ಸಚಿವ ಶ್ರೀರಾಮುಲು ಹೇಳಿಕೆಗೆ ಖಂಡನೆ
ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ್ಗೆ ಸೋಮವಾರ ಮನವಿ ಸಲ್ಲಿಸಲಾಯಿತು
Team Udayavani, Mar 16, 2021, 7:15 PM IST
ಗುರುಮಠಕಲ್ : ನ್ಯಾ| ಸದಾಶಿವ ಆಯೋಗದ ವರದಿ ಜಾರಿಗೊಳಿಸುವುದಾಗಿ ಭರವಸೆ ಕೊಟ್ಟಿರುವ ಸಚಿವ ಶ್ರೀರಾಮುಲು ಹೇಳಿಕೆ ಖಂಡಿಸಿ ಮತ್ತು ವರದಿ ಜಾರಿಗೊಳಿಸದಂತೆ ಆಗ್ರಹಿಸಿ ತಾಲೂಕಿನ ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ್ಗೆ ಸೋಮವಾರ ಮನವಿ ಸಲ್ಲಿಸಲಾಯಿತು.
ಪಟ್ಟಣದ ಕನಕ ವೃತ್ತದಿಂದ ಬಸ್ ನಿಲ್ದಾಣ ಮುಖ್ಯ ರಸ್ತೆ ಮೂಲಕ ಬಸವೇಶ್ವರ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮಾಡಿ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಯಿತು. ತಾಲೂಕು ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ಸುರೇಶ ರಾಠೊಡ್ ಮಾತನಾಡಿ, ಸಚಿವ ಶ್ರೀರಾಮುಲು ನ್ಯಾ| ಸದಾಶಿವ ವರದಿ ಜಾರಿಗೆ ತರುತ್ತೇವೆ ಎಂದಿದ್ದು, ಇದರಿಂದ ಚಲವಾದಿ, ಲಂಬಾಣಿ, ಕೊರಚ ಮತ್ತು ಕೊರಮ ಬಂಜಾರಾ ಮುಂತಾದ ಸಮುದಾಯಕ್ಕೆ ನೋವಾಗಿದೆ.
ಈ ಕೂಡಲೇ ಅವರು ಸಮುದಾಯಕ್ಕೆ ಕ್ಷಮೆ ಕೇಳಬೇಕು. ತಮ್ಮ ಹೇಳಿಕೆ ಹಿಂಪಡೆಯುವಂತೆ ಆಗ್ರಹಿಸಿದರು. ಈ ವೇಳೆ ಸಮಾಜದ ಪ್ರಧಾನ ಕಾರ್ಯದರ್ಶಿ ಮೊನಪ್ಪ ರಾಠೊಡ್, ಪರಶುರಾಮ ಚವ್ಹಾಣ, ಪ್ರೇಮ್ ಕುಮಾರ, ರಾಜು ಚವ್ಹಾಣ, ಮೇಘನಾಥ, ಗೋಪಾಲ, ಜಮುಲನಾಯಕ್, ಲಕ್ಷ್ಮಿ ಬಾಯಿ, ಕಾಶಿಬಾಯಿ ರಾಠೊಡ್, ವಿ.ಕೆ. ನಾಯಕ್, ಎಚ್.ನಾಯಕ, ತುಳಸಿರಾಮ್, ಲಕ್ಷ್ಮಿ ಬಾಯಿ ಜಾಧವ್, ಶಿವುಕುಮಾರ, ಸುಶೀಲಾಬಾಯಿ, ಶಾನಿಬಾಯಿ, ಶರಣಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ