CHC; ದಿಢೀರ್ ಭೇಟಿ ನೀಡಿ ಸಿಬಂದಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಕಂದಕೂರ
ಕೆಲಸ ಮಾಡಲು ಇಷ್ಟವಿಲ್ಲದಿದ್ದರೆ ನಿಮ್ಮ ಮನೆಗೆ ಹೋಗಿ...
Team Udayavani, Mar 6, 2024, 4:38 PM IST
ಯಾದಗಿರಿ: ಯರಗೋಳ ವ್ಯಾಪ್ತಿಯ ಅರಿಕೇರಾ (ಬಿ) ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ದಿಢೀರ್ ಭೇಟಿ ನೀಡಿ, ರೋಗಿಗಳ ಜತೆ ಮಾತನಾಡಿ, ಅಲ್ಲಿನ ಅವ್ಯವಸ್ಥೆ,ಸಿಬಂದಿಗಳ ನಿರ್ಲಕ್ಷತನ ನೋಡಿ ಆಕ್ರೋಶ ವ್ಯಕ್ತಪಡಿಸಿದರು.
ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ವಿಜಯ್ ಕುಮಾರ್ ಪಾಟೀಲ್ ವಿರುದ್ಧ ಕಿಡಿ ಕಾರಿದರು, ಕುಡಿಯಲು ನೀರಿಲ್ಲ, ಔಷಧಿಗಳಿಲ್ಲದೆ ರೋಗಿಗಳಿಗೆ ಹೇಗೆ ಚಿಕಿತ್ಸೆ ಕೊಡುತ್ತೀರಿ,? ದನದ ಕೊಟ್ಟಿಗೆಯಾಗಿದೆ, ಶಾಸಕನಾಗಿ ನಾನು ಆಗಮಿಸುತ್ತಿದ್ದೇನೆ ಎಂದು ನೀವು ಆಸ್ಪತ್ರೆಗೆ ಆಗಮಿಸಿದ್ದೀರಾ..? ಎಂದು ಪ್ರಶ್ನಿಸಿದರು.
ನಿಮಗೆ ಕೆಲಸ ಮಾಡಲು ಇಷ್ಟವಿಲ್ಲದಿದ್ದರೆ ನಿಮ್ಮ ಮನೆಗೆ ಹೋಗಿ ಎಂದರು. ನರ್ಸ್ ಸಿಬಂದಿಯನ್ನು ಕರೆದು ಮಾತನಾಡಿಸಿ ಹೇಗೆ ಚಿಕಿತ್ಸೆ ನೀಡುತ್ತೀರಿ? ರೋಗಿಗಳಿಗೆ ಗ್ಲೂಕೋಸ್ ಡ್ರಿಪ್ ಹಚ್ಚುವ ಪದ್ಧತಿ ಹೀಗೇನಾ? ಎಂದು ಪ್ರಶ್ನಿಸಿದಾಗ, ಸಿಬಂದಿ ಯಾವುದೇ ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾದರು.
ಗ್ರಾಮದ ಪ್ರಮುಖರು ಆಸ್ಪತ್ರೆ ವೈದ್ಯಕೀಯ ಸಿಬಂದಿಗಳು, ಆಸ್ಪತ್ರೆಯಲ್ಲಿ ಇರುವುದಿಲ್ಲ, ಚಿಕಿತ್ಸೆ ದೂರದ ಮಾತು ಎಂದು ತಮ್ಮ ಅಳಲನ್ನು ಶಾಸಕರ ಎದುರಿಗೆ ತೋಡಿಕೊಂಡರು. ಶಾಸಕರು ಸಿಬ್ಬಂದಿಯ ಹಾಜರಿ ಪುಸ್ತಕ, ಔಷಧಿ ಕೋಣೆ, ವೀಕ್ಷಿಸಿದರು, ತಾಲೂಕ ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಬಸವರಾಜ್ ಶರಬೈ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕಲ್ಯಾಣಕುಮಾರ್, ನಿರ್ಮಿತಿ ಕೇಂದ್ರದ ಕಿರಣ್ ಕುಮಾರ್, ಗ್ರಾಮ ಪಂಚಾಯತಿ ಅಧ್ಯಕ್ಷ ಬಸಮ್ಮ, ಉಪಾಧ್ಯಕ್ಷ ಅನುಷಾ, ಸದಸ್ಯರಾದ ಹಣಮಂತ, ಯಸುಮಿತ್ರ, ಪ್ರಭುಗೌಡ, ಶಾಂತಪ್ಪ,ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
MUST WATCH
ಹೊಸ ಸೇರ್ಪಡೆ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!