ಬುದ್ಧ ವಿಹಾರದಲ್ಲಿ ಬುದ್ಧ ಪೌರ್ಣಿಮೆ ಆಚರಣೆ
Team Udayavani, Dec 20, 2021, 2:28 PM IST
ಸುರಪುರ: ನಗರದ ಬುದ್ಧ ವಿಹಾರದಲ್ಲಿ ವರಜ್ಯೋತಿ ಭಂತೇಜಿ ಸಾನ್ನಿಧ್ಯದಲ್ಲಿ ಬುದ್ಧ ಅನುಯಾಯಿಗಳು ಭಾನುವಾರ ಶ್ರದ್ಧಾ ಭಕ್ತಿಯಿಂದ ಬುದ್ಧ ಪೌರ್ಣಿಮೆ ಆಚರಿಸಿದರು.
ಗೌತಮ ಬುದ್ಧನ ಮೂರ್ತಿಗೆ ಪುಷ್ಪ ನಮನ ಸಲ್ಲಿಸಿದರು. ನಂತರ ಪಂಚಶೀಲ ತಿಸರಣ ಪಠಿಸಿ ವಿಶೇಷ ಪ್ರಾರ್ಥನೆ ಮಾಡಿದರು. ಸಾನ್ನಿಧ್ಯ ವಹಿಸಿದ್ದ ವರಜ್ಯೋತಿ ಭಂತೇಜಿ ಸಂದೇಶ ನೀಡಿ, ಬುದ್ಧ ಧರ್ಮದಲ್ಲಿ ಪ್ರತಿಯೊಬ್ಬರು ನಂಬಿಕೆ, ವಿಶ್ವಾಸವಿಡಬೇಕು ಎಂದು ಸಲಹೆ ನೀಡಿದರು.
ಪ್ರಮುಖರಾದ ವೆಂಕಟೇಶ ಹೊಸ್ಮನಿ, ನಾಗಣ್ಣ ಕಲ್ಲದೇವನಳ್ಳಿ, ಭೀಮರಾಯ ಸಿಂಧಗೇರಿ, ರಾಹುಲ ಹುಲಿಮನಿ, ಮಾಳಪ್ಪ ಕಿರದಳ್ಳಿ, ಜಿ.ಆರ್. ಬನ್ನಾಳ, ರಮೇಶ ಅರಿಕೇರಿ, ಶ್ರೀಮಂತ ಚಲುವಾದಿ ಸೇರಿದಂತೆ ಮಹಿಳೆಯರು, ಮಕ್ಕಳು, ಅಂಬೇಡ್ಕರ್ ಅಭಿಮಾನಿಗಳು ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ