ಶರಬಮ್ಮ ಕುಟುಂಬಕ್ಕೆ ಚೆಕ್ ವಿತರಣೆ
Team Udayavani, Oct 7, 2019, 2:11 PM IST
ಶಹಾಪುರ: ರಸ್ತಾಪುರ ಗ್ರಾಮದ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಸಿಡಲಿಗೆ ಬಲಿಯಾಗಿದ್ದ ಶರಬಮ್ಮ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ 5 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದರು. ಜತೆಗೆ ವೈಯಕ್ತಿವಾಗಿ 11 ಸಾವಿರ ರೂ. ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆಕಸ್ಮಿಕವಾಗಿ ಪ್ರಕೃತಿ ಅವಘಡದಿಂದ ರೈತ ಮಹಿಳೆ ಮೃತಳಾಗಿದ್ದು, ಇಡೀ ಕುಟುಂಬವನ್ನು ಸಲುಹುತ್ತಿದ್ದ ರೈತ ಮಹಿಳೆ ಮೃತ ಹೊಂದಿದ ಪರಿಣಾಮ ಕುಟುಂಬಸ್ಥರು ಕುಗ್ಗಿ ಹೋಗಿದ್ದಾರೆ. ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಕುಟುಂಬಸ್ಥರಿಗೆ ಕಲ್ಪಿಸಲಾಗುವುದು.
ಕುಟುಂಬಸ್ಥರು ಧೈರ್ಯವಾಗಿ ಇರಬೇಕು. ಮುಂದಿನ ಬದುಕನ್ನು ಕಟ್ಟಿಕೊಳ್ಳಬೇಕು. ಅದಕ್ಕೆ ಬೇಕಾದ ಪೂರಕ ಅನುಕೂಲ ಜಿಲ್ಲಾಡಳಿತ ಕಲ್ಪಿಸಲಿದೆ. ಮಗುವಿಗೆ ಶಿಕ್ಷಣ ಕೊಡಿಸಿ. ನಾವೆಲ್ಲ ಇದ್ದೇವೆ ಎಂದು ಕುಟುಂಬಸ್ಥರಿಗೆ ಆತ್ಮಸ್ಥೈರ್ಯ ತುಂಬಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಗುರು ಪಾಟೀಲ ಶಿರವಾಳ, ಜಿಲ್ಲಾ ಧಿಕಾರಿ ಕೂರ್ಮಾರಾವ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಚಂದ್ರಶೇಖರಗೌಡ ಮಾಗನೂರ, ಡಾ| ಚಂದ್ರಶೇಖರ ಸುಬೇದಾರ, ರಾಜುಗೌಡ ಉಕ್ಕಿನಾಳ, ಸಾಯಬಣ್ಣ ಪುರೆಲ ಸೇರಿದಂತೆ ತಾಪಂ ಅಧ್ಯಕ್ಷ ನಾಗಣ್ಣ ಪೂಜಾರಿ, ಅಡಿವೆಪ್ಪ ಜಾಕಾ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್