ಹಿರಿಯರ ಕೇಂದ್ರಕ್ಕೆ ಸಿಇಒ ಭೇಟಿ
Team Udayavani, Sep 15, 2022, 8:32 PM IST
ಯಾದಗಿರಿ: ತಾಲೂಕಿನ ಬಂದಳ್ಳಿ ಹಿರಿಯರ ಕೇಂದ್ರಕ್ಕೆ ಜಿಪಂ ಸಿಇಒ ಭೇಟಿ ನೀಡಿ ಪರಿಶೀಲಿಸಿದರು. ಈ ಕೇಂದ್ರ ಸ್ಥಾಪನೆಯಿಂದ ಹಿರಿಯ ನಾಗರಿಕರಿಗೆ ಆಗಿರುವ ಪ್ರಯೋಜನೆಗಳ ಬಗ್ಗೆ ಅಲ್ಲಿರುವ ಹಿರಿಯ ನಾಗರಿಕರೊಂದಿಗೆ ಚರ್ಚಿಸಿ ಮಾಹಿತಿ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಅ
ಲ್ಲದೇ ಹಿರಿಯ ನಾಗರಿಕರಿಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗಲು ಬೇಕಾಗುವ ಅಗತ್ಯ ಸಲಕರಣೆ ಸಾಮಗ್ರಿಗಳನ್ನು ಕಲ್ಪಿಸಲು ವ್ಯವಸ್ಥೆ ಮಾಡುವಂತೆ ಕಲಿಕೆ ಟಾಟಾ ಟ್ರಸ್ಟ್ ಸಿಬ್ಬಂದಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ತಾಲೂಕಿನ ಎಲ್ಲ 64 ವಸತಿ ನಿಲಯಗಳಿಗೆ ಒಂದೇ ದಿನದಲ್ಲಿ ಅಧಿಕಾರಿಗಳು ಭೇಟಿ ನೀಡಿ ಮೂಲ ಸೌಕರ್ಯಗಳನ್ನು ಪರಿಶೀಲಿಸಿ ವರದಿ ನೀಡಲು ಸೂಚಿಸಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಭೇಟಿ ನೀಡಿ ವರದಿ ಸಲ್ಲಿಸಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮರೇಶ ಆರ್. ನಾಯ್ಕ ತಿಳಿಸಿದ್ದಾರೆ.
ಸೆ. 12ರಂದು ಜಿಪಂ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಸೂಚಿಸಿದ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ಯಾದಗಿರಿ ತಾಲೂಕಿನ ಎಲ್ಲ 64 ವಸತಿ ನಿಲಯಗಳಿಗೆ ಒಂದೇ ದಿನ ಸಂಜೆ ಭೇಟಿ ನೀಡಿ ವರದಿ ನೀಡುವಂತೆ ಅಧಿಕಾರಿಗಳನ್ನು ನೇಮಿಸಲಾಗಿತ್ತು. ಅದರನ್ವಯ ನೇಮಿಸಲಾದ ಅಧಿಕಾರಿಗಳು ಸೆ. 12ರ ಸಂಜೆ 5ಕ್ಕೆ ಯಾದಗಿರಿ ತಾಲೂಕಿನ ಎಲ್ಲ ವಸತಿ ನಿಲಯಗಳಿಗೆ ಭೇಟಿ ನೀಡಿ ವರದಿ ಸಲ್ಲಿಸಿದ್ದಾರೆ. ಇದೊಂದು ವಿನೂತನ ರೀತಿಯ ಕ್ರಮವಾಗಿದ್ದು, ಹಂತ ಹಂತವಾಗಿ ವಸತಿ ನಿಲಯಗಳಲ್ಲಿ ಅವಶ್ಯಕ ಇರುವ ಎಲ್ಲ ಮೂಲ ಸೌಕರ್ಯಗಳನ್ನು ಸಿಗುವಂತೆ ಮಾಡುವ ಗುರಿ ಹೊಂದಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ