ಮಹಿಳೆಯರ ಸಾಧನೆಯೇ ಪ್ರೇರಣೆಯಾಗಲಿ
Team Udayavani, Mar 26, 2021, 8:41 PM IST
ಹುಣಸಗಿ : ದೇಶದಲ್ಲಿ ಮಹಿಳೆ ಅಬಲೆಯಲ್ಲ ಸಬಲೆಯಾಗಿದ್ದು, ಎಲ್ಲ ರಂಗಗಳಲ್ಲಿಯೂ ಅಪ್ರತಿಮ ಸಾಧನೆ ಮಾಡಿದ್ದಾಳೆ ಎಂದು ರಾಯಚೂರ ವಿಜ್ಞಾನ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯೆ ಲೀಲಾ.ಎಂ.ಕಾರಟಗಿ ಹೇಳಿದರು.
ಪಟ್ಟಣದ ಮಾತೋಶ್ರೀ ಸುಬ್ಬಮ್ಮಗೌಡತಿ ಮಂಗಲ ಭವನದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತವಾಗಿ ಹಮ್ಮಿಕೊಂಡ ಮಹಿಳಾ ಶಿಕ್ಷಕಿ ಹಾಗೂ 21ನೇ ಶತಮಾನದ ಅಗತ್ಯತೆಗಳು ಎನ್ನುವ ಶೈಕ್ಷಣಿಕ ಕಾರ್ಯಾಗಾರ ಮತ್ತು ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದು, ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಕೂಡಾ ಒಬ್ಬ ಮಹಿಳೆ ಎಂಬುದು ವಿಷಯ ಎಂದರು. ಭಾರತ ದೇಶದ ಪ್ರಧಾನ ಮಂತ್ರಿಗಳಲ್ಲಿ ದಿ| ಇಂದಿರಾಗಾಂ ಧಿ ಹಾಗೂ ಅಂತರಿಕ್ಷಯಾನ ಮಾಡಿದ ಕಲ್ಪನಾ ಚಾವ್ಲಾ, ಗಣಿತ ತಜ್ಞೆ ಶಕುಂತಲಾ, ಸಾವಿತ್ರಿಬಾಯಿ ಫುಲೆ ಅವರು ಕೂಡಾ ಸಮಾಜದಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ಇವರ ಆದರ್ಶಗಳೇ ನಮಗೆ ಪ್ರೇರಣೆಯಾಗಬೇಕು ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿ ಕಾರಿ ಮಹಾದೇವರಡ್ಡಿ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಸಮನ್ವಯಾ ಧಿಕಾರಿ ಅಮರೇಶ ಕುಂಬಾರ, ಅಜೀಂ ಪ್ರೇಮ್ಜೀ ಸಂಯೋಜಕ ಸುರೇಶ ಗೌಡರ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಖಜಾಂಚಿ ಸೋಮರಡ್ಡಿ ಮಂಗಿಹಾಳ, ಸುರಪುರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗೋವಿಂದ ಟನಿಕೇದಾರ, ಹುಣಸಗಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ಹೊಕ್ರಾಣಿ, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕಾಧ್ಯಕ್ಷ ರಾಘವೇಂದ್ರ ಕಾಮನಟಗಿ, ಬಸನಗೌಡ ವಠಾರ, ಶೋಭಾ ವಾಲ್ಮೀಕಿ, ಖಾದರ ಪಟೇಲ್, ರಮೇಶ ಪಾಟೀಲ್, ಶಿವುಕುಮಾರ, ನೀಲಾ ನಾಗರಬೆಟ್ಟ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್