ಕಾಲಮಿತಿಯೊಳಗೆ ಕಲ್ಯಾಣ ಕಾಮಗಾರಿ ಪೂರ್ಣಗೊಳಿಸಿ
Team Udayavani, Mar 27, 2022, 2:39 PM IST
ಯಾದಗಿರಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಕೈಗೆತ್ತಿಗೊಂಡಿರುವ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ, ಗುರಿ ಸಾಧಿಸುವಂತೆ ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್.ಅವರು ತಿಳಿಸಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು, ಮಂಡಳಿ ವತಿಯಿಂದ ವಿವಿಧ ಇಲಾಖೆಗಳಿಗೆ ನೀಡಿದ ಕಾಮಗಾರಿಗಳ ವಿವರ, ಆರ್ಥಿಕ ಗುರಿ, ಭೌತಿಕ ಗುರಿ ಕುರಿತು ಸಾಧಿಸಿರುವ ಪ್ರಗತಿಯ ಕುರಿತು ಪರಿಶೀಲನೆಯನ್ನು ನಡೆಸಿ ಮಾತನಾಡಿದರು.
2021-22ನೇ ಸಾಲಿಗೆ ಮಂಡಳಿಯಿಂದ ಯಾದಗಿರಿ ಜಿಲ್ಲೆಗೆ ಮಾರ್ಚ್ ಮಾಹೆಗೆ ಒಟ್ಟು 27.87 ಕೋಟಿ ರೂ.ಗಳ ಆರ್ಥಿಕ ಗುರಿ ನಿಗದಿಪಡಿಸಲಾಗಿದ್ದು, ಅದಕ್ಕನುಗುಣವಾಗಿ ಇಲ್ಲಿಯವರೆಗೆ ಒಟ್ಟು 20.39 ಕೋಟಿ ರೂ.ಗಳ ಮೊತ್ತದ ಬಿಲ್ಗಳನ್ನು ಮಂಡಳಿಗೆ ಸಲ್ಲಿಸಿದ್ದು, ಅದರಲ್ಲಿ 6.4 ಕೋಟಿ ರೂ.ಗಳ ಮೊತ್ತದ ಬಿಲ್ ಅನುಮೋದನೆಯಾಗಿದೆ. ಇನ್ನೂ 14.35 ಕೋಟಿ ರೂ.ಗಳ ಬಿಲ್ಗಳು ಮಂಡಳಿಯಲ್ಲಿ ಬಾಕಿ ಇರುತ್ತದೆ. ಬಾಕಿ ಇರುವ ಮತ್ತು ಅನುಮೋದನೆಯಾದ ಮೊತ್ತ ಸೇರಿ ಶೇ.73 ರಷ್ಟು ಸಾಧನೆಯಾಗಿರುತ್ತದೆ ಎಂದು ಸಂಬಂಧಿಸಿದ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಪ್ರಸ್ತುತ ಮಾಹೆ ಮತ್ತು ವಾರ್ಷಿಕ ಗುರಿಗೆ ತಕ್ಕಂತೆ ಗುರಿ ಸಾಧಿಸಿ ಇನ್ನೂ ಬಾಕಿ ಉಳಿದ ಮೊತ್ತಗಳ ಬಿಲ್ಗಳನ್ನು ಕೂಡಲೇ ಸಲ್ಲಿಸಿ ಶೇ.100 ರಷ್ಟು ಸಾಧನೆ ಮಾಡಲು ಜಿಲ್ಲೆಯ ಎಲ್ಲಾ ಅನುಷ್ಠಾನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಕೆಕೆಆರ್ಡಿಬಿ ತಾಂತ್ರಿಕ ಸಲಹೆಗಾರ ಸಂಗಮೇಶ ಗುಬ್ಬೇವಾಡ ನಿರ್ಮಿತಿ ಕೇಂದ್ರದ ಅಧಿಕಾರಿ ಕಿರಣಕುಮಾರ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ