ಸೌಕರ್ಯ ಕಲ್ಪಿಸಲು ಬದ್ಧ: ರಾಜುಗೌಡ
Team Udayavani, Jan 7, 2019, 11:18 AM IST
ಕಕ್ಕೇರಾ: ಗ್ರಾಮೀಣ ಪ್ರದೇಶದಲ್ಲಿ ಇನ್ಮುಂದೆ ನಿರಂತರ ವಿದ್ಯುತ್ ಹರಿಯಲಿದೆ ಎಂದು ಶಾಸಕ ರಾಜುಗೌಡ ಹೇಳಿದರು.
ಪಟ್ಟಣದ ಕವಸಾರ ದೊಡ್ಡಿ, ಸ್ವಾಮೇರ ದೊಡ್ಡಿಗಳಿಗೆ ದೀನ್ ದಯಾಳ್ ಉಪಾಧ್ಯಯ ಗ್ರಾಮ ಜೋತಿ ವಿದ್ಯುತ್ ಯೋಜನೆಡಿಯಲ್ಲಿ ಹೊಸದಾಗಿ ಕಲ್ಪಿಸಲಾದ ವಿದ್ಯುತ್ ಸೌಕರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವಿದ್ಯುತ್ ಸಂಪರ್ಕ ಇಲ್ಲದೆ ಗ್ರಾಮೀಣ ಹಾಗೂ ದೊಡ್ಡಿಗಳಿಗೆ ಹೊಸದಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲು ಈಗಾಗಲೇ ಸುರಪುರ ತಾಲೂಕಿನಲ್ಲಿ ದಿನ್ ದಯಾಳ್ ಯೋಜನೆಡಿಯಲ್ಲಿ 27 ಕೋಟಿ ರೂ. ಅನುದಾನದಲ್ಲಿ ಈ ಒಂದು ಕಾಮಗಾರಿ ತುರ್ತು ನಡೆದಿದೆ. ಇದು ನಿರಂತರವಾಗಿ ವಿದ್ಯುತ್ ಪೂರೈಸುವ ಕೆಲಸವಾಗಿದೆ ಎಂದು ಅವರು ತಿಳಿಸಿದರು.
ಈ ಭಾಗದಲ್ಲಿ ಅನೇಕ ದೊಡ್ಡಿಗಳಿಗೆ ವಿದ್ಯುತ್ ಕೊರತೆ ಸಮಸ್ಯೆ ಎದುರಿಸಬೇಕಾಗಿತ್ತು. ವಿದ್ಯುತ್ ಇಲ್ಲದೆ ಚಿಮಣಿ ಬುಡ್ಡಿಯಲ್ಲಿ ಜನ ಕಾಲ ಕಳೆಯಬೇಕಿತ್ತು. ಸದ್ಯ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, ಈಗ ಯಾವುದೇ ಸಮಸ್ಯೆ ಆಗದು ಎಂದು ಹೇಳಿದರು. ಜನದಟ್ಟಣೆ ಮತ್ತು ಅಧಿಕ ಮನೆಗಳಿದ್ದು, ವಿದ್ಯುತ್ ಸಂಪರ್ಕ ಹೊಂದಿಲ್ಲದಿದ್ದರೆ ಅಂತಹ ಗ್ರಾಮ ಅಥವಾ ಮನೆಗಳನ್ನು ಗುರುತಿಸಿ ವಿದ್ಯುತ್ ಪರಿವರ್ತಕದೊಂದಿಗೆ ವಿದ್ಯುತ್ ಜೋಡಣೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ದಶರಥ ಆರೇಶಂಕರ, ಎಪಿಎಂಸಿ ಸದಸ್ಯ ಬಸವರಾಜ ಆರೇಶಂಕರ, ಪರಮಣ್ಣ ಪೂಜಾರಿ, ರಮೇಶ ಶೆಟ್ಟಿ ಸೇರಿದಂತೆ ವಿವಿಧ ಮುಖಂಡರು ಹಾಗೂ ವಿದ್ಯುತ್ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?