ಮಹಾತ್ಮರ ಜೀವನಾದರ್ಶಗಳು ಯುವಕರಿಗೆ ಸ್ಫೂರ್ತಿ
Team Udayavani, Oct 3, 2020, 4:20 PM IST
ಸೈದಾಪುರ: ಸದೃಢ ಸಮಾಜ ನಿರ್ಮಾಣಕ್ಕೆ ಯುವಕರು ಮಹಾತ್ಮರ ಜೀವನಾದರ್ಶ ಮೈಗೂಡಿಸಿಕೊಳ್ಳಬೇಕು ಎಂದು ನೆರಡಗಂ ಪಶ್ಚಿಮಾದ್ರಿ ಸಂಸ್ಥಾನ ವಿರಕ್ತಮಠದ ಪೀಠಾಧಿಪತಿ ಪಂಚಮ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.
ಪಟ್ಟಣದ ಮಿತ್ರ ಚಾರಿಟೇಬಲ್ ಟ್ರಸ್ಟ್ ಹಾಗೂ ಡಾ| ಸುರಗಿಮಠ ರಕ್ತ ನಿಧಿ ಕೇಂದ್ರ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲಬಹಾದ್ದೂರ ಶಾಸ್ತ್ರಿ ಜನ್ಮದಿನ ಪ್ರಯುಕ್ತ ಸರ್ಕಾರಿ ಮಾದರಿ ಶಾಲೆ ಆವರಣದಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಅಹಿಂಸಾ ಮಾರ್ಗದ ಮೂಲಕ ದೇಶದ ಸ್ವಾತಂತ್ರ್ಯಕ್ಕಾಗಿ ದುಡಿದ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲಬಹಾದ್ದೂರ ಶಾಸ್ತ್ರೀಯವರಂತಹ ಮಹಾನ್ ನಾಯಕರ ಜೀವನಾದರ್ಶಗಳು ಯುವಕರಿಗೆ ಸ್ಪೂರ್ತಿಯಾಗಲಿ ಎಂದ ಅವರು, ರಕ್ತದಾನ ಶಿಬಿರ ಹಮ್ಮಿಕೊಂಡ ಮಿತ್ರ ಚಾರಿಟೇಬಲ್ ಗೆಳೆಯರ ಬಳಗದ ಸೇವಾ ಕಾರ್ಯ ಶ್ಲಾಘನೀಯ ಎಂದರು.
ಡಾ| ಎಸ್.ಆರ್. ಸುರಗಿಮಠ ಪ್ರಾಸ್ತವಿಕ ಮಾತನಾಡಿದರು. ಇದಕ್ಕೂ ಮುನ್ನ ಮಹಾತ್ಮ ಗಾಂಧಿ ಹಾಗೂ ಲಾಲಬಹಾದ್ದೂರ ಶಾಸ್ತ್ರೀ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಕೋವಿಡ್ ವಾರಿಯರ್ ಆದ ವೈದ್ಯರು, ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು. ವಿಜಯಕುಮಾರ ದೇವರು, ಸಿದ್ದರಾಮ ದೇವರು, ಚಂದ್ರಶೇಖರ ದೇವರು, ಎಪಿಎಂಸಿ ಮಾಜಿ ಅಧ್ಯಕ್ಷ ಭೀಮನಗೌಡ ಕ್ಯಾತನಾಳ, ತಾಪಂ ಸದಸ್ಯ ಚಂದಪ್ಪ ಕಾವಲಿ ಬಾಲಚೇಡ, ಆಯುಷ್ ವೈದ್ಯಾಧಿಕಾರಿ ಡಾ| ಪ್ರಮೋದ ಕುಲಕರ್ಣಿ, ಪಿಎಸ್ಐ ಸುವರ್ಣ ಮಾಲಶೆಟ್ಟಿ ಸೇರಿ ಅನೇಕರು ಉಪಸ್ಥಿತರಿದ್ದರು.
ನಾಲ್ವರು ಶ್ರೀಗಳಿಂದ ರಕ್ತದಾನ: ಮಿತ್ರ ಚಾರಿಟೇಬಲ್ ಟ್ರಸ್ಟ್ ಹಮ್ಮಿಕೊಂಡ ಪ್ರಥಮ ರಕ್ತದಾನ ಶಿಬಿರದಲ್ಲಿ ತಾವೇ ಮೊದಲು ರಕ್ತದಾನ ಮಾಡುವುದಾಗಿ ತಿಳಿಸಿದ ನೆರಡಗಂ ಪಶ್ಚಿಮಾದ್ರಿ ಸಂಸ್ಥಾನ ವಿರಕ್ತಮಠದ ಪೀಠಾಧಿ ಪತಿ ಪಂಚಮ ಸಿದ್ಧಲಿಂಗ ಸ್ವಾಮೀಜಿ, ವಿಜಯಕುಮಾರ ದೇವರು, ಸಿದ್ದರಾಮ ದೇವರು, ಚಂದ್ರಶೇಖರ ದೇವರು ಸೇರಿದಂತೆ ಸುಮಾರು 100ಕ್ಕೂ ಅ ಧಿಕ ಯುವಕರು ರಕ್ತದಾನ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ