ಕಾಂಗ್ರೆಸ್‌ ಭದ್ರಕೋಟೆ ಬೇಧಿಸಲು ಕಮಲ, ದಳ ಕಸರತ್ತು


Team Udayavani, Apr 2, 2018, 3:43 PM IST

yad-1.jpg

ಯಾದಗಿರಿ: ರಾಜ್ಯದಲ್ಲಿ ಶೈಕ್ಷಣಿಕವಾಗಿ ಹಿಂದುಳಿದ ಯಾದಗಿರಿ ಬೆಟ್ಟ ಗುಡ್ಡಗಳಿಗೆ ಹೆಸರು ವಾಸಿ. ಗಿರಿಗಳ ನಾಡೆಂದೇ ಪ್ರಸಿದ್ಧಿ ಹೊಂದಿರುವ ಯಾದಗಿರಿ ಕೃಷಿ ಕ್ಷೇತ್ರವನ್ನು ಅವಲಂಬಿಸಿದೆ. ಪ್ರತಿವರ್ಷ ಬರಗಾಲ ಹಾಗೂ ಕೈಗಾರಿಕೆಗಳ ಕೊರತೆಯಿಂದಾಗಿ ಇಲ್ಲಿಯ ರೈತರು, ಕೂಲಿಕಾರ್ಮಿಕರು ಗುಳೆ ಹೋಗುವುದು ಮಾತ್ರ ಇನ್ನೂ ತಪ್ಪಿಲ್ಲ. ಮಾಜಿ ಸಚಿವ ದಿ. ವಿಶ್ವನಾಥರೆಡ್ಡಿ ಮುದ್ನಾಳ, ಡಾ.ಎ.ಬಿ. ಮಾಲಕ ರೆಡ್ಡಿ ಅವರನ್ನು ಆರಿಸಿ ಕಳುಹಿಸಿದ ಹೆಗ್ಗಳಿಕೆ ಯಾದಗಿರಿ ಕ್ಷೇತ್ರದ್ದಾಗಿದೆ.

ಯಾದಗಿರಿ ಕೋಟೆ, ಮೈಲಾಪುರ ದೇವಸ್ಥಾನ ಸೇರಿದಂತೆ ಹಲವು ಪ್ರವಾಸಿ ಕೇಂದ್ರಗಳಿವೆ. ಆದರೆ ನಿರೀಕ್ಷಿತ ಮಟ್ಟದ ಅಭಿವೃದ್ಧಿ ಕಂಡಿಲ್ಲ. ಗ್ರಾಮಗಳಲ್ಲಿ ಕುಡಿಯುವ ನೀರು, ರಸ್ತೆಗಳ ನಿರ್ಮಾಣ, ಚರಂಡಿ ಸೇರಿದಂತೆ ಮೂಲ ಸೌಕರ್ಯಗಳಿಂದ ಜನತೆ ವಂಚಿತಗೊಂಡಿದ್ದಾರೆ. ಕ್ಷೇತ್ರದಲ್ಲಿ ಲಿಂಗಾಯತರು ಹಾಗೂ ಅಲ್ಪಸಂಖ್ಯಾತರ ಮತಗಳು ಗಣನೀಯ ಸಂಖ್ಯೆಯಲ್ಲಿದ್ದು, ಅವರೇ ನಿರ್ಣಾಯಕರಾಗಿದ್ದಾರೆ.
 
ಕಾಂಗ್ರೆಸ್‌ ಹಿರಿಯ ಮುಖಂಡ ಹಾಗೂ ಶಾಸಕ ಡಾ| ಎ.ಬಿ. ಮಾಲಕರೆಡ್ಡಿ ಅವರು ಐದು ಬಾರಿ ಶಾಸಕರಾಗಿದ್ದಾರೆ.
ಎಸ್‌.ಎಂ. ಕೃಷ್ಣ ಸರ್ಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.

ಕಳೆದ ಐದು ವರ್ಷದ ಶಾಸಕರ ಅವಧಿಯಲ್ಲಿ ಯಾದಗಿರಿ ಮತಕ್ಷೇತ್ರದಲ್ಲಿ ಅಭಿವೃದ್ಧಿ ನಿರೀಕ್ಷಿಸಿತ ಮಟ್ಟಕ್ಕೆ ಮಾಡಿಲ್ಲ ಜಿಲ್ಲಾಸ್ಪತ್ರೆಯಲ್ಲಿ ತಜ್ಞ ವೈದ್ಯರು, ಸಿಬ್ಬಂದಿಗಳು ಸೇರಿದಂತೆ ಅಗತ್ಯ ಮೂಲ ಸೌಕರ್ಯವಿಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ದೊರೆಯದೇ ಪಕ್ಕದ ರಾಯಚೂರು ಹಾಗೂ ಕಲಬುರಗಿ ಜಿಲ್ಲೆಗೆ ಹೋಗುವಂತಾಗಿದೆ. ಎಂಬುದು ಸಾರ್ವಜನಿಕರ ದೂರಾಗಿದ್ದು, ಕಾಂಗ್ರೆಸ್‌ ಭದ್ರಕೋಟೆಯಾಗಿರುವ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್‌ ಜಯಕ್ಕಾಗಿ ಕಾತರಿಸುತ್ತಿವೆ. ತಾಲೂಕಿನಲ್ಲಿ ಪ್ರವಾಸಿ ಕೇಂದ್ರಗಳ ಅಭಿವೃದ್ಧಿ, ಮತಕ್ಷೇತ್ರದಲ್ಲಿ ಬೃಹತ್‌ ಕೈಗಾರಿಕೆಗಳನ್ನು ತಂದು ಸ್ಥಳೀಯರಿಗೆ ಉದ್ಯೋಗ  –ಕಲ್ಪಿಸುವುದು. ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವುದು ಮತದಾರರ ನಿರೀಕ್ಷೆಯಾಗಿದೆ. 
 
ಕ್ಷೇತ್ರದ ಬೆಸ್ಟ್‌ ಏನು?
ನಗರದಲ್ಲಿ 52 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾ ಸಂಕೀರ್ಣ ನಿರ್ಮಾಣ. ಮಹಿಳಾ ಪದವಿ ಕಾಲೇಜು ಮಂಜೂರು, ಟ್ರಾಫಿಕ್‌ ಪೊಲೀಸ್‌ ಠಾಣೆ, ಮಹಿಳಾ ಪೊಲೀಸ್‌ ಠಾಣೆ ಮಂಜೂರು, ನಗರ ಯೋಜನೆ ಪ್ರಾಧಿಕಾರದಿಂದ ನಗರಾಭಿವೃದ್ಧಿ ಪ್ರಾಧಿಕಾರವಾಗಿ ಮೇಲ್ದರ್ಜೆಗೇರಿಸಿರುವುದು. ವಡಗೇರಾ ನೂತನ ತಾಲೂಕು ಕೇಂದ್ರ ರಚನೆ ಮಾಡಲಾಗಿದೆ. 

ಕ್ಷೇತ್ರದ ದೊಡ್ಡ  ಸಮಸ್ಯೆ?
ಶೈಕ್ಷಣಿಕವಾಗಿ ಸಾಕಷ್ಟು ಹಿಂದುಳಿದಿದ್ದು, ಎಂಜಿನಿಯರಿಂಗ್‌, ಮೆಡಿಕಲ್‌ ಕಾಲೇಜು ನಿರ್ಮಾಣ ಆಗಬೇಕಿದೆ. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಫಲಿತಾಂಶದಲ್ಲಿ ಸುಧಾರಣೆಯಾಗಿಲ್ಲ. ಹದಗೆಟ್ಟಿರುವ ಗ್ರಾಮೀಣ ರಸ್ತೆಗಳು. ಬರಗಾಲ ಹಾಗೂ ಉದ್ಯೋಗವಿಲ್ಲದೆ ಗುಳೆ ಹೋಗುವ ಕೂಲಿ ಕಾರ್ಮಿಕರು.

ಶಾಸಕರು ಏನಂತಾರೆ?
ಕಳೆದ ಐದು ವರ್ಷದ ಅಧಿಕಾರ ಅವಧಿಯಲ್ಲಿ ಜಿಲ್ಲಾ ಸಂಕೀರ್ಣ, ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಾಣ, ನಗರದಲ್ಲಿ ಮಹಿಳಾ ಪದವಿ ಪೂರ್ವ ಕಾಲೇಜು, ಸಂಚಾರಿ ಹಾಗೂ ಮಹಿಳಾ ಪೊಲೀಸ್‌ ಠಾಣೆ ಮಂಜೂರು, ರಸ್ತೆ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯ ಮಾಡಿರುವ ಬಗ್ಗೆ ತೃಪ್ತಿ ಇದೆ. 
ಡಾ| ಎ.ಬಿ. ಮಾಲಕರೆಡ್ಡಿ

ಕ್ಷೇತ್ರ ಮಹಿಮೆ
ಮೈಲಾಪುರದ ಮೈಲಾರಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ವಿಶೇಷವಾಗಿದೆ. ಯಾದಗಿರಿ ಮತಕ್ಷೇತ್ರದಲ್ಲಿ 1957ರಿಂದ 2013ರವರೆಗೆ 13 ಬಾರಿ ವಿಧಾನಸಭೆ ಚುನಾವಣೆ ನಡೆದಿದ್ದು, ಕೇವಲ ಎರಡು ಚುನಾವಣೆ ಬಿಟ್ಟು ಉಳಿದ 11 ವಿಧಾನಸಭೆ ಚುನಾವಣೆಯಲ್ಲಿ ರೆಡ್ಡಿ ಲಿಂಗಾಯತ ಸಮುದಾಯದವರೇ ಶಾಸಕರಾಗಿ ಅಧಿಕಾರ ನಡೆಸಿದ್ದಾರೆ. ಯಾದಗಿರಿ ಮತಕ್ಷೇತ್ರದ ಇತಿಹಾಸ ಗಮನಿಸಿದಾಗ ಮಾಲಕರೆಡ್ಡಿ ಅವರು ಐದು ಬಾರಿ ಗೆಲುವು ಸಾಧಿಸಿದ್ದಾರೆ.

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು, ಶೌಚಾಲಯ, ಚರಂಡಿಗಳ ಸಮಸ್ಯೆ ಹೆಚ್ಚಾಗಿದ್ದು, ಶಾಸಕರು ಇತ್ತ ಕಡೆ ಗಮನ ಹರಿಸಿಲ್ಲ. ಇನ್ನೂ ಅಭಿವೃದ್ಧಿ ಕಾಮಗಾರಿಗಳು ಆಮೆಗತಿಯಲ್ಲಿ ನಡೆಯುತ್ತಿವೆ. 
ವಿಶ್ವನಾಥ ಸಿರವಾರ
 
ಚುನಾವಣೆ ಸಂದರ್ಭದಲ್ಲಿ ಗ್ರಾಮಕ್ಕೆ ಭೇಟಿ ನೀಡುವ ಜನಪ್ರತಿನಿಧಿ ಗಳು ನಂತರ ಗ್ರಾಮಗಳ ಕಡೆಗೆ ಮುಖ ಮಾಡಿಲ್ಲ. ಇದರಿಂದಾಗಿ ಗ್ರಾಮಗಳಲ್ಲಿ ಕುಡಿ ಯುವ ನೀರು ಸೇರಿದಂತೆ ಮೂಲ ಸಮಸ್ಯೆಗಳು ತಾಂಡವಾಡುತ್ತಿವೆ.
ಉಮೇಶ ಮುದ್ನಾಳ

ಜಿಲ್ಲಾ ಕೇಂದ್ರವಾಗಿರುವ ಯಾದಗಿರಿ ನಗರದಲ್ಲಿ ಚರಂಡಿಗಳ ಸ್ವತ್ಛತೆ ಇಲ್ಲ. ವಾರ್ಡ್‌ಗಳಲ್ಲಿ ನೀರಿನ ಸಮಸ್ಯೆ ಇದ್ದು, ಬಗೆಹರಿಸುವ ಪ್ರಯತ್ನವಾಗಿಲ್ಲ. ಮತಕ್ಷೇತ್ರದಲ್ಲಿ ಅಭಿವೃದ್ಧಿ ಮರೀಚಿಕೆಯಾಗಿದೆ. 
ಖಂಡಪ್ಪ ದಾಸನ್‌

ಯಾದಗಿರಿ ಕ್ಷೇತ್ರದಲ್ಲಿ ಕಳೆದ ಐದು ವರ್ಷದಲ್ಲಿ ಜಿಲ್ಲಾ ಸಂಕೀರ್ಣ, ಹೊಸ ಬಸ್‌ ನಿಲ್ದಾಣ, ನೂತನ ತಾಲೂಕು ರಚನೆ ಸೇರಿದಂತೆ ಹಲವಾರು ಅಭಿವೃದ್ಧಿ ಕೆಲಸಗಳು ನಡೆದಿವೆ.
ಮಾಣಿಕರೆಡ್ಡಿ ಕುರಕುಂದಾ 

ರಾಜೇಶ್‌ ಪಾಟೀಲ್‌ ಯಡ್ಡಳ್ಳಿ

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.