ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ
Team Udayavani, Dec 27, 2021, 3:30 PM IST
ನಾರಾಯಣಪುರ: ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ಯಣ್ಣಿವಡಗೇರಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಾದ ಬಸವರಾಜ ಮತ್ತು ಮಲ್ಲನಗೌಡ ಅವರನ್ನು ಶಾಲೆ ವತಿಯಿಂದ ಅಭಿನಂದಿಸಲಾಯಿತು.
ಮುಖ್ಯಗುರು ಸಂಗಯ್ಯ ಬಿಕ್ಷಾವತಿಮಠ ಮಾತನಾಡಿ, ರಾಷ್ಟ್ರೀಯ ಮತದಾರರ ದಿನಾಚರಣೆ ನಿಮಿತ್ತ ಯಾದಗಿರಿಯಲ್ಲಿ ನಡೆದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಯಣ್ಣಿವಡಗೇರಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು ಕೀರ್ತಿ ತಂದಿದ್ದಾರೆ. ಸರ್ಧಾತ್ಮಕ ಯುಗದಲ್ಲಿ ಪಠ್ಯ ಚಟುವಟಿಕೆಯಲ್ಲಿ ಉತ್ತಮ ಅಂಕ ಗಳಿಸುವ ಜತೆಗೆ ಸಾಮಾನ್ಯ ಜ್ಞಾನದ ಅವಶ್ಯಕತೆ ಇದ್ದು, ಇಂತಹ ರಸಪ್ರಶ್ನೆ ಸ್ಪರ್ಧೆಗಳು ಸಹಕಾರಿಯಾಗಿವೆ ಎಂದರು.
ಈ ವೇಳೆ ಎಸ್ಡಿಎಂಸಿ ಅಧ್ಯಕ್ಷ ಹಣಮಂತ ಪೂಜಾರಿ, ಶಿಕ್ಷಕರಾದ ಪ್ರಕಾಶ ದಿಡ್ಡಿಮನಿ, ಮಂಜುನಾಥ, ಶರಣಪ್ಪ, ಸಂಜೀವಕುಮಾರ, ಬಸವರಾಜ, ವೆಂಕಟೇಶ, ನೀಲಮ್ಮ, ಭೀಮಾಶಂಕರ ಇತರರಿದ್ದರು.
ಜೋಗುಂಡಭಾವಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿಯರಾದ ಗಂಗಮ್ಮ ಜಗದೀಶ ಗುರಿಕಾರ, ರಕ್ಷಿತಾ ಗುರುಪಾದಪ್ಪ ಸಜ್ಜನ್ ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಮುಖ್ಯೋಪಾಧ್ಯಾಯ ಜಗದೇವ ಹುಲ್ಲೂರ ತಿಳಿಸಿದರು. ಈ ವೇಳೆ ಶಿಕ್ಷಕರಾದ ದೋಂಡಿಬಾ, ಗುಂಡಪ್ಪ ಕುರಿ, ಬಸಪ್ಪ ನಾಯ್ಕ, ಶ್ರೀಶೈಲ್, ವಿಜಯಾ, ಮಂಜುಳಾ, ಸವಿತಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ