ಯಾದಗಿರಿಯಲ್ಲಿ ಸೊರಗುತ್ತಿದೆ ಕಾಂಗ್ರೆಸ್‌

ಕಂದಕೂರು ಶಾಸಕರಾಗಿ ಆಯ್ಕೆಯಾಗಿದ್ದರಿಂದ ಕಾಂಗ್ರೆಸ್‌ನ ಭದ್ರಕೋಟೆ ಛಿದ್ರವಾಯಿತು.

Team Udayavani, Sep 6, 2021, 5:57 PM IST

ಯಾದಗಿರಿಯಲ್ಲಿ ಸೊರಗುತ್ತಿದೆ ಕಾಂಗ್ರೆಸ್‌

ಯಾದಗಿರಿ: ಜಿಲ್ಲೆಯ ಕಾಂಗ್ರೆಸ್‌ನಲ್ಲಿದ್ದ ಘಟಾನುಘಟಿ ನಾಯಕರು ಒಬ್ಬೊಬ್ಬರಾಗಿ ಪಕ್ಷ ಬಿಟ್ಟು ತೆರಳುತ್ತಿದ್ದು, ಜಿಲ್ಲೆಯ ಕಾಂಗ್ರೆಸ್‌ ಈಗ ನಾಯಕರಿಲ್ಲದ ಹಡಗಿನಂತಾಗುತ್ತಿದೆ. ಒಂದು ಕಾಲದಲ್ಲಿ ಯಾದಗಿರಿ ಜಿಲ್ಲೆ ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು. ಕಾಂಗ್ರೆಸ್‌ನಿಂದ ಆರಿಸಿ ಬಂದ ಹಲವು ನಾಯಕರು ಸಚಿವರಾಗಿ ಅಧಿಕಾರ ಸ್ವೀಕರಿಸಿ ಕಾಂಗ್ರೆಸ್‌ ಪಕ್ಷ ಕಟ್ಟಿ ಬೆಳೆಸಿದ್ದರು. ಆದರೀಗ ಜಿಲ್ಲೆಯ ಕಾಂಗ್ರೆಸ್‌ ಪಕ್ಷಕ್ಕೆ ನಾಯಕರೇ ಇಲ್ಲದಂತಾಗಿದೆ.

ಹಿಂದೆ ಕಾಂಗ್ರೆಸ್‌ ಪಕ್ಷ ಜಿಲ್ಲೆಯಲ್ಲಿ 3 ಮತಕ್ಷೇತ್ರಗಳನ್ನು ವಶಪಡಿಸಿಕೊಂಡಿತ್ತು. ಕಳೆದ ವಿಧಾನಸಭೆಯಲ್ಲಿ ಅದು ಸುಳ್ಳಾಗಿ ಬರೀ 1ಮತಕ್ಷೇತ್ರ ಪಡೆಯುವಲ್ಲಿ ಯಶಸ್ವಿಯಾಗಿತ್ತು. ಮುಂದಿನ ಚುನಾವಣೆಯಲ್ಲಿ 1ಮತಕ್ಷೇತ್ರವೂ ಕೈ ತಪ್ಪುವ ಲಕ್ಷಣಗಳು ಗೋಚರಿಸತೊಡಗಿವೆ. ಒಂದು ಕಾಲದಲ್ಲಿ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ನಗರಸಭೆ, ಪುರಸಭೆ, ಎಪಿಎಂಸಿಯಾದಿಯಾಗಿ ಹಲವು ಸಂಘ-ಸಂಸ್ಥೆ, ಗ್ರಾಮ ಪಂಚಾಯಿತಿಗಳಲ್ಲಿ ಕಾಂಗ್ರೆಸ್‌ ತನ್ನ ಅಧಿಪತ್ಯ ಮೆರೆದಿತ್ತು. ಬದಲಾದ ಕಾಲಘಟ್ಟದಲ್ಲಿ ಕಾಂಗ್ರೆಸ್‌ ತನ್ನ ಎಲ್ಲ ಕ್ಷೇತ್ರಗಳನ್ನು ಕಳೆದುಕೊಂಡಿದೆಯಲ್ಲದೇ ಕಾಂಗ್ರೆಸ್‌ ಕಚೇರಿಗಳಲ್ಲಿ ಅಧಿಕೃತ ಬೋರ್ಡ್‌ಗಳಲ್ಲಿ ಮಾತ್ರ ಕಾಂಗ್ರೆಸ್‌ ನಾಯಕರ ಹೆಸರುಗಳು ರಾರಾಜಿಸುತ್ತಿವೆ.

ಯಾದಗಿರಿ ಜಿಲ್ಲೆಯಲ್ಲಿ ಕಾಂಗ್ರೆಸ್‌ ದಿನೇ ದಿನೆ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತ ಸಾಗಿದೆ. ಮಾಜಿ ಸಚಿವರಾದ ಡಾ|ಎ.ಬಿ.ಮಾಲಕರೆಡ್ಡಿ, ಬಾಬುರಾವ್‌ ಚಿಂಚನಸೂರ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್‌ ತೊರೆದಿರುವುದು ಇದಕ್ಕೆ ಪುಷ್ಟೀಕರಿಸುವಂತಿದೆ. ಕಳೆದ 10 ವರ್ಷಗಳಿಂದ ಜಿಲ್ಲಾಧ್ಯಕ್ಷರನ್ನು ಕೂಡ ಬದಲಿಸುವಲ್ಲಿ ಕಾಂಗ್ರೆಸ್‌ ಮೀನಮೇಷ ಎಣಿಸುತ್ತಿರುವುದು ವಿಪರ್ಯಾಸವಾಗಿದೆ.

ದಶಕಗಳಿಂದ ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಗುರುಮಠಕಲ್‌ಕ್ಷೇತ್ರ ಕಾಂಗ್ರೆಸ್‌ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಪ್ರತಿನಿಧಿಸುತ್ತಿರುವಷ್ಟು ವರ್ಷ ಅದು ಕಾಂಗ್ರೆಸ್‌ ಭದ್ರಕೋಟೆಯಾಗಿತ್ತು. ತದ ನಂತರ ಬಾಬುರಾವ್‌ ಚಿಂಚನಸೂರ ಕಾಂಗ್ರೆಸ್‌ನ ಅಭ್ಯರ್ಥಿಯಾಗಿ ಎರಡು ಬಾರಿ ಆಯ್ಕೆಯಾಗಿ ಸಚಿವರು ಕೂಡ ಆಗಿದ್ದರು. ಕಳೆದ ಚುನಾವಣೆಯಲ್ಲಿ ನಡೆದ ಹಲವು ಘಟನೆಗಳಿಂದ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಗುರುಮಠಕಲ್‌ ಕ್ಷೇತ್ರದಲ್ಲಿ ಜೆಡಿಎಸ್‌ನ ಹೊಡೆತಕ್ಕೆ ತತ್ತರಿಸಿ ನಾಗನಗೌಡ ಕಂದಕೂರು ಶಾಸಕರಾಗಿ ಆಯ್ಕೆಯಾಗಿದ್ದರಿಂದ ಕಾಂಗ್ರೆಸ್‌ನ ಭದ್ರಕೋಟೆ ಛಿದ್ರವಾಯಿತು.

ಇನ್ನು ಯಾದಗಿರಿ ಮತಕ್ಷೇತ್ರವು ಒಂದು ಕಾಲದಲ್ಲಿ ಕಾಂಗ್ರೆಸ್‌ನ ಭದ್ರಕೋಟೆಯಂತಿತ್ತು. ಕೆಲವು ಸಲ ಮಾತ್ರ ಒಂದೊಂದು ಸಾರಿ ಮಾತ್ರ ಬೇರೆ ಪಕ್ಷದವರು ಶಾಸಕರಾಗಿ ಆಯ್ಕೆಯಾಗಿದ್ದು ಬಿಟ್ಟರೆ ಹಲವು ಬಾರಿ ಕಾಂಗ್ರೆಸ್‌ನ ಹಿರಿಯ ನಾಯಕ ಡಾ|ಮಾಲಕರೆಡ್ಡಿ ಆಯ್ಕೆಯಾಗಿದ್ದರು ಇಲ್ಲಿಯೂ ಕೂಡ ಕಳೆದ ಚುನಾವಣೆಯಲ್ಲಿ ನಡೆದ ರಾಜಕೀಯ ನಡೆಯಲ್ಲಿ ಕಾಂಗ್ರೆಸ್‌ನ ಡಾ|ಮಾಲಕರೆಡ್ಡಿ ಸೋಲು ಕಂಡು ರಾಜಕೀಯ ನಿವೃತ್ತಿ ಘೋಷಣೆ ಮಾಡುವ ಹಂತಕ್ಕೆ ತಲುಪಿ ನಂತರ ಅವರು ಬಿಜೆಪಿ ಸೇರ್ಪಡೆಯಾಗಿರುವುದು ಕೂಡ ಇತಿಹಾಸವಾಗಿದೆ.

ಶಹಾಪುರಕ್ಕೆ ಶರಣಬಸಪ್ಪ ದರ್ಶನಾಪುರ, ಸುರಪುರಕ್ಕೆ ರಾಜಾ ವೆಂಕಟಪ್ಪ ನಾಯಕರೇ ಅನಿವಾರ್ಯ. ಸೋಲು ಗೆಲುವಿನ ಲೆಕ್ಕಾಚಾರಕ್ಕೆ ಹೋಲಿಸಿದರೆ ದರ್ಶನಾಪುರ ತಮ್ಮ ಬೆಂಬಲಿಗರೊಂದಿಗೆ ಪಕ್ಷ ಜೀವಂತವಿಡುವಲ್ಲಿ ಶ್ರಮಿಸುತ್ತಿದ್ದಾರೆ. ಆದರೆ ಸುರಪುರದಲ್ಲಿ ಹಾಲಿ ಶಾಸಕ ರಾಜುಗೌಡರ ದರ್ಬಾರ್‌ದಲ್ಲಿ ಕಾಂಗ್ರೆಸ್‌ ಸಂಘಟನಾತ್ಮಕವಾಗಿ ತೀರಾ ಹಿಂದುಳಿದಿದೆ. ಪಕ್ಷ ಸಂಘಟನೆ ವಿಷಯಕ್ಕೆ ಬಂದರೆ ಯಾದಗಿರಿ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯಕರ್ತರೇ ಪಕ್ಷ ಮುನ್ನಡೆಸುವಂತಾಗಿದ್ದು, ನಾಯಕರ್ಯಾರು ತಲೆ ಕೆಡಿಸಿಕೊಳ್ಳದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

*ಮಹೇಶ ಕಲಾಲ

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.