ಕಾಂಗ್ರೆಸ್, ಬಿಜೆಪಿ ಕೈ ಬಿಟ್ಟು ಜೆಡಿಎಸ್ ಬೆಂಬಲಿಸಿ
Team Udayavani, Apr 30, 2018, 5:08 PM IST
ಸುರಪುರ: ಕ್ಷೇತ್ರದಲ್ಲಿ ಇದುವರೆಗೂ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳ ಆಡಳಿತ ನೋಡಿದ್ದೀರಿ. ಇವರ್ಯಾರು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿಲ್ಲ. ಕ್ಷೇತ್ರದ ಅಭಿವೃದ್ಧಿಗಾಗಿ ನನ್ನನ್ನು ಬೆಂಬಲಿಸಿ ಎಂದು ಜೆಡಿಎಸ್ ಅಭ್ಯರ್ಥಿ ರಾಜಾ ಕೃಷ್ಣಪ್ಪ ನಾಯಕ ಮನವಿ ಮಾಡಿದರು.
ತಾಲೂಕಿನ ಮಂಜಲಾಪುರ ಗ್ರಾಮದಲ್ಲಿ ಭಾನುವಾರ ನಡೆದ ಪ್ರಚಾರ ಸಭೆಯಲ್ಲಿ ಮತಯಾಚನೆ ಮಾಡಿದ ಅವರು, ಶಾಸಕ ರಾಜಾ ವೆಂಕಟಪ್ಪ ನಾಯಕ ಮತ್ತು ರಾಜುಗೌಡ ಪರಸ್ಪರ ಆರೋಪ ಮಾಡುತ್ತಾ ಕಾಲ ಕಳೆದು ಕ್ಷೇತ್ರದ ಅಭಿವೃದ್ಧಿ ಮರೆತ್ತಿದ್ದಾರೆ. ಆದ್ದರಿಂದ ನಾನು ಪ್ರಥಮ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದಿದ್ದೇನೆ. ಅಭಿವೃದ್ಧಿಗಾಗಿ ನನ್ನನ್ನ ಬೆಂಬಲಿಸಿ ಗೆಲ್ಲಿಸಿ ತರಬೇಕು ಎಂದು ಕೋರಿದರು.
ಈ ಹಿಂದೆ 20 ತಿಂಗಳ ಅಧಿಕಾರ ನಡೆಸಿದ ಕುಮಾರಣ್ಣನವರು ಉತ್ತಮ ಆಡಳಿತ ನೀಡಿದ್ದಾರೆ. ಮತ್ತೆ ಜೆಡಿಎಸ್ ಆಡಳಿತಕ್ಕಾಗಿ ಜನತೆ ಎದುರು ನೋಡುತ್ತಿದೆ. ಕುಮಾರಣ್ಣನನ್ನು ಮತ್ತೂಮ್ಮೆ ಮುಖ್ಯಮಂತ್ರಿಯನ್ನಾಗಿ ಮಾಡಲು ಜನತೆ ಸಿದ್ಧರಾಗಿದ್ದಾರೆ. ತಾವು ಕೂಡ ಜೆಡಿಎಸ್ ಬೆಂಬಲಿಸಬೇಕು ಎಂದು ವಿನಂತಿಸಿದರು.
ಪಕ್ಷದ ತಾಲೂಕು ಅಧ್ಯಕ್ಷ ಮಲ್ಲಯ್ಯ ಕಮತಗಿ, ಮುಖಂಡರಾದ ಭೀಮನಗೌಡ ಪಾಟೀಲ ಕಚಕನೂರ, ರಾಜಾ ವಾಸುದೇವ ನಾಯಕ, ರಾಜಾ ಲಕ್ಷ್ಮೀ ನಾರಾಯಣ ನಾಯಕ, ರಾಜಾ ಎಸ್. ಗೋಪಾಲ ನಾಯಕ, ಚಿರಂಜೀವಿ ನಾಯಕ ಇತರರಿದ್ದರು. ಇದೇ ವೇಳೆ ಗ್ರಾಮದ ಕೆಲವರು ರಾಜಾ ಕೃಷ್ಣಪ್ಪ ನಾಯಕ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!