಸ್‌ ನಿಲ್ದಾಣಕ್ಕೆ ಆಗಮಿಸಿದ ಅಸ್ಪಾಕ್‌ನಿಗೆ ಸ್ಥಳೀಯ ಪ್ರಮುಖರು ಸೇರಿದಂತೆ ವ್ಹಾಲಿಬಾಲ್‌ ಕ್ರೀಡಾ ಪ್ರೇಮಿಗಳು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಇದೇ ವೇಳೆ ನೆರೆದಿದ್ದವರು ಅಸ್ಪಾಕ್‌ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಶಾಲು ಹೊದಿಸಿ, ಹೂವು ಮಾಲೆ ಹಾಕಿ ಸನ್ಮಾನಿಸಿ ಅಭಿನಂದಿಸಿದ್ದಾರೆ.

ಈ ಸಂದರ್ಭದಲ್ಲಿ ಬಸೀರ್‌ ಅಹ್ಮದ್‌, ಸೋಫಿ ಮೇಸ್ತ್ರೀ, ಶೇಖ್‌ ಅಹ್ಮದ್‌, ಸಂಗನಬಸ್ಸು ಚಟ್ಟೇರ, ಆದಂ ಶಫಿ, ಜಾವೀದ್‌, ವೆಂಕಟೇಶ ದೇಸಾಯಿ, ಅಬ್ದುಲ್‌ಖಾದಿರ್‌ ಚೌದ್ರಿ, ಮುರಳೀಧರ ಕೊಳ್ಳಿ, ಮಲ್ಲು ಮೇಸ್ತಕ್‌, ರಮೇಶ ಕೋಳುರ, ಚಂದ್ರು ಚವ್ಹಾಣ, ಚನ್ನಪ್ಪ ಸಂಗಟಿ, ಶಿವು, ನಹೀಂ ಇದ್ದರು.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.