ತರಕಾರಿ-ಕಲ್ಲಂಗಡಿ ಬೆಳೆದ ರೈತನಿಗೆ ಆರ್ಥಿಕ ಸಂಕಷ್ಟ


Team Udayavani, Apr 5, 2020, 5:37 PM IST

ತರಕಾರಿ-ಕಲ್ಲಂಗಡಿ ಬೆಳೆದ ರೈತನಿಗೆ ಆರ್ಥಿಕ ಸಂಕಷ್ಟ

ಯಾದಗಿರಿ: ವಿಶ್ವದೆಲ್ಲೆಡೆ ತಲ್ಲಣ ಸೃಷ್ಟಿಸಿರುವ ಕೋವಿಡ್ 19 ರೈತರನ್ನು ಆತಂಕಕ್ಕೆ ದೂಡಿದೆ. ಜಿಲ್ಲೆಯ ಹಲವೆಡೆ ರೈತರು ತೋಟಗಾರಿಕೆ ಬೆಳೆ, ಹಣ್ಣುಗಳನ್ನು ಬೆಳೆದಿದ್ದು, ಇಡೀ ದೇಶವೇ ಲಾಕ್‌ ಡೌನ್‌ ಆಗಿರುವುದರಿಂದ ಬೆಳೆಯನ್ನು ಸಾರಿಗೆ  ಸೌಕರ್ಯವಿಲ್ಲದೇ ಸಾಗಿಸಲಾಗದೇ ತೀವ್ರ ಹಾನಿ ಅನುಭವಿಸುವಂತಾಗಿದೆ.

ರೈತರು ಬೆಳೆದ ಬೆಳೆ ಕಟಾವಿಗೆ ಬಂದಿದ್ದರೂ ಅದಕ್ಕೆ ಮಾರುಕಟ್ಟೆ ವ್ಯವಸ್ಥೆ ಇಲ್ಲದ್ದರಿಂದ ಸಮಸ್ಯೆಯಾಗಿದೆ. ಅದರಲ್ಲೂ ವಿಶೇಷವಾಗಿ ತರಕಾರಿ, ಕಾಯಿಪಲ್ಲೆಗಳಾದ ಬೆಂಡೆ, ಚವಳಿಕಾಯಿ, ಪಾಲಕ, ಬದನೆಕಾಯಿ, ಹೀರೆಕಾಯಿ, ಸವತೆಕಾಯಿ, ಟೊಮೊಟೊ ಸೇರಿದಂತೆ ಎಲ್ಲವೂ ಕೊಳೆತು ಹೋಗಿ ಹಾಳಾಗಿವೆ. ಮಾರಾಟ ಮಾಡಲೂ ಆಗದೇ ತಿಪ್ಪೆಗೆ ಚೆಲ್ಲುವಪರಿಸ್ಥಿತಿ ನಿರ್ಮಾಣವಾಗಿದೆ. ಗುರುಮಠಕಲ್‌ ತಾಲೂಕಿನ ಅರಕೇರಾ ಕೆ. ಗ್ರಾಮದ ತಾಯಪ್ಪ ಸಿದ್ದಣ್ಣ ಪೂಜಾರಿ ತಮ್ಮ 6 ಎಕರೆ ತೋಟದಲ್ಲಿ ತೋಟಗಾರಿಕೆ ಹಾಗೂ ತರಕಾರಿ ಬೆಳೆ ಬೆಳೆದಿದ್ದು, ಎಲ್ಲ ಅರ್ಧ ತರಕಾರಿ ಕೊಳೆತು ಹೋಗಿದೆ. ಇನ್ನರ್ಧ ಕೇಳುವವರಿಲ್ಲ. ಸುಮಾರು 3.5 ಲಕ್ಷ ರೂ. ಖರ್ಚು ಮಾಡಿದ ರೈತ ಕಂಗಾಲಾಗುವಂತಾಗಿದೆ.

ಇನ್ನೊಂದೆಡೆ ಕಲ್ಲಂಗಡಿ ಬೆಳೆದ ರೈತರಿಗೂ ಈ ಆತಂಕದಿಂದ ಹೊರತಾಗಿಲ್ಲ. ವಡಗೇರಾ ತಾಲೂಕಿನ ಕಾಡಂಗೇರಾ(ಬಿ) ಗ್ರಾಮದ ಶಂಕರ ಬಂಡಿ ಸೀಮೆಯಲ್ಲಿ ಸರ್ವೇ ನಂ.25ರಲ್ಲಿ ಮಲ್ಲಪ್ಪ ಪುರಿ ತನ್ನ 2.32 ಎಕರೆಯಲ್ಲಿ ಬೆಳೆದಿದ್ದ ಕಲ್ಲಂಗಡಿ ಕಟಾವಿಗೆ ಬಂದು ರೈತನಿಗೆ ಕೈ ತುಂಬ ಹಣ ನೀಡಬೇಕಿತ್ತು. ಆದರೆ ಕೈ ಖಾಲಿ ಮಾಡಿ ಚಿಂತೆಗೀಡು ಮಾಡಿದೆ.

ಬೆಳೆಯನ್ನು ಮಾರುಕಟ್ಟೆಗೆ ಸಾಗಿಸಲಾರದೆ ಹೊಲದಲ್ಲಿ ಬಿಸಿಲಿಗೆ ಬಿದ್ದು ಸುಟ್ಟು ಹೋಗಿದ್ದು, ಲಕ್ಷಾಂತರ ರೂ. ಖರ್ಚು ಮಾಡಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು ನಷ್ಟದಿಂದ ಸಾಲದ ಸುಳಿಗೆ ಸಿಕ್ಕಿ ಬದುಕು ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಬೆಳೆದ ಫಸಲು ಮಾರಾಟಕ್ಕೆ ತೆಗೆದುಕೊಂಡು ಹೋಗುವುದಕ್ಕೆ ವ್ಯಾಪಾರಿಗಳು ಬರುತ್ತಿಲ್ಲ. ರೈತರಾದರೂ ತೆಗೆದುಕೊಂಡು ಹೋಗಬೇಕೆಂದರೆ ವಾಹನಗಳೂ ಸಂಚರಿಸುತ್ತಿಲ್ಲ. ಹಾಗಾಗಿ ದಿಕ್ಕು ತೋಚದೇ ರೈತರು ಕಂಗಾಲಾಗಿದ್ದಾರೆ. ಇಂಥ ಕಠಿಣ ಪರಿಸ್ಥಿತಿಯಲ್ಲಿ ಸರ್ಕಾರ ರೈತರ ನೆರವಿಗೆ ಬರಬೇಕಾಗಿದೆ ಎಂದು ರೈತ ಮಹಿಳಾ ಮುಖಂಡರಾದ ನಾಗರತ್ನ ಪಾಟೀಲ ಒತ್ತಾಯಿಸಿದ್ದಾರೆ.

ರೈತರಿಗೆ ಪರಿಹಾರ ನೀಡಲು ಸರ್ಕಾರ ಮುಂದಾಗಬೇಕು ಎಂದು ಜಯ ಕರ್ನಾಟಕ ಸಂಘಟನೆಯ ಗುರುಮಠಕಲ್‌ ತಾಲೂಕು ಸಮಿತಿ ಒತ್ತಾಯಿಸಿದೆ. ತೋಟಗಾರಿಕೆ ಸಹಾಯಕ ನಿರ್ದೇಶಕರಿಗೆ ಮನವಿ ಸಲ್ಲಿಸಿದ ಕಾರ್ಯಕರ್ತರು ದೇಶಾದ್ಯಂತ ಬೀಗಮುದ್ರ ಸ್ಥಿತಿ ಇರುವ ಹಿನ್ನೆಲೆಯಲ್ಲಿ ದೇಶದ ಜನತೆಗೆ ಸಂಕಷ್ಟ ಎದುರಾಗಿದ್ದು ಅದರಲ್ಲೂ ರೈತರಿಗೆ ಇನ್ನಿಲ್ಲದ ಸಮಸ್ಯೆಯಾಗಿದೆ. ಕೊನೆಗೆ ವಿಧಿಯಿಲ್ಲದೇ ತಮ್ಮ ಹೊಲದಲ್ಲಿ ಬೆಳೆದ ಬೆಳೆಯನ್ನು ಟ್ರ್ಯಾಕ್ಟರ್‌ನಿಂದ ಅರಗುತ್ತಿರುವ ರೈತನ ನೆರವಿಗೆ ಸರ್ಕಾರ ತಕ್ಷಣ ಬರಬೇಕು. ರೈತರಿಗೆ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ತಾಲೂಕು ಅಧ್ಯಕ್ಷ ನಾಗೇಂದ್ರ ಗದ್ದಿಗಿ ಆಗ್ರಹಿಸಿದ್ದಾರೆ.

ಬೆಳೆಗೆ ಪ್ರತಿ ಎಕರೆಗೆ 20 ರಿಂದ 30 ಸಾವಿರ ರೂ. ಖರ್ಚು ಮಾಡಿದ್ದೇವೆ. ಎಕರೆಗೆ ಒಂದೂವರೆ ಲಕ್ಷ ರೂ. ಲಾಭದ ನಿರೀಕ್ಷೆಯಿತ್ತು. ಮಹಾಮಾರಿ ಕೊರೊನಾ ನಮ್ಮ ಬದುಕು ದುಸ್ಥರಗೊಳಿಸಿದೆ. ಕೈಯಿಂದ ಖರ್ಚು ಮಾಡಿದ್ದಕ್ಕೆ ಒಂದು ರೂಪಾಯಿಯೂ ಕೈಗೆ ಬಾರದಿರುವುದು ಸಾಕಷ್ಟು ಆರ್ಥಿಕ ಹೊರ ಮಾಡಿದೆ. ಸರ್ಕಾರ ನಮಗೆ ಸೂಕ್ತ ಪರಿಹಾರ ನೀಡಬೇಕು. -ಹುಚ್ಚಪ್ಪ ಪುರಿಲಿಂಗಪ್ಪನೋರ್‌, ರೈತ.

 

-ಅನೀಲ ಬಸೂದೆ.

ಟಾಪ್ ನ್ಯೂಸ್

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.