ಭರದಿಂದ ಸಾಗಿದೆ ರೈತರಿಂದ ಮಾಹಿತಿ ಸಂಗ್ರಹಿಸುವ ಕಾರ್ಯ

ಪ್ರತಿಶತ ಗುರಿ ತಲುಪಿದ ಸುರಪುರ ತಾಲೂಕಾಡಳಿತ

Team Udayavani, Jul 23, 2019, 1:08 PM IST

yg-tdy-2

ಸುರಪುರ: ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಗೆ ಮಾಹಿತಿ ಸಲ್ಲಿಸಲು ಸಾಲುಗಟ್ಟಿ ನಿಂತಿರುವ ರೈತರು.

ಸುರಪುರ: ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಗೆ ಪ್ರತಿಶತ ಗುರಿ ತಲುಪಲು ಜಿಲ್ಲಾಡಳಿತ ಸಭೆ ನಡೆಸಿ ಖಡಕ್‌ ಎಚ್ಚರಿಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ತಾಲೂಕು ಆಡಳಿತದ ಅನುಷ್ಠಾನ ಅಧಿಕಾರಿಗಳು ಹಗಲಿರಳು ಶ್ರಮಿಸಿ ಶೇ. 94 ಗುರಿ ಸಾಧಿಸಿದ್ದಾರೆ.

ತಾಲೂಕಿನಲ್ಲಿ 88, 817 ಹಾಗೂ ಹುಣಸಗಿ ತಾಲೂಕಿನ 65,579 ಸೇರಿ ಒಟ್ಟು 1,54,396 ರೈತ ಕುಟುಂಬಗಳನ್ನು ಯೋಜನೆಗೆ ಗುರಿತಿಸಲಾಗಿತ್ತು. ಈ ಪೈಕಿ ಸುರಪುರ 56,468 ಹಾಗೂ ಹುಣಸಗಿಯಲ್ಲಿ 40,262 ಎನ್‌ಎ, ಗೈರಾಣ, ವೈದ್ಯರು, ವಕೀಲರು, ಪಿಂಚಣಿದಾರರು ಸೇರಿದಂತೆ ಒಟ್ಟು 96,730 ಯೋಜನೆಗೆ ಒಳಪಡದ ಅನರ್ಹ ಕುಟುಂಬಗಳೆಂದು ಗುರುತಿಸಲಾಗಿದೆ.

ಕಳೆದ ಒಂದು ತಿಂಗಳಿಂದ ನಡೆದಿದ್ದ ಅಭಿಯಾನದಲ್ಲಿ ಎರಡು ತಾಲೂಕಿನ ರೈತರನ್ನು ಯೋಜನೆಗೆ ಒಳಪಡಿಸಲು ಅಧಿಕಾರಿಗಳು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಜಿಲ್ಲಾಡಳಿತ ನೀಡಿದ್ದ ಜು. 10ರ ಗಡುವಿನವರೆಗೆ ತಾಲೂಕಾಡಳಿತ ಹೇಳಿಕೊಳ್ಳುವ ಮಟ್ಟಿಗೆ ಪ್ರಗತಿ ಸಾಧಿಸಿರಲಿಲ್ಲ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಮೇಲಿಂದ ಮೇಲೆ ಸಭೆ ನಡೆಸಿ ತಾಲೂಕು ಆಡಳಿತಕ್ಕೆ ಬಿಸಿ ಮುಟ್ಟಿಸಿತ್ತು. ಗುರಿ ತಲುಪದವರ ತಲೆ ದಂಡ ಕುರಿತು ಎಚ್ಚರಿಕೆ ನೀಡಿ ಪ್ರತಿಶತ ತಲುಪಲು ವಾರದ ಗಡುವು ನೀಡಿ ಖಡಕ್ಕಾಗಿ ತಾಕೀತು ಮಾಡಿತ್ತು. ಜಿಲ್ಲಾಧಿಕಾರಿಗಳ ಕಟ್ಟಪ್ಪಣೆಯಿಂದ ಎಚ್ಚೆತ್ತುಕೊಂಡ ತಾಲೂಕಾಡಳಿತ ಶತಾಯಗತಾಯ ಪ್ರಯತ್ನ ಪಟ್ಟು ಶೇ. 94 ರಷ್ಟು ಸಾಧನೆ ಮಾಡಿದೆ.

ಮಾಹಿತಿ ಸಂಗ್ರಹ: ಯೋಜನೆಗೆ ಒಳಪಡಿಸಲು ತಾಲೂಕಿನಲ್ಲಿ 32,346 ( ಶೇ. 86) ಹಾಗೂ ಹುಣಸಗಿ ತಾಲೂಕಿನಿಂದ 25,317( ಶೇ. 93) ರೈತರಿಂದ ಮಾಹಿತಿ ಸಂಗ್ರಹಿಸಲಾಗಿದೆ. ಪ್ರತಿಶತ ಗುರಿ ತಲುಪಲು ರೈತರ ಮಾಹಿತಿ ಸಂಗ್ರಹ ಕಾರ್ಯ ಭರದಿಂದ ಸಾಗಿದೆ.

ಬಹಿರಂಗ ಕಾರ್ಯಕ್ರಮ: ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯಿಂದ ಯಾವೊಬ್ಬ ರೈತ ವಂಚನೆಯಾಗರಬಾರದೆಂದು ಜಿಲ್ಲಾಡಳಿತ ಸೂಚಿಸಿದ ಹಿನ್ನೆಲೆಯಲ್ಲಿ ತಾಲೂಕಾಡಳಿತ ಡಂಗುರ ಸಾರವುದು, ಬೆಳೆಗ್ಗೆ 8:00 ಗಂಟೆಯೊಳಗೆ ಮನೆ ಮನೆ ಭೇಟಿ, ಬಸ್‌ ನಿಲ್ದಾಣ, ದೇವಸ್ಥಾನ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಕುಳಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಉತ್ತಮ ಪ್ರತಿಕ್ರಿಯೆ: ರೈತರಿಂದ ಕಿಸಾನ್‌ ಸಮ್ಮಾನ್‌ ಯೋಜನೆಗೆ ತಾಲೂಕಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರೈತರು ಅಧಿಕಾರಿಗಳಿಗೆ ಆಧಾರ್‌, ಬ್ಯಾಂಕ್‌ ಪಾಸ್‌ಬುಕ್‌, ಪಹಣಿ ಹಿಡಿದು ಸರದಿ ಸಾಲಿನಲ್ಲಿ ನಿಂತು ದಾಖಲಾತಿಗಳನ್ನು ನೀಡಿ ಘೋಷವಾರು ಪ್ರಮಾಣ ನೀಡುತ್ತಿರುವುದು ಕಂಡು ಬರುತ್ತಿದೆ.

ದಾಖಲೆ ಸಲ್ಲಿಸುವಿಕೆ: ಈ ಯೋಜನೆಯ ಲಾಭ ಕುಟುಂಬದ ಒಬ್ಬರು ಮಾತ್ರ ಅರ್ಹರಾಗುತ್ತಾರೆ. ಜಂಟಿ ಖಾತೆ ಹೊಂದಿದ್ದ ಪಕ್ಷದಲ್ಲಿ ಎಲ್ಲರೂ ಯೋಜನೆಗೆ ಅರ್ಹರು. ಹೀಗಾಗಿ ಯೋಜನೆ ಲಾಭ ಪಡೆದುಕೊಳ್ಳಲು ಸರಕಾರ ಕೇಳಿರುವ ದಾಖಲಾತಿಗಳನ್ನು ಗ್ರಾಮವಾರು ರೈತರು ಗ್ರಾಪಂ ಅಭಿವೃದ್ಧಿ ಅಧಿಕಾರಿ, ಗ್ರಾಪಂ ಕಾರ್ಯದರ್ಶಿ, ಗ್ರಾಮ ಲೆಕ್ಕಿಗ, ಕೃಷಿ ಇಲಾಖೆ ಅಧಿಕಾರಿಗಳಿಗೆ ನೀಡುವುದು ಕಡ್ಡಾಯವಾಗಿದೆ.

ಜಿಲ್ಲಾಡಳಿತದ ಆದೇಶವನ್ನು ಗಂಭೀರವಾಗಿ ಪರಿಗಣಿಸಿ ಹಗಲಿರಳು ಕೆಲಸ ಮಾಡಿ ಪ್ರತಿಶತ ಗುರಿ ತಲುಪಲು ಪ್ರಯತ್ನ ಮಾಡಿದ್ದೇವೆ. ಶೇ. 94 ಗುರಿ ತಲುಪಿದ್ದು, ಸಂತಸ ತಂದಿದೆ. ಇನ್ನುಳಿದಿದ್ದ ರೈತರ ಮಾಹಿತಿಯನ್ನು ಶೀಘ್ರವೇ ಸಂಗ್ರಹಿಸಿ ಪ್ರತಿಶತ ಗುರಿ ತಲುಪುತ್ತೇವೆ. •ಸುರೇಶ ಅಂಕಲಗಿ, ತಹಶೀಲ್ದಾರ್‌ ಸುರಪುರ

ತಾಲೂಕಿನ ಅರ್ಹ ರೈತರನ್ನು ಕಿಸಾನ್‌ ಸಮ್ಮಾನ್‌ ಯೋಜನೆಗೆ ಒಳಪಡಿಸಲು ಅಧಿಕಾರಿ ವರ್ಗ ಶಕ್ತಿ ಮೀರಿ ಪ್ರಯತ್ನಿಸುತ್ತಿದೆ. ಜುಲೈ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು. ಇನ್ನು ಮಾಹಿತಿ ನೀಡದ ರೈತರು ತ್ವರಿತವಾಗಿ ಮಾಹಿತಿ ನೀಡಿ ಯೋಜನೆಯ ಲಾಭ ಪಡೆದುಕೊಳ್ಳಬೇಕು. •ದಾನಪ್ಪ ಕತ್ನಳ್ಳಿ, ಸಹಾಯಕ ಕೃಷಿ ನಿರ್ದೇಶಕರು, ಸುರಪುರ
ಯೋಜನೆಗೆ ರೈತರು ಉತ್ತಮವಾಗಿ ಸಹಕರಿಸಿದ್ದಾರೆ. ರೈತರ ಕುಟುಂಬಗಳ ಸಂಖ್ಯೆ ಗುರುತಿಸುವಲ್ಲಿ ಲೋಪದೋಷ ಉಂಟಾಗಿತ್ತು. ಜಿಲ್ಲಾಧಿಕಾರಿ ನಿರ್ದೇಶನದಂತೆ ಅನರ್ಹ ಕುಟುಂಬಗಳನ್ನು ತೆಗೆದು ಹಾಕಿರುವುದರಿಂದ ಯೋಜನೆ ಗುರಿ ತಲುಪಲು ಸಾಧ್ಯವಾಗಿದೆ. •ಜಗದೇವಪ್ಪ, ತಾಪಂ ಇಒ
•ಸಿದ್ದಯ್ಯ ಪಾಟೀಲ

ಟಾಪ್ ನ್ಯೂಸ್

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.