ಚಟ್ನಳ್ಳಿ ಗ್ರಾಮ ಪಂಚಾಯಿತಿಗೂ ಪ್ರಶಸ್ತಿ
Team Udayavani, Oct 1, 2019, 4:26 PM IST
ಶಹಾಪುರ: ಗ್ರಾಪಂ ವ್ಯಾಪ್ತಿಯಲ್ಲಿ ಉತ್ತಮ ಕಾರ್ಯನಿರ್ವಹಣೆ ಹಾಗೂ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿಅನುಷ್ಠಾನಗೊಳಿಸಿರುವ ಹಿನ್ನೆಲೆಯಲ್ಲಿ ಈ ಬಾರಿ ತಾಲೂಕಿನ ಚಟ್ನಳ್ಳಿ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ ಒಲಿದು ಬಂದಿದ್ದು, ಗ್ರಾಮಸ್ಥರು ಸೇರಿದಂತೆ ಗ್ರಾಪಂ ವ್ಯಾಪ್ತಿಯ ಜನರು ಸಂತಸ ವ್ಯಕ್ತಪಡಿಸಿದ್ದಾರೆ.
ಚಟ್ನಳ್ಳಿ ಗ್ರಾಪಂ ಒಟ್ಟು 19 ಜನ ಸದಸ್ಯರನ್ನು ಹೊಂದಿದೆ. ಚಟ್ನಳ್ಳಿ ಸೇರಿ ಕರಣಗಿ, ಮರಮಕಲ್, ಬಲಕಲ್, ನಾಲ್ವಡಿಗಿ ಮತ್ತು ನಾಲ್ವಡಿಗಿ ತಾಂಡಾ ಗ್ರಾಮಗಳು ಬರುತ್ತವೆ. ಇದರಲ್ಲಿ ಚಟ್ನಳ್ಳಿ ಗ್ರಾಮವೇ 3000 ಜನಸಂಖ್ಯೆ ಹೊಂದಿದ್ದು, ಗ್ರಾಪಂ ವ್ಯಾಪ್ತಿಯ ಎಲ್ಲಾ ಹಳ್ಳಿಗಳು ಸೇರಿ ಅಂದಾಜು 8000 ಜನಸಂಖ್ಯೆ ಹೊಂದಿದೆ. ಗ್ರಾಪಂ ವ್ಯಾಪ್ತಿಯಲ್ಲಿ 14ನೇ ಹಣಕಾಸು ಯೋಜನೆಯಡಿ ಹಲವಾರು ಕಾಮಗಾರಿಗಳು ಹಮ್ಮಿಕೊಂಡಿದ್ದು ಆನ್ಲೈನ್ ಮೂಲಕ ಹಣ ಪಾವತಿ ಮಾಡಲಾಗಿದೆ.
ಚರಂಡಿ ತ್ಯಾಜ್ಯ ವಿಲೇವಾರಿ, ಹೂಳು ತೆಗೆಯುವುದು, ರಸ್ತೆ ಸುಧಾರಣೆ, ಬೀದಿ ದೀಪ ಅಳವಡಿಕೆ, ಉದ್ಯೋಗ ಖಾತ್ರಿ ಕಾಮಗಾರಿಗಳು ಸಮರ್ಪಕ ನಿರ್ವಹಣೆ, ಚೆಕ್ ಡ್ಯಾಂ ನಿರ್ಮಾಣ ಸೇರಿದಂತೆ ಶೈಕ್ಷಣಿಕವಾಗಿ ಹತ್ತು ಹಲವು ಸೌಲಭ್ಯ, ಆಟದ ಮೈದಾನ ಗ್ರಾಮಗಳಲ್ಲಿ ಸಚ್ಛತಾ ಅಭಿಯಾನ, ಶೌಚಾಲಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬೀದಿ ನಾಟಕಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಕಾರ್ಯಕ್ರಮಗಳು ಮತ್ತು ಮನೆಗಳ ನಿರ್ಮಾಣ ಮತ್ತು ಸರ್ಕಾರಿ ಪ್ರಾಥಮಿಕ ಆರೋಗ್ಯ ಆವರಣ ಸೇರಿದಂತೆ ಗ್ರಾಮಗಳ ದೇವಸ್ಥಾನಗಳ ಆವರಣಗಳಲ್ಲಿ ಸಸಿಗಳನ್ನು ನೆಡುವುದು ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದೆ. ಜತೆಗೆ ಸಂಘ, ಸಂಸ್ಥೆಗಳ ಸಹಾಯ ಸಹಕಾರದಿಂದ ಪ್ರಸ್ತುತ ವರ್ಷದ ಗಾಂಧಿ ಗ್ರಾಮ ಪ್ರಶಸ್ತಿಗೆ ಭಾಜನವಾಗಿದೆ. ಮೂಲ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಗ್ರಾಪಂ ಆಡಳಿತ ಮಂಡಳಿ ಸಹಾಯ ಸಹಕಾರದಿಂದ ಪಂಚಾಯತ್ ಅಧಿಕಾರಿಗಳು ಕ್ರಮಬದ್ಧವಾಗಿ ಕಾರ್ಯವನ್ನು ಕೈಗೊಳ್ಳಲಾಗಿದೆ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವರ್ಷದಿಂದ ಉತ್ತಮ ಕಾರ್ಯ ನಿರ್ವಹಣೆಯಿಂದಾಗಿ ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ಸಾಗುತ್ತಿವೆ. ಹೀಗಾಗಿ ಗಾಂಧಿ ಪುರಸ್ಕಾರಕ್ಕೆ ಗ್ರಾಮ ಆಯ್ಕೆಯಾಗಿದೆ. ಇದೇ ಅ.2 ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನವಾಗಲಿದ್ದು, ಅಂದು ಗ್ರಾಪಂ ಅಧ್ಯಕ್ಷ ಮತ್ತು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಸಿಬ್ಬಂದಿ ಭಾಗವಹಿಸಲಿದ್ದಾರೆ.
-ಮಲ್ಲಿಕಾರ್ಜುನ ಮುದ್ನೂರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ