ಬಿಜೆಪಿ ಕಾರ್ಯಾಲಯದಲ್ಲಿ ಸಮರ್ಪಣಾ ದಿವಸ್ ಆಚರಣೆ
ಸಮಾಜದ ಕಟ್ಟಕಡೆ ವ್ಯಕ್ತಿಗಾಗಿ ಸ್ಪಂದಿಸುವ ಅಂತ್ಯೋದಯ ಮಾರ್ಗಗಳು ಸಶಕ್ತ ರಾಷ್ಟ್ರ ನಿರ್ಮಾಣದ ಭದ್ರ ಬುನಾದಿಯಾಗಿದೆ
Team Udayavani, Feb 12, 2021, 6:33 PM IST
ಯಾದಗಿರಿ: ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಗುರುವಾರ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಅವರ 53ನೇ ಪುಣ್ಯತಿಥಿ ಅಂಗವಾಗಿ ಉಪಾಧ್ಯಾಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಮರ್ಪಿಸಿ ಸಮರ್ಪಣಾ ದಿವಸ್ ಆಚರಿಸಲಾಯಿತು. ಬಿಜೆಪಿ ಜಿಲ್ಲಾಧಕ್ಷ ಡಾ| ಶರಣಭೂಪಾಲರಡ್ಡಿ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ, ಪಂಡಿತ್ ದೀನ ದಯಾಳ್ ಉಪಾಧ್ಯಾಯರು ಅಪ್ರತಿಮ ದೇಶಭಕ್ತ, ಸಮಾಜ ಸುಧಾರಕ, ಅಗ್ರಮಾನ್ಯ ನಾಯಕರಾಗಿದ್ದರು. ಅವರ ಪುಣ್ಯತಿಥಿಯಂದು ಆ ಮಹಾನ್ ಚೇತನಕ್ಕೆ ಅನಂತ ಪ್ರಣಾಮಗಳು ಮತ್ತು ಅವರ ಸರಳ ಜೀವನ ಮತ್ತು ಆದರ್ಶದ ಚಿಂತನೆ ಜೀವನದಲ್ಲಿ
ಅಳವಡಿಸಿಕೊಳ್ಳಬೇಕು ಎಂದರು.
ಮಾಜಿ ಶಾಸಕ ಡಾ| ವೀರಬಸವಂತರಡ್ಡಿ ಮುದ್ನಾಳ ಮಾತನಾಡಿ, ಪಂಡಿತ್ ದೀನ ದಯಾಳ್ ಉಪಾಧ್ಯಾಯರ ಸ್ಮರಣೆ ಮಾಡುತ ಅವರು ತೋರಿದ ಸ್ವಾವಲಂಬನೆ ಮತ್ತು ಸಮಾಜದ ಕಟ್ಟಕಡೆ ವ್ಯಕ್ತಿಗಾಗಿ ಸ್ಪಂದಿಸುವ ಅಂತ್ಯೋದಯ ಮಾರ್ಗಗಳು ಸಶಕ್ತ ರಾಷ್ಟ್ರ ನಿರ್ಮಾಣದ ಭದ್ರ ಬುನಾದಿಯಾಗಿದೆ ಎಂದರು.
ಈ ವೇಳೆ ಜಿಲ್ಲಾ ಉಪಾಧ್ಯಕ್ಷ ನೀಲಕಂಠರಾಯ ಎಲ್ಲೇರಿ, ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ಲಲಿತಾ ಅನ್ನಪುರ, ಎಸ್.ಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಪರಶುರಾಮ ಕುರಕುಂದಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟರಡ್ಡಿ ಅಬ್ಬೇತುಮಕೂರ, ಯುಡ ಅಧ್ಯಕ್ಷ ಬಸುರಾಜ ಚಂಡ್ರಕಿ, ನಗರಸಭೆ ಸದಸ್ಯ ಮತ್ತು ನಗರ ಮಂಡಲ ಅಧ್ಯಕ್ಷ ಸುರೇಶ ಅಂಬಿಗೇರ, ಹಣಮಂತ ಇಟಿಗಿ, ಸ್ವಾಮಿದೇವ ದಾಸನಕೇರಿ, ಸುನಿತಾ ಚವ್ಹಾಣ, ಯುಡ ಸದಸ್ಯ ಸುಭಾಷ ಮ್ಯಾಗೇರಿ, ಭೀಮಣ್ಣಗೌಡ ಕ್ಯಾತನಾಳ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ